ಕೋಟೆನಾಡಿನಲ್ಲಿ 9 ಉಮೇದುವಾರಿಕೆ ಸಲ್ಲಿಕೆ


Team Udayavani, Apr 20, 2018, 3:00 PM IST

cta-1.jpg

ಚಿತ್ರದುರ್ಗ: ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಏ. 19ರಂದು ಜಿಲ್ಲೆಯಲ್ಲಿ ಒಟ್ಟು 9 ನಾಮಪತ್ರಗಳು ಸಲ್ಲಿಕೆಯಾಗಿವೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಕನ್ನಡ ಪಕ್ಷದಿಂದ ರಾಜಮದಕರಿ ನಾಯಕ, ಜೆಡಿಎಸ್‌ ಪಕ್ಷದಿಂದ ಕೆ.ಸಿ. ವೀರೇಂದ್ರ, ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ರವೀಶ್‌ ಕುಮಾರ್‌, ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಕೆ. ಪೂರ್ಣಿಮಾ ಅವರು 3 ನಾಮಪತ್ರ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಎಂ. ಚಂದ್ರಪ್ಪ, ಜೆಡಿಯು ಪಕ್ಷದಿಂದ
ಎಚ್‌. ರಾಮಚಂದ್ರಪ್ಪ, ಪಕ್ಷೇತರರಾಗಿ ಜಿ. ಶಾಂತಪ್ಪ ನಾಮಪತ್ರ ಸಲ್ಲಿಸಿದ್ದಾರೆ. ಮೊಳಕಾಲ್ಮೂರು ಹಾಗೂ ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಯಾರೂ ನಾಮಪತ್ರ ಸಲ್ಲಿಸಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಹೊಳಲ್ಕೆರೆ: ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮಾಜಿ ಶಾಸಕ ಎಂ. ಚಂದ್ರಪ್ಪ, ಜೆಡಿಯು ಪಕ್ಷದಿಂದ ನೆಹರು ಕಾಲೋನಿ ರಾಮಚಂದ್ರಪ್ಪ, ಪಕ್ಷೇತರ ಅಭ್ಯರ್ಥಿಯಾಗಿ ಮೆಗಳಕೊಟ್ಟಿಗೆ ಜಿ.ಶಾಂತಪ್ಪ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಎಂ. ಚಂದ್ರಪ್ಪ ಏ 24ರಂದು ಬಿಜೆಪಿ ಕಾರ್ಯಕರ್ತರ ಬೃಹತ್‌ ಮಟ್ಟದಲ್ಲಿ ರ್ಯಾಲಿ ಕೈಗೊಂಡು ಅಧಿಕೃತ ನಾಮಪತ್ರ
ಸಲ್ಲಿಸುತ್ತೇವೆ. ಇಂದು ಸಾಂಪ್ರಾಯಿಕ ಪದ್ಧತಿಯಂತೆ ಒಂದು ನಾಮಪತ್ರವನ್ನು ಸಾಂಕೇತಿಕವಾಗಿ ಸಲ್ಲಿಸಿದೆ ಎಂದರು.

ಎಂ.ಚಂದ್ರಪ್ಪ ಹೆಸರಲ್ಲಿ 2017-18ರಲ್ಲಿ 2,32,587 ರೂ. ವ್ಯವಸಾಯ 1,62,500 ರೂ, ಪತ್ನಿ ಚಂದ್ರಕಲಾ ಹೆಸರಿನಲ್ಲಿ 2,41,943ರೂ., ವ್ಯವಸಾಯ 5,04,780 ರೂ ಆದಾಯ ತೆರಿಗೆ ಮಾಹಿತಿ ಸಲ್ಲಿಸಲಾಗಿದೆ. ಬಿಜೆಪಿ ಅಭ್ಯರ್ಥಿ ಎಂ.ಚಂದ್ರಪ್ಪ ಹೆಸರಲ್ಲಿ ಚಿತ್ರದುರ್ಗ ಜಿಲ್ಲೆಯ ವಿವಿಧ ಬ್ಯಾಂಕ್‌ಗಳಲ್ಲಿ 50 ಲಕ್ಷ ಠೇವಣಿ ಇದ್ದು, ಅಂಚೆ ಕವೇರಿ, ವಿಮಾ ಪಾಲಿಸಿಯಲ್ಲಿ 50ಸಾವಿರ ಇದೆ. ಪತ್ನಿ ಚಂದ್ರಕಲಾ ಹೆಸರಲ್ಲಿ 30ಲಕ್ಷ ಠೇವಣಿ, 4 ಲಕ್ಷ ರೂ. ಹಾಗೂ 50 ಸಾವಿರ ವಿಮಾ ಪಾಲಿಸಿಗಳಿವೆ. ಪುತ್ರ ಎಂ.ಸಿ. ರಘುಚಂದನ್‌ ಹೆಸರಲ್ಲಿ 5 ಲಕ್ಷದ ವಿಮಾ ಮೊಬಲಗು ಇದೆ. ಪತ್ನಿ ಚಂದ್ರಕಲಾ ಹೆಸರಲ್ಲಿ ಕೆ.ಎ.50ಎನ್‌ .-1400 ಕಾರು ಇದ್ದು, ಅದರ ಮೌಲ್ಯ 8ಲಕ್ಷ, 6.5 ಲಕ್ಷದ 13ಕೆಜಿ ಬೆಳ್ಳಿ, 50ಲಕ್ಷದ 1800ಗ್ರಾಮ ಚಿನ್ನದ ಆಭರಣಗಳಿವೆ. 

ಸ್ಥಿರಾಸ್ತಿಗಳಾದ ಕೃಷಿ ಭೂಮಿ ದೊಡ್ಡಉಳ್ಳಾರ್ತಿಯಲ್ಲಿ 9.20 ಎಕರೆ, ಯಾದಲಘಟ್ಟಯಲ್ಲಿ 8ಎಕರೆ, ದೊಡ್ಡಉಳ್ಳಾರ್ತಿಯಲ್ಲಿ 14.05 ಎಕರೆ, 15 ಎಕರೆ, ಬೆಂಗಳೂರು ಆಗ್ರಹಾರದಲ್ಲಿ 1 ಹಾಗೂ 3 ಎಕರೆ ಜಮೀನು ಇದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್‌ ತಾಲೂಕಿನ ವಾಬಸಂದ್ರದಲ್ಲಿ 1.23 ಎಕರೆ ಇದೆ. ಎಂ.ಸಿ.ರಘುಚಂದನ್‌ ಹೆಸರಲ್ಲಿ ಹಿರೆಗುಂಟನೂರು ಹೋಬಳಿ ಸಿಬಾರದಲ್ಲಿ 2 ಎಕರೆ, ಎಂ.ಸಿ.ದೀಪುಚಂದನ್‌ ಹೆಸರಲ್ಲಿ ಹಿರೆಗುಂಟನೂರು ಹೋಬಳಿ ಸಿಬಾರದಲ್ಲಿ 2 ಎಕರೆ ಜಮೀನು, ಇಬ್ಬರ ಹೆಸರಲ್ಲಿ ಪೋರ್ಟ್‌ ಸ್ಟೋನ್‌ ಕ್ರಷರ್ ಇದೆ.

ಎಂ. ಚಂದ್ರಪ್ಪ ಇವರು 2010-11ರಲ್ಲಿ 33,029,000 ರೂ. ಮೌಲ್ಯದ ಭೂಮಿ ಖರೀದಿಸಿದ್ದಾರೆ. ಹೊಳಲ್ಕೆರೆಯಲ್ಲಿ 4.30
ಎಕರೆ ಕೃಷಿಯೇತರ ಜಮೀನು, ಚಿತ್ರದುರ್ಗ ನಗರದಲ್ಲಿ 4 ಹಂತಸ್ತಿನ ಕಾಲೇಜು ಕಟ್ಟಡ ಇದೆ. ಬೆಂಗಳೂರು ದೇವಸಂದ್ರದಲ್ಲಿ ನಿವೇಶನವಿದೆ. ಚಿತ್ರದುರ್ಗ ಕಾಲೇಜು ಹಿಂಭಾದಲ್ಲಿ 1.20 ಎಕರೆ ಜಮೀನು ಇದೆ.

ಪತ್ನಿ ಚಂದ್ರಕಲಾ ಹೆಸರಲ್ಲಿ ಹೊಳಲ್ಕೆರೆ ಸಿದ್ದರಾಮಪ್ಪ ಬಡಾವಣೆಯಲ್ಲಿ 3.20 ಎಕರೆ ಜಮೀನು, ದೊಡ್ಡಉಳ್ಳಾರ್ತಿಯಲ್ಲಿ ವಾಸದ ಮನೆ, ಬೆಂಗಳೂರಿನ ಪೂಜಾರ್‌ ಲೇ ಔಟ್‌ನಲ್ಲಿ ವಾಸದ ಮನೆ ಎಂದು ಪ್ರಮಾಣ ಪತ್ರದಲ್ಲಿ ಘೋಷಣೆ ಮಾಡಿಕೊಳ್ಳಲಾಗಿದೆ. 

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.