ಕೊನೆಗೂ ಸಿಕ್ಕಿತು ಸುದ್ದಿಗೋಷ್ಠಿಗೆ ಅನುಮತಿ


Team Udayavani, Nov 8, 2017, 5:51 PM IST

08-31.jpg

ಚಿತ್ರದುರ್ಗ: ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ನಗರದಲ್ಲಿ ನಡೆಸಲು ಉದ್ದೇಶಿಸಿದ್ದ ಕಪ್ಪುಪಟ್ಟಿ ಪ್ರತಿಭಟನೆ, ವಿಚಾರಗೋಷ್ಠಿಗೆ ನಿಷೇಧಾಜ್ಞೆ ಜಾರಿ ಮೂಲಕ ತಡೆಯೊಡ್ಡಲು ಜಿಲ್ಲಾಡಳಿತ ಯಶಸ್ವಿಯಾಯಿತು. ಆದರೆ ಜಿಲ್ಲಾಡಳಿತದ ನಿಲುವು ಪ್ರಶ್ನಿಸಿ ಬಿಜೆಪಿ ಮುಖಂಡರು ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿ ಸುದ್ದಿಗೋಷ್ಠಿ ನಡೆಸಲು ಅನುಮತಿ ಪಡೆದು
ಸಮಾಧಾನಪಟ್ಟುಕೊಂಡರು.

ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ, ಬಜರಂಗದಳ, ವಿಶ್ವ ಹಿಂದೂ ಪರಿಷತ್‌, ರಾಷ್ಟ್ರೀಯ ಸ್ವಯಂಸೇವಕ ಸಂಘ, ಟಿಪ್ಪು
ಜಯಂತಿ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಂಗಳವಾರ ಬೆಳಗ್ಗೆ 10:30ರಿಂದ 12:30 ಗಂಟೆವರೆಗೆ ನಗರದ ಸ್ಟೇಡಿಯಂ ರಸ್ತೆಯಲ್ಲಿರುವ ಜಿ.ಜಿ. ಕಲ್ಯಾಣಮಂಟಪದಲ್ಲಿ ವಿಚಾರಗೋಷ್ಠಿ ಆಯೋಜಿಸಲು ನಿರ್ಧರಿಲಾಗಿತ್ತು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ
ಬಾಯಿಗೆ ಕಪ್ಪುಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲು ಉದ್ದೇಶಿಸಲಾಗಿತ್ತು.
ಆದರೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಯವರು ನ. 7ರಿಂದ 10ರವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಹೋರಾಟ ಹತ್ತಿಕ್ಕುವ ಸಲುವಾಗಿಯೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್‌
.ಬಿ. ವಸ್ತ್ರಮಠ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರಿಗೆ ನೋಟಿಸ್‌ ಜಾರಿಗೊಳಿಸಿ ದರು. ಅಲ್ಲದೆ ಬುಧವಾರ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿ ವಿವರಣೆ ನೀಡುವಂತೆ ಆದೇಶಿಸಿದರು. 

ಸುದ್ದಿಗೋಷ್ಠಿಯನ್ನಷ್ಟೇ  ನಡೆಸಲು ಬಿಜೆಪಿಯವರಿಗೆ ಅನುಮತಿ ನೀಡಿ ವಿಚಾರಣೆ ಮುಂದೂಡಿದರು. ಸುದ್ದಿಗೋಷ್ಠಿ ನಡೆಸಲು ತೆರಳುತ್ತಿದ್ದ ಸಂಸದ ಪ್ರತಾಪ ಸಿಂಹ ಅವರನ್ನು ನ್ಯಾಯಾಲಯದ ಆವರಣದಲ್ಲೇ ತಡೆದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ನ್ಯಾಯಾಲಯದ ಸೂಚನೆಯಂತೆ ಬಿಜೆಪಿ ಜಿಲ್ಲಾಧ್ಯಕ್ಷರು ಮಾತ್ರ ಸುದ್ದಿಗೋಷ್ಠಿ ನಡೆಸಬಹುದು ಎಂದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪ್ರತಾಪ ಸಿಂಹ ಮತ್ತಿತರರು ನಾವು ನಾಲ್ಕು ಜನ ಸುದ್ದಿಗೋಷ್ಠಿ ನಡೆಸುವುದಾಗಿ ಪಟ್ಟು ಹಿಡಿದರು. ಈ ಮಧ್ಯೆ ಬಿಜೆಪಿ ಪರ ವಕೀಲ ಉಮೇಶ್‌ ಪ್ರತಿಕ್ರಿಯೆ ನೀಡಲು ಮುಂದಾದರು. ಆಗ ಎಸ್ಪಿ, ಇದು ನ್ಯಾಯಾಲಯವಲ್ಲ, ನಾನು ನ್ಯಾಯಾಧೀಶನೂ ಅಲ್ಲ, ನೀವು ಮಾತನಾಡಬೇಡಿ,  ನಾನು ಮಾತನಾಡುತ್ತಿರುವುದು ಪ್ರತಾಒ ಸಿಂಹ ಅವರೊಟ್ಟಿಗೆ. ದಯವಿಟ್ಟು ನೀವು ಮೌನವಾಗಿರಿ ಎಂದು ತಾಕೀತು ಮಾಡಿದಾಗ ಉಮೇಶ್‌ ಸುಮ್ಮನಾದರು.

ಆದರೆ ಅಲ್ಲಿಯೇ ಇದ್ದ ಹಲವಾರು ವಕೀಲರು, ನಮ್ಮ ಕಕ್ಷಿದಾರರ ಪರವಾಗಿ ನಾವು ಪೊಲೀಸ್‌ ಠಾಣೆ, ಕಚೇರಿ, ನ್ಯಾಯಾಲಯ ಸೇರಿದಂತೆ ಎಲ್ಲಿ ಬೇಕಾದರೂ ಹೋಗಬಹುದು, ಮಾತನಾಡಬಹುದು, ಇದನ್ನು ಕೇಳಲು ನೀವ್ಯಾರು ಎಂದು ಆಕ್ರೋಶದಿಂದ ಪ್ರಶ್ನಿಸಿದರು. ಇದರಿಂದ  ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.  ಇಷ್ಟೆಲ್ಲ ನಡೆಯುತ್ತಿರುವಾಗ ಪೊಲೀಸ್‌ ಅಧಿಕಾರಿಗಳು ಜಿಲ್ಲಾಧಿಕಾರಿಯವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು ಎಂದು ತಿಳಿಸಿದ್ದರು. 

ಬಿಜೆಪಿ ಮುಖಂಡರ  ಪಟ್ಟಿಗೆ ಮಣಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಸುದ್ದಿಗೋಷ್ಠಿ ನಡೆಸಲು ಅವಕಾಶ ನೀಡಿದರು.
ಈ ಸಂದರ್ಭದಲ್ಲಿ ಎಎಸ್ಪಿ ಡಾ| ರಾಮ ಎಲ್‌. ಅರಸಿದ್ದಿ, ಡಿವೈಎಸ್ಪಿ ಲಕ್ಷ್ಮಣ ನಿಂಬರಗಿ, ಹಾವೇರಿ ಎಸ್ಪಿ ಪರಶುರಾಮ್‌
ಇದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.