ವಾಣಿವಿಲಾಸಕ್ಕೆ ಬರಲಿದ್ದಾಳೆ ವೇದಾವತಿ!


Team Udayavani, Aug 19, 2018, 4:29 PM IST

cta-1.jpg

ಚಿತ್ರದುರ್ಗ: ಕಳೆದ ಒಂದೆರಡು ತಿಂಗಳುಗಳಿಂದ ಜಿಲ್ಲೆಯಲ್ಲಿ ಮಳೆಯಾಗಿಲ್ಲ. ಆದರೆ ವೇದಾವತಿ ನದಿ ಮೂಲಕ ಹಿರಿಯೂರಿನ ವಾಣಿವಿಲಾಸ ಜಲಾಶಯಕ್ಕೆ ಭಾನುವಾರ ಬೆಳಿಗ್ಗೆ ನೀರು ಹರಿದು ಬರಲಿದೆ!

ಹೌದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿವಿ ಸಾಗರಕ್ಕೆ ಕೆಲ್ಲೋಡು ಬ್ಯಾರೇಜ್‌ ಮೂಲಕ ನೀರು ಹರಿದು ಬರಲಿದೆ. ಮಳೆಗಾಗಿ ಮುಗಿಲು ನೋಡುತ್ತಿದ್ದ, ಕುಡಿಯುವ ನೀರಿಗಾಗಿ ಪರದಾಡುತ್ತಿದ್ದ ವಾಣಿವಿಲಾಸ ಜಲಾಶಯ ವ್ಯಾಪ್ತಿಯ ಜನರಿಗೆ ಸಿಹಿ ಸುದ್ದಿ ಇದು. ಚಿಕ್ಕಮಗಳೂರು-ಕಡೂರು ಮಾರ್ಗ ಮಧ್ಯದ ಮದಗದ ಕೆರೆ-ಅಯ್ಯನಕೆರೆ ಭರ್ತಿಯಾಗಿವೆ. ಅಯ್ಯನಕೆರೆ ಭರ್ತಿಯಾಗಿ ನಾಲ್ಕೈದು ದಿನಗಳು ಕಳೆದಿದ್ದು, ಕಡೂರು, ಬಿರೂರು, ಕೋಡಿಹಳ್ಳಿ, ಯಗಟಿಪುರ, ಮಲ್ಲಾಪುರ, ಚೌಳಹಿರಿಯೂರು ಮಾರ್ಗವಾಗಿ ಹೊಸದುರ್ಗ ತಾಲೂಕಿನ ಭಾಗಶೆಟ್ಟಿಹಳ್ಳಿ, ಕೊರಟಿಕೆರೆ, ಆಲಘಟ್ಟ, ಬಲ್ಲಾಳಸಮುದ್ರ ಊರಿನ ಸಮೀಪದಿಂದ ಕನ್ನಗುಂಡಿ-ಕೆಲ್ಲೋಡು ಮಾರ್ಗವಾಗಿ ವೇದಾವತಿ ನದಿ ಮೂಲಕ ವಾಣಿವಿಲಾಸ ಸಾಗರದ ಕಡೆ ಹರಿಯಲಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯನಪಟ್ಟಣದ ಬಳಿ ಅಯ್ಯನಕೆರೆ ಇದೆ. ಇದು ಚಿಕ್ಕಮಗಳೂರಿನಿಂದ ಸುಮಾರು 25 ಕಿಮೀ ದೂರದ ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿದೆ. ಅಯ್ಯನಕೆರೆಯನ್ನು ಸರೋವರಕ್ಕೂ ಹೋಲಿಕೆ ಮಾಡಲಾಗುತ್ತದೆ. ಕರ್ನಾಟಕ ಎರಡನೇ ದೊಡ್ಡ ಕೆರೆ ಇದು ಎನ್ನಲಾಗಿದ್ದು, 12ನೇ ಶತಮಾನದಲ್ಲಿ ನಿರ್ಮಿಸಲಾಗಿದೆ. ಈ ಸರೋವರ 1574 ಹೆಕ್ಟೇರ್‌ ಪ್ರದೇಶ ವ್ಯಾಪ್ತಿಯಲ್ಲಿ ವಿಸ್ತರಣೆಗೊಂಡಿದ್ದು 420.70 ಎಂಸಿಎಫ್‌ಟಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಈ ಕೆರೆ ಭರ್ತಿಯಾದರೆ 21,560 ಹೆಕ್ಟೇರ್‌ ಭೂಮಿಗೆ ನೀರಾವರಿ ಸೌಲಭ್ಯದ ಜೊತೆಗೆ ವೇದಾವತಿ ನದಿ ಮೂಲಕ ನೀರು ಹರಿದು ವಿವಿ ಸಾಗರ ಸೇರಲಿದೆ.

ಈಗಾಗಲೇ ಕೆಲ್ಲೋಡು ಬ್ಯಾರೇಜ್‌ಗೆ ನೀರು ಹರಿದಿದ್ದು ಶನಿವಾರ ಬೆಳಿಗ್ಗೆ 11:45ರ ಸುಮಾರಿಗೆ ಕೋಡಿ ಹರಿದಿದೆ. ಇಲ್ಲಿಂದ ಸ್ವಲ್ಪ ದೂರದಲ್ಲಿ ಕಾರೇಹಳ್ಳಿ ಬ್ಯಾರೇಜ್‌ ಇದ್ದು ಆ ಬ್ಯಾರೇಜ್‌ ಕೂಡಾ ಭರ್ತಿಯಾಗಿ ಭಾನುವಾರದೊಳಗೆ ವಿವಿ ಸಾಗರಕ್ಕೆ ವೇದಾವತಿ ನೀರು ಹರಿದು ಬರುವ ಸಾಧ್ಯತೆ ಇದೆ.

ಭದ್ರಾ ನೀರು ಹರಿಸಲೂ ಇದೆ ಅವಕಾಶ: ಭದ್ರಾ ಮೇಲ್ದಂಡೆ ಯೋಜನೆ ಹೊರತಾಗಿಯೂ ಭದ್ರಾ ನೀರನ್ನು ಈಗಲೇ ಹರಿಸಲು ಸಾಧ್ಯವಿದೆ. 56 ಸಾವಿರಕ್ಕೂ ಕ್ಯೂಸೆಕ್‌ ನೀರನ್ನು ಭದ್ರಾ ಡ್ಯಾಂನಿಂದ ಹೊರಗೆ ಹರಿಸಲಾಗುತ್ತಿದೆ. ಈ ನೀರನ್ನು ಅಜ್ಜಂಪುರ ಸಮೀಪದ ಬುಕ್ಕಾಂಬುದಿ ಕೆರೆಗೆ ಉಬ್ರಾಣಿ ಏತ ನೀರಾವರಿ ಯೋಜನೆ ಮೂಲಕ ಭರ್ತಿ ಮಾಡಲು ಅವಕಾಶವಿದೆ.

ಶಿವನಸಮುದ್ರ ಭರ್ತಿಯಾಗಿದ್ದು ವಿದ್ಯುತ್‌ ಉತ್ಪಾದನೆಗೆ ಸಮಸ್ಯೆ ಇಲ್ಲ. ಭದ್ರಾವತಿ ಸಮೀಪದ ಅಂತರಗಂಗೆ ಪಂಪ್‌ಹೌಸ್‌ ನಲ್ಲಿ ದೊಡ್ಡ ಸಾಮರ್ಥಯದ ಮೋಟಾರ್‌ ಪಂಪ್‌ ಅಳವಡಿಸಿ ಉಬ್ರಾಣಿ ಯೋಜನೆಗೆ ನೀರು ಹರಿಸಿದರೆ ಬುಕ್ಕಾಂಬುದಿ ಕೆರೆ ಭರ್ತಿಯಾಗಲಿದೆ. ಈ ಕೆರೆ ಭರ್ತಿಯಾದರೆ ಅಜ್ಜಂಪುರ ಸಮೀಪದ ಶಿವನಿ ಮಾರ್ಗವಾಗಿ ಬಂಗನಕಟ್ಟೆ, ಸೊಲ್ಲಾಪುರ-ಆಸಂದಿ ಗೇಟ್‌ ಮಧ್ಯದಲ್ಲಿನ ದೊಡ್ಡಹಳ್ಳ, ಕುಕ್ಕಸಂದ, ಚೌಳ ಹಿರಿಯೂರು ಮಾರ್ಗವಾಗಿ ವೇದಾವತಿ ನದಿಗೆ ಗುರುತ್ವಾಕರ್ಷಣೆ ಮೂಲಕ ನೀರು ಹರಿಸಬಹುದಾಗಿದೆ.
 
ವೇದಾವತಿಗೆ ಅಯ್ಯನಕೆರೆ, ಉಬ್ರಾಣಿ ಏತ ನೀರಾವರಿ ಯೋಜನೆ ಹಾಗೂ ಹೇಮಾವತಿ ಜಲಾಶಯದ ನೀರು ಹೆಚ್ಚಿನ ಪ್ರಮಾಣದಲ್ಲಿ ಪೋಲಾಗಿ ಹರಿದು ಹಳ್ಳ ಸೇರುತ್ತಿರುವುದನ್ನು ತಡೆದು ಹೊನ್ನವಳ್ಳಿ ಏತ ನೀರಾವರಿ ಯೋಜನೆ ಅಡಿ ಹೆಚ್ಚಿನ ಸಾಮರ್ಥ್ಯದ ಮೋಟಾರ್‌ ಪಂಪ್‌ ಅಳವಡಿಕೆ ಮಾಡಬೇಕಿದೆ. ಅಲ್ಲಿಂದ ಬಲ್ಲಾಳಸಮುದ್ರ ಕೆರೆಗೆ ನೀರು ಹರಿಸಿ ಭರ್ತಿ ಮಾಡಿದರೆ ಈ ಮೂರು ಯೋಜನೆಗಳಿಂದ ವಿವಿ ಸಾಗರಕ್ಕೆ ನಿರಂತರವಾಗಿ ನೀರು ಹರಿಸಬಹುದು. ಆಗ ಭದ್ರಾ ಮೇಲ್ದಂಡೆ ಯೋಜನೆಯ ಅಗತ್ಯ ಇಲ್ಲದೆಯೂ ವಿವಿ ಸಾಗರಕ್ಕೆ ನೀರು ಹರಿಸಬಹುದು. ಈ ಕಾರ್ಯಕ್ಕೆ ಸ್ಥಳೀಯ ಜನಪ್ರನಿಧಿಗಳು, ಸರ್ಕಾರ ಮತ್ತು ಅಧಿಕಾರಿಗಳು ಇಚ್ಛಾಶಕ್ತಿ ತೋರಬೇಕಿದೆ.
 
1933ರಲ್ಲಿ ಕೋಡಿ ಹರಿದಿತ್ತು ಜಿಲ್ಲೆಯಲ್ಲಿ ಮಳೆಯಾಗದಿದ್ದರೂ ವಿವಿ ಸಾಗರಕ್ಕೆ 1933ರಲ್ಲಿ 135.25 ಅಡಿ ನೀರು ಹರಿದು ಭರ್ತಿಯಾಗಿ ಕೋಡಿ ಹರಿದಿತ್ತು. ನಂತರ 2000ರಲ್ಲಿ 122.50 ಅಡಿ, 2010ರಲ್ಲಿ 112.75 ಅಡಿಗೂ ಅಧಿಕ ನೀರು ಹರಿದು ಬಂದು ಹತ್ತಾರು ವರ್ಷಗಳ ನೀರಿನ ಸಮಸ್ಯೆಯನ್ನು ಹೋಗಲಾಡಿಸಿತ್ತು. ಈ ಬಾರಿ ಆಗಸ್ಟ್‌ ತಿಂಗಳ ಆರಂಭದಲ್ಲೇ ಮದಗದ ಕೆರೆ ಮತ್ತು ಅಯ್ಯನಕೆರೆಗಳು ಭರ್ತಿಯಾಗಿವೆ. ಸೆಪ್ಟಂಬರ್‌, ಅಕ್ಟೋಬರ್‌ ತಿಂಗಳವರೆಗೂ ಮಳೆ ಬರುವ ಸಾಧ್ಯತೆ ಇದ್ದು ಈ ವರ್ಷ ವಾಣಿವಿಲಾಸ ಸಾಗರಕ್ಕೂ ಹೆಚ್ಚಿನ ನೀರು ಹರಿದು ಬರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

„ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.