ಇಂಟರ್‌ನೆಟ್‌ ಸೌಲಭ್ಯ ಗ್ರಾಪಂಗಳಿಗೆ ಕಲ್ಪಿಸಿ: ಸಿದ್ದೇಶ್ವರ್‌


Team Udayavani, Sep 16, 2017, 3:14 PM IST

siddeshwar-123.jpg

ಚಿತ್ರದುರ್ಗ: ಡಿಜಿಟಲ್‌ ಇಂಡಿಯಾದಡಿ ಎಲ್ಲ ಗ್ರಾಪಂಗಳಲ್ಲಿ ಇಂಟರ್‌ನೆಟ್‌ ಸೌಲಭ್ಯ ಕಲ್ಪಿಸುವ ಮೂಲಕ ಮಾಹಿತಿ ತಂತ್ರಜ್ಞಾನದ ಲಾಭವನ್ನು ಎಲ್ಲರಿಗೂ ತಲುಪಿಸಬೇಕೆನ್ನುವ ಗುರಿ ಪ್ರಧಾನಮಂತ್ರಿಗಳದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಗ್ರಾಪಂಗಳಿಗೂ ಇಂಟರ್‌ ನೆಟ್‌ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್‌ ತಿಳಿಸಿದರು.

ಚಿತ್ರದುರ್ಗ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ದಾವಣಗೆರೆ ಟೆಲಿಕಾಂ ವಿಭಾಗದ ಬಿಎಸ್ಸೆನ್ನೆಲ್‌ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಡಿಜಿಟಲ್‌ ಇಂಡಿಯಾ ಕನಸು ಪ್ರಧಾನಮಂತ್ರಿಗಳದ್ದಾಗಿದೆ. ಇದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬಿಎಸ್ಸೆನ್ನೆಲ್‌ ಅಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ನಂಬಿರುವೆ. ಎಲ್ಲ ಗ್ರಾಪಂಗಳಲ್ಲಿ ಇಂಟರ್‌ನೆಟ್‌ ಸೌಲಭ್ಯಗಳಿರಬೇಕು.
ಅನೇಕ ಗ್ರಾಪಂಗಳಲ್ಲಿ ಇಂಟರ್‌ನೆಟ್‌ ಸೌಲಭ್ಯಗಳಿಲ್ಲದೆ ತೊಂದರೆಯಾಗಿದೆ. ಆದ್ದರಿಂದ ಸಂಸದರಿಂದಾಗಬೇಕಾದ
ಕೆಲಸಗಳಿದ್ದಲ್ಲಿ ವಿವರ ನೀಡಬೇಕು ಎಂದು ತಿಳಿಸಿದರು.

ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಕಡೆ ಟವರ್‌ ಸ್ಥಾಪಿಸಲು ಈಗಾಗಲೇ ಪಟ್ಟಿಯನ್ನು ನೀಡಲಾಗಿದೆ. ಹೊನ್ನಾಳಿ ತಾಲೂಕಿನ ಹನುಮನಹಳ್ಳಿ, ಕೆಂಗನಹಳ್ಳಿ, ಫಲವ್ವನಹಳ್ಳಿ, ಚನ್ನಗಿರಿ ತಾಲೂಕಿನ ಕಗತೂರು, ಗುಡ್ಡದಕೊಮ್ಮಾರನಹಳ್ಳಿ, ದೊಡ್ಡಬ್ಬಿಗೆರೆ ಸೇರಿದಂತೆ ಹೊಳಲ್ಕೆರೆ ತಾಲೂಕಿನ ಹಿರೇಕಂದವಾಡಿ ಹಾಗೂ ತಣಿಗೆಹಳ್ಳಿಯಲ್ಲಿ ಟವರ್‌ ಹಾಕಲು ಮನವಿ ಮಾಡಲಾಗಿದೆ ಎಂದರು. 

ಚಿತ್ರದುರ್ಗ ಸಂಸದ ಬಿ.ಎನ್‌. ಚಂದ್ರಪ್ಪ ಮಾತನಾಡಿ, ಚಿತ್ರದುರ್ಗ ಜಿಲ್ಲೆಯ ಎಲ್ಲ ಕಡೆ ದೂರವಾಣಿ ಸಂಪರ್ಕ ಸಿಗುವಂತೆ ನೋಡಿಕೊಳ್ಳಬೇಕು. ಹೊಳಲ್ಕೆರೆ ತಾಲೂಕಿನ ಹಂದನೂರು ಗ್ರಾಮದಲ್ಲಿ ಇಂಟರ್‌ನೆಟ್‌ ಸಮಸ್ಯೆ ಇದೆ ಹಾಗೂ ಚಿತ್ರದುರ್ಗ ತಾಲೂಕಿನ ಗುಡ್ಡದರಂಗವ್ವನಹಳ್ಳಿ, ಮಾಡನಾಯಕನ ಹಳ್ಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ 13 ರ ಕಾಮಗಾರಿ ನಡೆಯುತ್ತಿರುವುದರಿಂದ ಇಂಟರ್‌ನೆಟ್‌ ಸೌಲಭ್ಯ ನೀಡಲು ಸಾಧ್ಯವಾಗದಿರುವುದರಿಂದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಇತ್ಯರ್ಥ ಮಾಡಿಕೊಂಡು ಇಂಟರ್‌ನೆಟ್‌ ಸೌಲಭ್ಯ ನೀಡಲು ಅಧಿಕಾರಿಗಳಿಗೆ ತಿಳಿಸಿದರು.

ಬಿಎಸ್ಸೆನ್ನೆಲ್‌ ದಾವಣಗೆರೆ ಪ್ರಧಾನ ಮಹಾ ಪ್ರಬಂಧಕ ವಿವೇಕ್‌ ಜಯಸ್ವಾಲ್‌, ಡಿಜಿಎಂ ನರಸಿಂಹಪ್ಪ, ಚಿತ್ರದುರ್ಗದ ಪ್ರಭಾರ ಅಧಿಕಾರಿ ಹನುಮಂತಪ್ಪ ಬಜ್ಜಾರಿ, ಸಲಹಾ ಸಮಿತಿ ಸದಸ್ಯರಾದ ಹೇಮಂತಕುಮಾರ್‌, ಅಬ್ದುಲ್‌ ರೆಹಮಾನ್‌, ಬಸವರಾಜ್‌, ಶಿವಕುಮಾರಯ್ಯ, ರವೀಂದ್ರನಾಥ್‌, ಮಹಮದ್‌, ಮೈಲಾರಪ್ಪ, ಪ್ರಸನ್ನ ಕುಮಾರ್‌, ಬಸವರಾಜಪ್ಪ. ವಿವಿಧ ವಿಭಾಗದ ಬಿಎಸ್ಸೆನ್ನೆಲ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.