ಮಹನೀಯರ ಸ್ಮರಣೆ ಎಲ್ಲರ ಕರ್ತವ್ಯ


Team Udayavani, Aug 16, 2018, 4:50 PM IST

cta-1.jpg

ಚಿತ್ರದುರ್ಗ: ಹೋರಾಟ, ತ್ಯಾಗ, ಬಲಿದಾನ ಮಾಡಿ ದೇಶಕ್ಕೆ ಸ್ವಾತಂತ್ರ್ಯಾ ತಂದು ಕೊಟ್ಟ ಮಹನೀಯರನ್ನು ಸ್ಮರಿಸುವುದು
ನಮ್ಮೆಲ್ಲರ ಕರ್ತವ್ಯ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಹೇಳಿದರು.

ಇಲ್ಲಿನ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ನಗರಸಭೆ ಚಿತ್ರದುರ್ಗ ಇವುಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ 72ನೇ ಸ್ವಾತಂತ್ರ್ಯಾದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಜನರನ್ನು ಸಂಘಟಿಸಿ ಜಾಗೃತಗೊಳಿಸಿ ದೇಶಕ್ಕೆ ಸ್ವಾತಂತ್ರ್ಯಾ ತಂದು ಕೊಡುವಲ್ಲಿ ಹಲವು ಮಹನೀಯರ ಪರಿಶ್ರಮವಿದೆ. ಅವರ ಪರಿಶ್ರಮದ ಫಲವಾಗಿ ನಾವೆಲ್ಲರೂ 72ನೇ ಸ್ವಾತಂತ್ರ್ಯಾದಿನದ ಸಂಭ್ರಮಾಚರಣೆಯಲ್ಲಿ ತೊಡಗಿದ್ದೇವೆ. ಪೂರ್ವಿಕರು ತ್ಯಾಗ, ಬಲಿದಾನಗಳ ಮೂಲಕ ತಂದು ಕೊಟ್ಟ ಸ್ವಾತಂತ್ರ್ಯಾವನ್ನು ಉಳಿಸಿಕೊಳ್ಳಬೇಕಾದರೆ ನಮ್ಮ ಕರ್ತವ್ಯ ಅರಿತು ಬಾಳಬೇಕು ಎಂದು ಕರೆ ನೀಡಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸರ್ದಾರ್‌ ವಲ್ಲಭಬಾಯ್‌ ಪಟೇಲ್‌, ಪಂಡಿತ್‌ ಜವಾಹರಲಾಲ್‌ ನೆಹರು, ಸುಭಾಷ್‌ಚಂದ್ರ
ಬೋಸ್‌, ಭಗತ್‌ ಸಿಂಗ್‌, ಚಂದ್ರಶೇಖರ್‌ ಆಜಾದ್‌, ಬಿಪಿನ್‌ ಚಂದ್ರಪಾಲ್‌, ಬಾಲಗಂಗಾಧರ ತಿಲಕ್‌, ದಾದಾಬಾಯಿ
ನವರೋಜಿ, ಗೋಪಾಲಕೃಷ್ಣ ಗೋಖಲೆ ಹಾಗೂ ಸ್ವಾತಂತ್ರ್ಯಾಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ವೀರ ಯೋಧರ ಸ್ಮರಣೆ  ಅಗತ್ಯ ಎಂದರು.

ಟಿಪ್ಪೂಸುಲ್ತಾನ್‌, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ದೇವಿ, ಬೆಳವಡಿ ಮಲ್ಲಮ್ಮ, ಝಾನ್ಸಿರಾಣಿ ಲಕ್ಷ್ಮೀಬಾಯಿ,
ಒನಕೆ ಓಬವ್ವ ಹಾಗೂ ಇದೇ ಜಿಲ್ಲೆಯವರಾದ ಎಸ್‌. ನಿಜಲಿಂಗಪ್ಪ, ದುಮ್ಮಿ ಮುರಿಗೆಪ್ಪ, ಮುಲ್ಕಾ ಗೋವಿಂದ ರೆಡ್ಡಿ, ಕೆ. ಹನುಮಂತಪ್ಪ ಹಾಗೂ ಇನ್ನೂ ಅನೇಕ ಮಹಾನ್‌ ನಾಯಕರನ್ನು ಸ್ಮರಿಸಬೇಕಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಕಾರ್ಮಿಕರು, ರೈತರು, ಬಡವರು ಹಾಗೂ ದೀನದಲಿತರ, ಮಹಿಳೆಯರ ಹಾಗೂ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಈ ವರ್ಗಗಳ ಅಭಿವೃದ್ಧಿಗಾಗಿ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಎಲ್ಲ ಇಲಾಖೆಗಳ ಸಹಕಾರ ಅಗತ್ಯ ಎಂದರು. ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌, ಸಂಸದ ಬಿ.ಎನ್‌. ಚಂದ್ರಪ್ಪ, ವಿಧಾನ ಪರಿಷತ್‌ ಸದಸ್ಯೆ ಜಯಮ್ಮ ಬಾಲರಾಜ್‌, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸಾ°, ಜಿಲ್ಲಾ ಪಂಚಾಯತ್‌ ಸಿಇಒ ಪಿ.ಎನ್‌. ರವೀಂದ್ರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ್‌ ಜೋಶಿ ಮೊದಲಾದವರು ಪಾಲ್ಗೊಂಡಿದ್ದರು. ಸ್ವಾತಂತ್ರ್ಯಾ ಯೋಧರು ಹಾಗೂ ಅವರ ಅವಲಂಬಿತರು, ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.