ವಿದ್ಯಾರ್ಥಿಗಳಿಗೆ ಶಿಕ್ಷಕರೇ ಬಡಿಸಿದ್ರು ಬಿಸಿಯೂಟ!


Team Udayavani, Feb 9, 2018, 6:33 PM IST

4.jpg

ಚಿತ್ರದುರ್ಗ: ಸರ್ಕಾರಿ ಕಿರಿಯ, ಹಿರಿಯ ಪ್ರಾಥಮಿಕ ಶಾಲೆಗಳ ಮತ್ತು ಪ್ರೌಢಶಾಲೆಗಳ ಬಿಸಿಯೂಟ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲಸಕ್ಕೆ ಗೈರಾದ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲೆಯ ಕೆಲವು ಶಾಲೆಗಳಲ್ಲಿ ಶಿಕ್ಷಕರೇ ಬಿಸಿಯೂಟ ಸಿದ್ಧಪಡಿಸಿ ಮಕ್ಕಳಿಗೆ ಬಡಿಸಿದರು!

ಶಾಲಾ ಶಿಕ್ಷಕರೇ ಅಡುಗೆ ಮಾಡಲು ಸಿದ್ಧರಾಗಿದ್ದರಿಂದ ಜಿಲ್ಲೆಗೆ ಬಂದ್‌ ಬಿಸಿ ತಟ್ಟಿದಂತೆ ಕಾಣಲಿಲ್ಲ. ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕಿಯರು ಬಿಸಿಯೂಟ ಕೊಠಡಿಗೆ ಆಗಮಿಸಿ ಅಡುಗೆ ಮಾಡಿ ಬಡಿಸಿದರು. ಸುಮಾರು 530 ವಿದ್ಯಾರ್ಥಿನಿಯರಿರುವ ಈ ಶಾಲೆಯಲ್ಲಿ
ಬಿಸಿಯೂಟ ತಯಾರಿಸುವ ಐದು ಜನರು ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ತೆರಳಿದ್ದಾರೆ. ಶಿಕ್ಷಕಿಯರ ನಿರ್ಧಾರದಿಂದ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಯಾವುದೇ ತೊಂದರೆ ಎದುರಾಗಲಿಲ್ಲ. ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯಲ್ಲಿ ಜವಾನರ ಸಹಾಯ ಪಡೆದು ಶಿಕ್ಷಕರು ಅಡುಗೆ ಮಾಡಿ 300 ಮಕ್ಕಳಿಗೆ ಬಿಸಿಯೂಟ ಬಡಿಸಿದರು ಎಂದು ದೈಹಿಕ ಶಿಕ್ಷಕ ಮಂಜುನಾಥ ಆಚಾರ್‌ ತಿಳಿಸಿದರು. ಜಿಲ್ಲೆಯ ಹಲವು
ಶಾಲೆಗಳಲ್ಲಿ ಎಲ್ಲ ಬಿಸಿಯೂಟ ತಯಾರಕರು ಪ್ರತಿಭಟನೆಗೆ ಹೋಗದೇ ಒಬ್ಬರು, ಇಬ್ಬರು ಉಳಿದಿದ್ದಾರೆ. ಅಂತಹ ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಯಾವುದೇ ಸಮಸ್ಯೆ ಉದ್ಭವವಾಗಿಲ್ಲ. ನಗರದ ಕೋಟೆ ಪ್ರೌಢಶಾಲೆಯಲ್ಲಿ ಬಿಸಿಯೂಟ ತಯಾರಕರು ಇಲ್ಲದ ಕಾರಣ ಮಕ್ಕಳನ್ನು ಮಧ್ಯಾಹ್ನದ ಊಟಕ್ಕೆ ಮನೆಗೆ ಕಳುಹಿಸಲಾಗಿತ್ತು ಎಂದು  ತಿಳಿದು ಬಂದಿದೆ.

ಜೋಗಿಮಟ್ಟಿ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 5 ಜನ ಬಿಸಿಯೂಟ ತಯಾರಕರಿದ್ದು 3 ಮಂದಿ ಪ್ರತಿಭಟನೆಗೆ ತೆರಳಿದ್ದಾರೆ. ಉಳಿದ ಇಬ್ಬರು ಸಿಬ್ಬಂದಿ ಅಡಿಗೆ ತಯಾರಿಸಿ ಮಕ್ಕಳಿಗೆ ಊಟ ನೀಡಿದ್ದಾರೆ. ತಾಲೂಕಿನ ಇಂಗಳದಾಳ್‌, ಲಂಬಾಣಿಹಟ್ಟಿ,  ಕುರುಮರಡಿಕೆರೆ ಶಾಲೆಗಳಲ್ಲಿ ತಯಾರಕರು
ಪ್ರತಿಭಟನೆಯಲ್ಲಿ ಭಾಗವಹಿಸಿಲ್ಲ ಎಂದು ಇಂಗಳದಾಳ ಶಾಲೆಯ ದೈಹಿಕ ಶಿಕ್ಷಕಿ ಲತಾ ಮಾಹಿತಿ ನೀಡಿದ್ದಾರೆ. 

ವಿದ್ಯಾರ್ಥಿಗಳ ಬಿಸಿಯೂಟಕ್ಕೆ ತೊಂದರೆಯಾಗದಂತೆ ಕ್ರಮ 
ಮೊಳಕಾಲ್ಮೂರು: ತಾಲೂಕಿನ ಶಾಲಾ ಮಕ್ಕಳ ಶೈಕ್ಷಣಿಕ  ಪ್ರಗತಿಗಾಗಿ ನೀಡಿರುವ ಬಿಸಿಯೂಟ ಯೋಜನೆಗೆ ಯಾವುದೇ ಅಡೆತಡೆಗಳಾಗದಂತೆ ನೋಡಿಕೊಳ್ಳಲಾಗುವುದು ಎಂದು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎಂ.ಆರ್‌. ಲಕ್ಷ್ಮಣಪ್ಪ ತಿಳಿಸಿದರು. ಪಟ್ಟಣದ ಸರ್ಕಾರಿ
ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಬಿಸಿಯೂಟ ನೀಡುವುದನ್ನು ಪರಿಶೀಲಿಸಿ ಅವರು ಮಾತನಾಡಿದರು. ಬಿಸಿಯೂಟ ಕಾರ್ಯಕರ್ತೆಯರು ಹೆಚ್ಚಿನ ವೇತನ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಮಟ್ಟದಲ್ಲಿ ನಡೆಸುತ್ತಿರುವ ಪ್ರತಿಭಟನೆ ತಾಲೂಕಿನ ಶಾಲೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಒಟ್ಟು 168 ಶಾಲೆಗಳಲ್ಲಿ  ದಾಖಲಾಗಿರುವ 20,655 ವಿದ್ಯಾರ್ಥಿಗಳಿಗೆ 430 ಬಿಸಿಯೂಟ ಕಾರ್ಯಕರ್ತೆಯರು ಬಿಸಿಯೂಟ ಸಿದ್ಧಪಡಿಸುತ್ತಿದ್ದರು. ಕೇವಲ 60 ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆಗೆ ತೆರಳಿದ್ದು, ಉಳಿದ 370 ಕಾರ್ಯಕರ್ತೆಯರು
ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ ಅಂತಹ ಸಮಸ್ಯೆ ಆಗಿಲ್ಲ ಎಂದರು. ಎಲ್ಲ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆಗೆ ತೆರಳಿದ್ದರೂ ಎಸ್‌ಡಿಎಂಸಿ ಯವರ ಸಹಕಾರದೊಂದಿಗೆ ಬಿಸಿಯೂಟ ಕಲ್ಪಿಸುವ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೂ ತಾಲೂಕಿನಿಂದ 60 ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿರುವುದರಿಂದ ಬಿಸಿಯೂಟ ಕಾರ್ಯಕರ್ತೆಯರ ಸಂಖ್ಯೆಗನುಗುಣವಾಗಿ ಅವಶ್ಯವಿರುವ ಶಾಲೆಗಳಿಗೆ ನಿಯೋಜನೆ
ಮಾಡಲಾಗಿದೆ. ಬಿಸಿಯೂಟ ವ್ಯವಸ್ಥೆ ಮಾಡಿದ ಫೋಟೋವನ್ನು ವಾಟ್ಸ್‌ಆ್ಯಪ್‌ನಲ್ಲಿ ಕಳಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ನಮ್ಮ ಶಾಲೆಗೆ ಗ್ರಾಮೀಣ ಭಾಗದಿಂದ ಹೆಚ್ಚು ಮಕ್ಕಳು ಬರುತ್ತಾರೆ. ಅವರಿಗೆ ಬಿಸಿಯೂಟ ನೀಡದಿದ್ದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಶಿಕ್ಷಕರೇ ಬಿಸಿಯೂಟ ತಯಾರಿಸಿ ಮಕ್ಕಳಿಗೆ ನೀಡಿದ್ದಾರೆ. 
ಜಯಪ್ಪ, ಮುಖ್ಯ ಶಿಕ್ಷಕರು, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.