ನರೇಗಾದಲ್ಲಿ ಕಳಪೆ ಸಾಧನೆ: ಅಸಮಾಧಾನ


Team Udayavani, Jul 7, 2018, 5:32 PM IST

cta-1.jpg

ಚಿತ್ರದುರ್ಗ: ನರೇಗಾದಲ್ಲಿ ಪರಿಣಾಮಕಾರಿ ಕಾಮಗಾರಿ ಮಾಡಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಜಿಲ್ಲಾ ಪಂಚಾಯತ್‌ ಇಂದು ಎಲ್ಲ ವಿಭಾಗದಲ್ಲೂ ಅತ್ಯಂತ ಕಳಪೆ ಸಾಧನೆ ಮಾಡಲಾಗುತ್ತಿದೆ ಎಂದು ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿನ ಜಿಪಂ ಮಿನಿ ಸಭಾಂಗಣದಲ್ಲಿ ಶುಕ್ರವಾರ ನಡೆದ 2018-19ನೇ ಸಾಲಿನ ನರೇಗಾ ಯೋಜನೆಯ ಕ್ರಿಯಾ ಯೋಜನೆ ಹಾಗೂ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಟಚಾರಕ್ಕೆ ಕೇವಲ ಕ್ರಿಯಾ ಯೋಜನೆ ಮಾಡಿ ಅನುಮೋದನೆ ಪಡೆದರೆ ಸಾಧನೆ ಮಾಡಿದಂತೆ ಆಗುವುದಿಲ್ಲ. ತಾಪಂ ಇಒಗಳು, ಗ್ರಾಪಂ ಪಿಡಿಒ, ಕಾರ್ಯದರ್ಶಿಗಳು ಏನು ಕೆಲಸ ಮಾಡುತ್ತಾರೆ ಎಂದು ಅವರು ತರಾಟೆಗೆ ತೆಗೆದುಕೊಂಡರು. 

ಜಿಲ್ಲೆಯ ಪ್ರತಿಯೊಂದು ಗ್ರಾಮದಲ್ಲೂ ಕನಿಷ್ಠ ಒಂದು ಚೆಕ್‌ ಡ್ಯಾಂ ನಿರ್ಮಾಣ ಕಡ್ಡಾಯವಾಗಿ ಆಗಬೇಕು. ಕಳೆದ ಬಾರಿ 682 ಚೆಕ್‌ ಡ್ಯಾಂಗಳ ನಿರ್ಮಾಣಕ್ಕೆ ಕೇವಲ 128 ಚೆಕ್‌ ಡ್ಯಾಂ ನಿರ್ಮಾಣ ಮಾಡುವ ಮೂಲಕ ರೈತ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ಬೇಸರ ವ್ಯಕ್ತ ಪಡಿಸಿದರು.

ಫಲಾನುಭವಿಗಳು ಶೌಚಾಲಯ, ದನಗಳ ಕೊಟ್ಟಿಗೆ, ಒಕ್ಕಲು ಕಣ ನಿರ್ಮಾಣ ಮಾಡಿಕೊಂಡರೆ ಬಿಲ್‌ ಪಾವತಿಸುತ್ತಿಲ್ಲ, ಕೂಲಿ ನೀಡುತ್ತಿಲ್ಲ, ಕೂಲಿ ಕೊಡಿಸಿ, ಬಿಲ್‌ ಕೊಡಿಸಿ ಎಂದು ನಿತ್ಯ ಜಿಪಂಗೆ ಅಲೆಯುತ್ತಿದ್ದಾರೆ. ಹಾಗಾದರೆ ಇಒ, ಪಿಡಿಒ ಇತರೆ ಅಧಿಕಾರಿಗಳ ಕೆಲಸವೇನು? ಚೆಕ್‌ ಡ್ಯಾಂ ಕಳೆದು ಹೋಗಿವೆ ಹುಡುಕಿಕೊಡಿ ಎಂದು ಮಾಧ್ಯಮಗಳಲ್ಲಿ ಬರುತ್ತಿವೆ. ಇದಕ್ಕೆ ಯಾರೂ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
 ಕೂಲಿ ಕೊಟ್ಟಿಲ್ಲ, ಶೌಚಾಲಯ, ದನಗಳ ಕೊಟ್ಟಿಗೆ ಬಿಲ್‌ ಕೊಟ್ಟಿಲ್ಲ ಎನ್ನುವ ದೂರು ಬರುವಂತಿಲ್ಲ, ಯಾರೊಬ್ಬರೂ ಸಬೂಬು ಹೇಳುವಂತಿಲ್ಲ. ಕೃಷಿ, ತೋಟಗಾರಿಕೆ ಇಲಾಖೆ ಅಕಾರಿಗಳು ಹೆಚ್ಚಿನ ಕಾಮಗಾರಿ ತೆಗೆದುಕೊಂಡು ಪರಿಣಾಮಕಾರಿ ಕೆಲಸ ಮಾಡಬೇಕು ಎಂದು ಜಿಪಂ ಸಿಇಒ ಪಿ.ಎನ್‌. ರವೀಂದ್ರ ಅವರಿಗೆ ತಾಕೀತು ಮಾಡಿದರು.

ಗಂಗಾ ಕಲ್ಯಾಣ ಯೋಜನೆಯಡಿ ಹೆಚ್ಚಿನ ಫಲಾನುಭವಿಗಳಿಗೆ ಕೊಳವೆ ಬಾವಿ ಕೊರೆಯಿಸಿ ಕೊಡಲಾಗಿದೆ. ಇವರೆಲ್ಲರೂ ಬಹುತೇಕ ಸಣ್ಣ ರೈತರು ಮತ್ತು ಬಡ ಕುಟುಂಬದಿಂದ ಬಂದವರಾಗಿದ್ದು, ಇವರಿಗೆ ಕೃಷಿ ಹೊಂಡ ನಿರ್ಮಾಣಕ್ಕೆ, ಹನಿ ನೀರಾವರಿಗೆ, ಮೀನು ಸಾಕಾಣಿಕೆ ಮಾಡಲು, ತೋಟಗಾರಿಕೆ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡಬೇಕು. ಪಶುಭಾಗ್ಯ ಯೋಜನೆ ಅಡಿ ಹಸುಗಳನ್ನು ಕೊಟ್ಟು ಸ್ವಾವಲಂಬಿ ಜೀವನ ಮಾಡುವಂತೆ ದಾರಿ ಮಾಡಿಕೊಡಬೇಕು. ಬಡವರ ಬಗ್ಗೆ ಕನಿಷ್ಠ ಕಾಳಜಿ ಇರಬೇಕು ಎಂದು ಅಧ್ಯಕ್ಷರು ಒತ್ತಾಯಿಸಿದರು.

ನರೇಗಾ ಯೋಜನೆ ಅಡಿಯಲ್ಲಿ ಚೆಕ್‌ ಡ್ಯಾಂ, ಗೋಕಟ್ಟೆ, ಕೃಷಿ ಹೊಂಡಗಳ ನಿರ್ಮಾಣ ಸೇರಿದಂತೆ ಮಣ್ಣು ಮತ್ತು ನೀರು ಸಂರಕ್ಷಣೆಯಂತಹ ಉತ್ತಮ ಕಾಮಗಾರಿಗಳನ್ನು ಪ್ರತಿ ಗ್ರಾಮದಲ್ಲೂ ತೆಗೆದುಕೊಳ್ಳಬೇಕು. ಮಳೆ ಕೊಯ್ಲು ಮಾಡಿದರೆ ಅಂತರ್ಜಲ ಮಟ್ಟ ವೃದ್ಧಿಯಾಗಲಿದೆ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. 

ಚೆಕ್‌ ಡ್ಯಾಂ, ಗೋಕಟ್ಟೆ, ಕೃಷಿ ಹೊಂಡಗಳನ್ನು ಎತ್ತರ ಪ್ರದೇಶದಲ್ಲಿ ಮಾಡಬೇಡಿ, ನೀರು ಹರಿದು ಬರುವಂತ ತಗ್ಗಿನ ಪ್ರದೇಶದ ಆಯ್ಕೆ ಮಾಡಿಕೊಂಡು ಕಾಮಗಾರಿ ಮಾಡಬೇಕು. ಹೆಚ್ಚು ಜಲಾನಯನ ಪ್ರದೇಶವಾಗಿರಬೇಕು. ಅಂತಹ ಪ್ರದೇಶಗಳನ್ನ ಚೆಕ್‌ ಡ್ಯಾಂ, ಗೋಕಟ್ಟೆ ನಿರ್ಮಾಣ ಮಾಡಲು ಮುಂದಾಗಿ ಎಂದು ಸಿಇಒ ರವೀಂದ ಸೂಚನೆ ನೀಡಿದರು.
 
ನರೇಗಾ ಎಂದರೆ ಅದ್ವಾನದ ಕೆಲಸವಾಗಿದೆ. ಕಣ್ಣೊರೆಸೋ ಕೆಲಸ ಮಾಡಬೇಡಿ. ಸರ್ಕಾರಕ್ಕೆ ಉತ್ತರ ನಾವು ಹೇಳಬೇಕಾಗುತ್ತದೆ. ಇಲ್ಲಿ ಹೇಳುವವರು, ಕೇಳುವವರು ಯಾರೂ ಇಲ್ಲದಂತಾಗಿದೆ. ಬಡವರು ಮನೆಗಳನ್ನು ನಿರ್ಮಾಣ ಮಾಡಿಕೊಂಡರೆ 90 ಮಾನವ ದಿನಗಳ ಕೂಲಿ ಕೊಡಲು ಅವಕಾಶವಿದೆ. 

ಕನಿಷ್ಠ 20 ಸಾವಿರ ರೂ. ಅವರಿಗೆ ಸಿಗಲಿದೆ. ಆದರೆ, ಎನ್‌ಎಂಆರ್‌ ತೆಗೆಯಲು ಏಕೆ ಹಿಂದೇಟು ಹಾಕುತ್ತೀರಿ, ಬಡವರ ಕೆಲಸ ಮಾಡಲು ಇಷ್ಟವಿಲ್ಲವೇ ಎಂದು ಇಒ, ತಾಪಂ ಎಡಿ, ಪಿಡಿಒಗಳ ವಿರುದ್ಧ ಸಿಇಒ ರವೀಂದ್ರ ಹರಿಹಾಯ್ದರು.

ಯಾವ ಇಲಾಖೆ ಅಧಿಕಾರಿ ನರೇಗಾ ಒಗ್ಗೂಡುಸುವಿಕೆ ಕಾಮಗಾರಿ ಮಾಡುವುದಿಲ್ಲ. ಅಂತಹ ಅಧಿಕಾರಿಗಳ ವಿರುದ್ಧ ಕಾನೂನಾತ್ಮಕ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಇದು ಕೇವಲ ಎಚ್ಚರಿಕೆ ಎಂದುಕೊಳ್ಳಬೇಡಿ, ಮೈಮರೆತರೆ ಶಿಕ್ಷೆ ತಪ್ಪಿದಲ್ಲ ಎಂದು ಸಿಇಒ ಎಚ್ಚರಿಸಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ಶಶಿಧರ್‌, ಉಪ ಕಾರ್ಯದರ್ಶಿ ಬಸವರಾಜಪ್ಪ, ಇಒ, ಎಡಿ, ಪಿಡಿಒಗಳು ಇದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.