ಮರದ ನೆರಳಿನಲ್ಲಿ ನಡೆದಿದೆ ಚಿಣ್ಣರ ಅಕ್ಷರಾಭ್ಯಾಸ!


Team Udayavani, Jun 11, 2018, 4:30 PM IST

chit.jpg

ಚಳ್ಳಕೆರೆ: ಗ್ರಾಮೀಣ ಪ್ರದೇಶದಲ್ಲಿರುವ ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕೊರತೆ ಎದುರಿಸುತ್ತಿವೆ. ತಾಲೂಕಿನ ನಾಯಕನಹಟ್ಟಿ ಹೋಬಳಿಯ ಓಬಯ್ಯನಹಟ್ಟಿ ಗೊಲ್ಲರಹಟ್ಟಿಯಲ್ಲೂ ಇದೇ ಪರಿಸ್ಥಿತಿ ಇದ್ದು ಚಿಣ್ಣರು ಕಟ್ಟಡವಿಲ್ಲದೆ ಮರದ ನೆರಳಿನಲ್ಲಿ ಅಕ್ಷರಾಭ್ಯಾಸ ಮಾಡಬೇಕಾಗಿದೆ.

ಕಳೆದ ಸುಮಾರು 8-10 ವರ್ಷಗಳಿಂದ ಓಬಯ್ಯನಹಟ್ಟಿ ಗೊಲ್ಲರಹಟ್ಟಿಯಲ್ಲಿ ಅಂಗನವಾಡಿ ಕೇಂದ್ರವಿದೆ. ಕಟ್ಟಡ ಶಿಥಿಲಗೊಂಡ ಹಿನ್ನೆಲೆಯಲ್ಲಿ 2013-14ರಲ್ಲಿ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ. ಮತ್ತೂಂದು ಹೊಸ ಕಟ್ಟಡ ನಿರ್ಮಾಣಕ್ಕೆ ಬುನಾದಿ ಹಾಕಿ ಐದು ವರ್ಷಗಳು ಕಳೆದಿದ್ದರೂ ಕಟ್ಟಡ ಮಾತ್ರ ನಿರ್ಮಾಣವಾಗಿಲ್ಲ.

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ
ಮಾಡಿದ್ದರೂ ಪ್ರಯೋಜನವಾಗಿಲ್ಲ.  ಕಟ್ಟಡ ಇಲ್ಲದ್ದರಿಂದ ಅಂಗನವಾಡಿ ಮಕ್ಕಳು ಕಟ್ಟಡ ಸಮೀಪ ಇರುವ ಮರದ ನೆರಳಿನಲ್ಲಿ ಕುಳಿತು ಪಾಠ ಕಲಿಯುತ್ತಿದ್ದಾರೆ. ಮಳೆಗಾಲದಲ್ಲಿ ಅಂಗನವಾಡಿ ಕೇಂದ್ರವನ್ನು ಅನಿವಾರ್ಯವಾಗಿ ಮುಚ್ಚಬೇಕಾಗಿದೆ. ಪುಟ್ಟ ಮಕ್ಕಳು ಬಯಲು ಪ್ರದೇಶದಲ್ಲಿ ಅಭ್ಯಾಸ ಮಾಡುವ ಸ್ಥಿತಿ ನಿರ್ಮಾಣವಾಗಿದೆ. 

ಮಕ್ಕಳ ಹಿತದೃಷ್ಟಿಯಿಂದ ಬಾಡಿಗೆ ಕಟ್ಟಡ ಅಥವಾ ಸರ್ಕಾರದ ಯಾವುದೇ ಇಲಾಖೆಯ ಕಟ್ಟಡವನ್ನು ಅಂಗನವಾಡಿಗೆ
ಪಡೆದುಕೊಳ್ಳಬಹುದಿತ್ತು. ಅಂಗನವಾಡಿಯಲ್ಲಿ ಕಾರ್ಯಕರ್ತೆ ಹಾಗೂ ಸಹಾಯಕಿ ಇದ್ದು, 13 ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ. ಮರದ ಕೆಳಗೆ ಮಕ್ಕಳು ವಿದ್ಯಾಭ್ಯಾಸ  ಮಾಡುತ್ತಿರುವುದುರಿಂದ ಯಾವುದೇ ಕ್ಷಣದಲ್ಲಿ ಅಪಾಯ ಸಂಭವಿಸುವ ಭೀತಿ ಇದೆ.

ನನೆಗುದಿಗೆ ಬಿದ್ದಿರುವ ಅಂಗನವಾಡಿ ಕಟ್ಟಡವನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಮೂಲ ಸೌಲಭ್ಯ ಕಲ್ಪಿಸಿ ಗ್ರಾಮಸ್ಥರ ಭೀತಿಯನ್ನು ದೂರ ಮಾಡಲು ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು
ಗ್ರಾಮದ ಯುವಕರಾದ ಗುರು ಯಾದವ್‌, ಬಸಣ್ಣ, ಬೋಸಲಿಂಗಯ್ಯ, ಬೋರಯ್ಯ ಮತ್ತಿತರರು ಒತ್ತಾಯಿಸಿದ್ದಾರೆ.

ಕಳೆದ ಹತ್ತಾರು ವರ್ಷಗಳಿಂದ ನಮ್ಮ ಗ್ರಾಮದ ಪುಟ್ಟ ಮಕ್ಕಳು ಅಕ್ಷರ ಕಲಿಯಲು ಅಂಗನವಾಡಿ ಕೇಂದ್ರಕ್ಕೆ ಹೋಗಿ  ಬರುತ್ತಾರೆ. ಆದರೆ ಸುಸಜ್ಜಿತವಾದ ಕಟ್ಟಡವಿಲ್ಲ. ಬಯಲಿನಲ್ಲೇ ವಿದ್ಯಾಭ್ಯಾಸ ಮಾಡಬೇಕಾಗಿದೆ. ಮಳೆ, ಗಾಳಿ, ಗುಡುಗು, ಸಿಡಿಲು ಉಂಟಾದಲ್ಲಿ ಮಕ್ಕಳ ಪೋಷಕರು ಹೋಗಿ ಮನೆಗೆ ಕರೆದುಕೊಂಡು ಬರಬೇಕಿದೆ. ಆದ್ದರಿಂದ ಕೂಡಲೇ ಕಟ್ಟಡ ನಿರ್ಮಿಸಿಕೊಡಬೇಕು. 
 ಶಿವು ಯಾದವ್‌, ಗ್ರಾಮಸ್ಥ

 ಓಬಯ್ಯನಹಟ್ಟಿ ಗೊಲ್ಲರಹಟ್ಟಿಯ ಅಂಗನವಾಡಿ ಕಟ್ಟಡದ ಬುನಾದಿ ಕಾರ್ಯ ಪೂರ್ಣಗೊಂಡಿದೆ. ಈ ಕಟ್ಟಡವನ್ನು
ಆದಷ್ಟು ಬೇಗ ನಿರ್ಮಿಸುವಂತೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ವಿಧಾನಸಭೆ ಚುನಾವಣೆ ಇದ್ದಿದ್ದರಿಂದ ವಿಳಂಬವಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಶೀಘ್ರದಲ್ಲೇ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುವುದು.
 ಸಿ.ಕೆ. ಗಿರಿಜಾಂಬ, ಸಿಡಿಪಿಒ.

„ಕೆ.ಎಸ್‌. ರಾಘವೇಂದ್ರ

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.