ಇಂಟರ್‌ನೆಟ್‌ ಸೌಲಭ್ಯ ಗ್ರಾಪಂಗಳಿಗೆ ಕಲ್ಪಿಸಿ: ಸಿದ್ದೇಶ್ವರ್‌


Team Udayavani, Sep 16, 2017, 3:14 PM IST

siddeshwar-123.jpg

ಚಿತ್ರದುರ್ಗ: ಡಿಜಿಟಲ್‌ ಇಂಡಿಯಾದಡಿ ಎಲ್ಲ ಗ್ರಾಪಂಗಳಲ್ಲಿ ಇಂಟರ್‌ನೆಟ್‌ ಸೌಲಭ್ಯ ಕಲ್ಪಿಸುವ ಮೂಲಕ ಮಾಹಿತಿ ತಂತ್ರಜ್ಞಾನದ ಲಾಭವನ್ನು ಎಲ್ಲರಿಗೂ ತಲುಪಿಸಬೇಕೆನ್ನುವ ಗುರಿ ಪ್ರಧಾನಮಂತ್ರಿಗಳದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಗ್ರಾಪಂಗಳಿಗೂ ಇಂಟರ್‌ ನೆಟ್‌ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್‌ ತಿಳಿಸಿದರು.

ಚಿತ್ರದುರ್ಗ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ದಾವಣಗೆರೆ ಟೆಲಿಕಾಂ ವಿಭಾಗದ ಬಿಎಸ್ಸೆನ್ನೆಲ್‌ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಡಿಜಿಟಲ್‌ ಇಂಡಿಯಾ ಕನಸು ಪ್ರಧಾನಮಂತ್ರಿಗಳದ್ದಾಗಿದೆ. ಇದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬಿಎಸ್ಸೆನ್ನೆಲ್‌ ಅಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ನಂಬಿರುವೆ. ಎಲ್ಲ ಗ್ರಾಪಂಗಳಲ್ಲಿ ಇಂಟರ್‌ನೆಟ್‌ ಸೌಲಭ್ಯಗಳಿರಬೇಕು.
ಅನೇಕ ಗ್ರಾಪಂಗಳಲ್ಲಿ ಇಂಟರ್‌ನೆಟ್‌ ಸೌಲಭ್ಯಗಳಿಲ್ಲದೆ ತೊಂದರೆಯಾಗಿದೆ. ಆದ್ದರಿಂದ ಸಂಸದರಿಂದಾಗಬೇಕಾದ
ಕೆಲಸಗಳಿದ್ದಲ್ಲಿ ವಿವರ ನೀಡಬೇಕು ಎಂದು ತಿಳಿಸಿದರು.

ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಕಡೆ ಟವರ್‌ ಸ್ಥಾಪಿಸಲು ಈಗಾಗಲೇ ಪಟ್ಟಿಯನ್ನು ನೀಡಲಾಗಿದೆ. ಹೊನ್ನಾಳಿ ತಾಲೂಕಿನ ಹನುಮನಹಳ್ಳಿ, ಕೆಂಗನಹಳ್ಳಿ, ಫಲವ್ವನಹಳ್ಳಿ, ಚನ್ನಗಿರಿ ತಾಲೂಕಿನ ಕಗತೂರು, ಗುಡ್ಡದಕೊಮ್ಮಾರನಹಳ್ಳಿ, ದೊಡ್ಡಬ್ಬಿಗೆರೆ ಸೇರಿದಂತೆ ಹೊಳಲ್ಕೆರೆ ತಾಲೂಕಿನ ಹಿರೇಕಂದವಾಡಿ ಹಾಗೂ ತಣಿಗೆಹಳ್ಳಿಯಲ್ಲಿ ಟವರ್‌ ಹಾಕಲು ಮನವಿ ಮಾಡಲಾಗಿದೆ ಎಂದರು. 

ಚಿತ್ರದುರ್ಗ ಸಂಸದ ಬಿ.ಎನ್‌. ಚಂದ್ರಪ್ಪ ಮಾತನಾಡಿ, ಚಿತ್ರದುರ್ಗ ಜಿಲ್ಲೆಯ ಎಲ್ಲ ಕಡೆ ದೂರವಾಣಿ ಸಂಪರ್ಕ ಸಿಗುವಂತೆ ನೋಡಿಕೊಳ್ಳಬೇಕು. ಹೊಳಲ್ಕೆರೆ ತಾಲೂಕಿನ ಹಂದನೂರು ಗ್ರಾಮದಲ್ಲಿ ಇಂಟರ್‌ನೆಟ್‌ ಸಮಸ್ಯೆ ಇದೆ ಹಾಗೂ ಚಿತ್ರದುರ್ಗ ತಾಲೂಕಿನ ಗುಡ್ಡದರಂಗವ್ವನಹಳ್ಳಿ, ಮಾಡನಾಯಕನ ಹಳ್ಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ 13 ರ ಕಾಮಗಾರಿ ನಡೆಯುತ್ತಿರುವುದರಿಂದ ಇಂಟರ್‌ನೆಟ್‌ ಸೌಲಭ್ಯ ನೀಡಲು ಸಾಧ್ಯವಾಗದಿರುವುದರಿಂದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಇತ್ಯರ್ಥ ಮಾಡಿಕೊಂಡು ಇಂಟರ್‌ನೆಟ್‌ ಸೌಲಭ್ಯ ನೀಡಲು ಅಧಿಕಾರಿಗಳಿಗೆ ತಿಳಿಸಿದರು.

ಬಿಎಸ್ಸೆನ್ನೆಲ್‌ ದಾವಣಗೆರೆ ಪ್ರಧಾನ ಮಹಾ ಪ್ರಬಂಧಕ ವಿವೇಕ್‌ ಜಯಸ್ವಾಲ್‌, ಡಿಜಿಎಂ ನರಸಿಂಹಪ್ಪ, ಚಿತ್ರದುರ್ಗದ ಪ್ರಭಾರ ಅಧಿಕಾರಿ ಹನುಮಂತಪ್ಪ ಬಜ್ಜಾರಿ, ಸಲಹಾ ಸಮಿತಿ ಸದಸ್ಯರಾದ ಹೇಮಂತಕುಮಾರ್‌, ಅಬ್ದುಲ್‌ ರೆಹಮಾನ್‌, ಬಸವರಾಜ್‌, ಶಿವಕುಮಾರಯ್ಯ, ರವೀಂದ್ರನಾಥ್‌, ಮಹಮದ್‌, ಮೈಲಾರಪ್ಪ, ಪ್ರಸನ್ನ ಕುಮಾರ್‌, ಬಸವರಾಜಪ್ಪ. ವಿವಿಧ ವಿಭಾಗದ ಬಿಎಸ್ಸೆನ್ನೆಲ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.