ವರುಣನ ಆರ್ಭಟಕ್ಕೆ ಜನ ತತ್ತರ


Team Udayavani, May 26, 2018, 12:34 PM IST

cta-1.jpg

ಹೊಳಲ್ಕೆರೆ: ತಾಲೂಕಿನಾದ್ಯಂತ ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ತಾಲೂಕಿನ ರಾಮಗಿರಿ-ತಾಳಿಕಟ್ಟೆ ಸಮಿಪದ ಸಿದ್ದರಾಮಯ್ಯ ಬಡಾವಣೆಯ ಅಲೆಮಾರಿ ಹಾಗೂ ಸುಡುಗಾಡು ಸಿದ್ದರ ಕಾಲೋನಿಯಲ್ಲಿನ ಗುಡಿಸಲುಗಳು
ಸಂಪೂರ್ಣ ಜಲಾವೃತವಾಗಿವೆ.

ಬಡಾವಣೆಯ ನಾಗರಕಟ್ಟೆಯಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸವಾಗಿದ್ದ ಅಲೆಮಾರಿಗಳು, ಸುಡುಗಾಡು ಸಿದ್ದರು, ಬಡ ಕುಟುಂಬಗಳು ಮಳೆಯ ಅರ್ಭಟಕ್ಕೆ ತತ್ತರಿಸಿವೆ. ಗುರುವಾರ ಮಧ್ಯರಾತ್ರಿ ಗುಡುಗು, ಸಿಡಿಲು, ಮಿಂಚು ಗಾಳಿ ಸಹಿತ ಮಳೆ ಆರಂಭವಾಯಿತು. ತೋಟ ಹಾಗೂ ಹೊಲಗಳಿಂದ ಹರಿದು ಬಂದ ನೀರು ಗುಡಿಸಲುಗಳಿಗೆ ನುಗ್ಗಿತು. ಇದರಿಂದ ಗುಡಿಸಲುಗಳಲ್ಲಿದ್ದ ದವಸ ಧಾನ್ಯ, ಬಟ್ಟೆ ಸೇರಿಂತೆ ಜೀವನಾವಶ್ಯಕ ಸಾಮಗ್ರಿಗಳಿಗೆ ಹಾನಿಯಾಗಿದೆ. ರಾಮಗಿರಿ ಸುತ್ತ ಸುರಿದ ಭಾರೀ ಮಳೆಗೆ ಗುಡಿಸಲುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. 

ಗಾಳಿಯ ಹೊಡೆತಕ್ಕೆ ಗುಡಿಸಲುಗಳ ಗರಿಗಳು ಹಾರಿ ಹೋಗಿದ್ದರಿಂದ ಅಲ್ಲಿನ ನಿವಾಸಿಗಳು ಆತಂಕದಲ್ಲೇ ಕಾಲ ಕಳೆದರು. ಭಾರೀ ಮಳೆಯಿಂದ ನೀರುಪಾಲಾಗಿರುವ ಗುಡಿಸಲುಗಳನ್ನು ಬಡಾವಣೆಯ ಎತ್ತರ ಪ್ರದೇಶಗಳಿಗೆ ಸ್ಥಳಾಂತರ ಮಾಡಲು ಸ್ಥಳೀಯ ಗ್ರಾಮ ಪಂಚಾಯತ್‌ ಮುಂದಾಗಿದೆ. ಘಟನಾ ಸ್ಥಳಕ್ಕೆ ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭಾರಿ ಮಳೆಯಿಂದ ಗುಡಿಸಲುಗಳು ನೀರಿನಲ್ಲಿ ಮುಳುಗಿದ್ದರೂ ತಾಲೂಕು ಆಡಳಿತ ಸುಡುಗಾಡು ಸಿದ್ಧರ ನೆರವಿಗೆ ಧಾವಿಸಿಲ್ಲ. ತಕ್ಷಣ ಅಲೆಮಾರಿ ಹಾಗೂ ಸುಡುಗಾಡು ಸಿದ್ಧರಿಗೆ ಬೇಕಾದ ಸೌಲಭ್ಯ ಕಲ್ಪಿಸಬೇಕು. ಗುಡಿಸಲು ಕಳೆದುಕೊಂಡು ಸಂಕಷ್ಟದಲ್ಲಿರುವವರಿಗೆ ಅರ್ಥಿಕ ನೆರವು ನೀಡಿ ಗಂಜಿ ಕೇಂದ್ರ ಆರಂಭಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಹೊಳಲ್ಕೆರೆ ಪಟ್ಟಣ ಸೇರಿದಂತೆ ಬಸವಾಪುರ, ರಂಗಾಪುರ, ನುಲೇನೂರು, ರಾಮಗಿರಿ, ವಡೇರಹಳ್ಳಿ ಅಡನೂರು, ಚಿಕ್ಕಜಾಜೂರು ಪಾಡಿಗಟ್ಟೆ, ಗಂಗಸಮುದ್ರ, ತಾಳಿಕಟ್ಟೆ, ಎನ್‌.ಜಿ. ಹಳ್ಳಿ, ಗುಂಡೇರಿ, ಇಡೆಹಳ್ಳಿ, ಅವಿನಹಟ್ಟಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಪಟ್ಟಣ ಹಾಗೂ ಹಳ್ಳಿಗಳಲ್ಲಿದ್ದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಸಮಸ್ಯೆ ಉಂಟಾಗಿತ್ತು. 

ತಾಲೂಕಿನ ತಾಳಿಕಟ್ಟೆ, ಗಂಗಸಮುದ್ರ ಸುತ್ತಲಿನ ತೋಟಗಳಲ್ಲಿದ್ದ ನೂರಾರು ಅಡಿಕೆ ಹಾಗೂ ತೆಂಗಿನ ಮರಗಳು ಬಿರುಗಾಳಿಗೆ ನೆಲಕ್ಕುರುಳಿವೆ. ಗಂಗಸಮುದ್ರದಲ್ಲಿ ಐದಾರು ಮನೆಗಳ ಮೇಲೆ ತೆಂಗಿನ ಮರ, ಜಾಲಿ ಮರ ಉರುಳಿವೆ. ಯಾವುದೇ ಪ್ರಾಣಹಾನಿಯಾಗಿಲ್ಲ. ತಾಳಿಕಟ್ಟೆ ಬಳಿಯ ವಡೇರಹಳ್ಳಿ ಕೆರೆ ತುಂಬಿ ಹರಿಯುತ್ತಿದ್ದು, ಗಂಗಸಮುದ್ರ ಕೆರೆ
ಕೋಡಿ ಬೀಳುವ ಹಂತದಲ್ಲಿದೆ. ಹಳ್ಳ ಕೊಳ್ಳಗಳಲ್ಲಿ ನೀರು ಹರಿಯುತ್ತಿದೆ. 

ಒಂದೇ ದಿನ 67.4 ಮಿಮೀ ಮಳೆ 
ಚಿತ್ರದುರ್ಗ: ಜಿಲ್ಲೆಯಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಅತಿ ಹೆಚ್ಚು ಅಂದರೆ ಹೊಳಲ್ಕೆರೆಯಲ್ಲಿ 67.4 ಮಿಮೀ ಮಳೆ ಸುರಿದಿದೆ. ಚಳ್ಳಕೆರೆ 31, ಪರಶುರಾಂಪುರ 3, ಡಿ. ಮರಿಕುಂಟೆ 5.2, ತಳಕು 4.8, ಚಿತ್ರದುರ್ಗ 1 ರಲ್ಲಿ 20, ಚಿತ್ರದುರ್ಗ 2 ರಲ್ಲಿ 4.4, ಹಿರೇಗುಂಟನೂರು 2, ಭರಮಸಾಗರ 4.4, ಹಿರಿಯೂರು 5.4, ಬಬ್ಬೂರು 6.4, ಈಶ್ವರಗೆರೆ 9.4, ಇಕ್ಕನೂರು 5.4, ಹೊಳಲ್ಕೆರೆ 67.4, ರಾಮಗಿರಿ 22.2 ಚಿಕ್ಕಜಾಜೂರು 5.2, ಎಚ್‌.ಡಿ. ಪುರ 23.6, ತಾಳ್ಯ 24, ಹೊಸದುರ್ಗ 12.2, ಬಾಗೂರು 15.1, ಮತ್ತೋಡು 8.2, ಮಾಡದಕೆರೆ 26.2, ಮೊಳಕಾಲ್ಮೂರು 7.2, ಬಿ.ಜಿ. ಕೆರೆ 5.6, ರಾಯಾಪುರ 4.8 ಮಿಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.