ವಾಣಿವಿಲಾಸಕ್ಕೆ ಬರಲಿದ್ದಾಳೆ ವೇದಾವತಿ!


Team Udayavani, Aug 19, 2018, 4:29 PM IST

cta-1.jpg

ಚಿತ್ರದುರ್ಗ: ಕಳೆದ ಒಂದೆರಡು ತಿಂಗಳುಗಳಿಂದ ಜಿಲ್ಲೆಯಲ್ಲಿ ಮಳೆಯಾಗಿಲ್ಲ. ಆದರೆ ವೇದಾವತಿ ನದಿ ಮೂಲಕ ಹಿರಿಯೂರಿನ ವಾಣಿವಿಲಾಸ ಜಲಾಶಯಕ್ಕೆ ಭಾನುವಾರ ಬೆಳಿಗ್ಗೆ ನೀರು ಹರಿದು ಬರಲಿದೆ!

ಹೌದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿವಿ ಸಾಗರಕ್ಕೆ ಕೆಲ್ಲೋಡು ಬ್ಯಾರೇಜ್‌ ಮೂಲಕ ನೀರು ಹರಿದು ಬರಲಿದೆ. ಮಳೆಗಾಗಿ ಮುಗಿಲು ನೋಡುತ್ತಿದ್ದ, ಕುಡಿಯುವ ನೀರಿಗಾಗಿ ಪರದಾಡುತ್ತಿದ್ದ ವಾಣಿವಿಲಾಸ ಜಲಾಶಯ ವ್ಯಾಪ್ತಿಯ ಜನರಿಗೆ ಸಿಹಿ ಸುದ್ದಿ ಇದು. ಚಿಕ್ಕಮಗಳೂರು-ಕಡೂರು ಮಾರ್ಗ ಮಧ್ಯದ ಮದಗದ ಕೆರೆ-ಅಯ್ಯನಕೆರೆ ಭರ್ತಿಯಾಗಿವೆ. ಅಯ್ಯನಕೆರೆ ಭರ್ತಿಯಾಗಿ ನಾಲ್ಕೈದು ದಿನಗಳು ಕಳೆದಿದ್ದು, ಕಡೂರು, ಬಿರೂರು, ಕೋಡಿಹಳ್ಳಿ, ಯಗಟಿಪುರ, ಮಲ್ಲಾಪುರ, ಚೌಳಹಿರಿಯೂರು ಮಾರ್ಗವಾಗಿ ಹೊಸದುರ್ಗ ತಾಲೂಕಿನ ಭಾಗಶೆಟ್ಟಿಹಳ್ಳಿ, ಕೊರಟಿಕೆರೆ, ಆಲಘಟ್ಟ, ಬಲ್ಲಾಳಸಮುದ್ರ ಊರಿನ ಸಮೀಪದಿಂದ ಕನ್ನಗುಂಡಿ-ಕೆಲ್ಲೋಡು ಮಾರ್ಗವಾಗಿ ವೇದಾವತಿ ನದಿ ಮೂಲಕ ವಾಣಿವಿಲಾಸ ಸಾಗರದ ಕಡೆ ಹರಿಯಲಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯನಪಟ್ಟಣದ ಬಳಿ ಅಯ್ಯನಕೆರೆ ಇದೆ. ಇದು ಚಿಕ್ಕಮಗಳೂರಿನಿಂದ ಸುಮಾರು 25 ಕಿಮೀ ದೂರದ ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿದೆ. ಅಯ್ಯನಕೆರೆಯನ್ನು ಸರೋವರಕ್ಕೂ ಹೋಲಿಕೆ ಮಾಡಲಾಗುತ್ತದೆ. ಕರ್ನಾಟಕ ಎರಡನೇ ದೊಡ್ಡ ಕೆರೆ ಇದು ಎನ್ನಲಾಗಿದ್ದು, 12ನೇ ಶತಮಾನದಲ್ಲಿ ನಿರ್ಮಿಸಲಾಗಿದೆ. ಈ ಸರೋವರ 1574 ಹೆಕ್ಟೇರ್‌ ಪ್ರದೇಶ ವ್ಯಾಪ್ತಿಯಲ್ಲಿ ವಿಸ್ತರಣೆಗೊಂಡಿದ್ದು 420.70 ಎಂಸಿಎಫ್‌ಟಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಈ ಕೆರೆ ಭರ್ತಿಯಾದರೆ 21,560 ಹೆಕ್ಟೇರ್‌ ಭೂಮಿಗೆ ನೀರಾವರಿ ಸೌಲಭ್ಯದ ಜೊತೆಗೆ ವೇದಾವತಿ ನದಿ ಮೂಲಕ ನೀರು ಹರಿದು ವಿವಿ ಸಾಗರ ಸೇರಲಿದೆ.

ಈಗಾಗಲೇ ಕೆಲ್ಲೋಡು ಬ್ಯಾರೇಜ್‌ಗೆ ನೀರು ಹರಿದಿದ್ದು ಶನಿವಾರ ಬೆಳಿಗ್ಗೆ 11:45ರ ಸುಮಾರಿಗೆ ಕೋಡಿ ಹರಿದಿದೆ. ಇಲ್ಲಿಂದ ಸ್ವಲ್ಪ ದೂರದಲ್ಲಿ ಕಾರೇಹಳ್ಳಿ ಬ್ಯಾರೇಜ್‌ ಇದ್ದು ಆ ಬ್ಯಾರೇಜ್‌ ಕೂಡಾ ಭರ್ತಿಯಾಗಿ ಭಾನುವಾರದೊಳಗೆ ವಿವಿ ಸಾಗರಕ್ಕೆ ವೇದಾವತಿ ನೀರು ಹರಿದು ಬರುವ ಸಾಧ್ಯತೆ ಇದೆ.

ಭದ್ರಾ ನೀರು ಹರಿಸಲೂ ಇದೆ ಅವಕಾಶ: ಭದ್ರಾ ಮೇಲ್ದಂಡೆ ಯೋಜನೆ ಹೊರತಾಗಿಯೂ ಭದ್ರಾ ನೀರನ್ನು ಈಗಲೇ ಹರಿಸಲು ಸಾಧ್ಯವಿದೆ. 56 ಸಾವಿರಕ್ಕೂ ಕ್ಯೂಸೆಕ್‌ ನೀರನ್ನು ಭದ್ರಾ ಡ್ಯಾಂನಿಂದ ಹೊರಗೆ ಹರಿಸಲಾಗುತ್ತಿದೆ. ಈ ನೀರನ್ನು ಅಜ್ಜಂಪುರ ಸಮೀಪದ ಬುಕ್ಕಾಂಬುದಿ ಕೆರೆಗೆ ಉಬ್ರಾಣಿ ಏತ ನೀರಾವರಿ ಯೋಜನೆ ಮೂಲಕ ಭರ್ತಿ ಮಾಡಲು ಅವಕಾಶವಿದೆ.

ಶಿವನಸಮುದ್ರ ಭರ್ತಿಯಾಗಿದ್ದು ವಿದ್ಯುತ್‌ ಉತ್ಪಾದನೆಗೆ ಸಮಸ್ಯೆ ಇಲ್ಲ. ಭದ್ರಾವತಿ ಸಮೀಪದ ಅಂತರಗಂಗೆ ಪಂಪ್‌ಹೌಸ್‌ ನಲ್ಲಿ ದೊಡ್ಡ ಸಾಮರ್ಥಯದ ಮೋಟಾರ್‌ ಪಂಪ್‌ ಅಳವಡಿಸಿ ಉಬ್ರಾಣಿ ಯೋಜನೆಗೆ ನೀರು ಹರಿಸಿದರೆ ಬುಕ್ಕಾಂಬುದಿ ಕೆರೆ ಭರ್ತಿಯಾಗಲಿದೆ. ಈ ಕೆರೆ ಭರ್ತಿಯಾದರೆ ಅಜ್ಜಂಪುರ ಸಮೀಪದ ಶಿವನಿ ಮಾರ್ಗವಾಗಿ ಬಂಗನಕಟ್ಟೆ, ಸೊಲ್ಲಾಪುರ-ಆಸಂದಿ ಗೇಟ್‌ ಮಧ್ಯದಲ್ಲಿನ ದೊಡ್ಡಹಳ್ಳ, ಕುಕ್ಕಸಂದ, ಚೌಳ ಹಿರಿಯೂರು ಮಾರ್ಗವಾಗಿ ವೇದಾವತಿ ನದಿಗೆ ಗುರುತ್ವಾಕರ್ಷಣೆ ಮೂಲಕ ನೀರು ಹರಿಸಬಹುದಾಗಿದೆ.
 
ವೇದಾವತಿಗೆ ಅಯ್ಯನಕೆರೆ, ಉಬ್ರಾಣಿ ಏತ ನೀರಾವರಿ ಯೋಜನೆ ಹಾಗೂ ಹೇಮಾವತಿ ಜಲಾಶಯದ ನೀರು ಹೆಚ್ಚಿನ ಪ್ರಮಾಣದಲ್ಲಿ ಪೋಲಾಗಿ ಹರಿದು ಹಳ್ಳ ಸೇರುತ್ತಿರುವುದನ್ನು ತಡೆದು ಹೊನ್ನವಳ್ಳಿ ಏತ ನೀರಾವರಿ ಯೋಜನೆ ಅಡಿ ಹೆಚ್ಚಿನ ಸಾಮರ್ಥ್ಯದ ಮೋಟಾರ್‌ ಪಂಪ್‌ ಅಳವಡಿಕೆ ಮಾಡಬೇಕಿದೆ. ಅಲ್ಲಿಂದ ಬಲ್ಲಾಳಸಮುದ್ರ ಕೆರೆಗೆ ನೀರು ಹರಿಸಿ ಭರ್ತಿ ಮಾಡಿದರೆ ಈ ಮೂರು ಯೋಜನೆಗಳಿಂದ ವಿವಿ ಸಾಗರಕ್ಕೆ ನಿರಂತರವಾಗಿ ನೀರು ಹರಿಸಬಹುದು. ಆಗ ಭದ್ರಾ ಮೇಲ್ದಂಡೆ ಯೋಜನೆಯ ಅಗತ್ಯ ಇಲ್ಲದೆಯೂ ವಿವಿ ಸಾಗರಕ್ಕೆ ನೀರು ಹರಿಸಬಹುದು. ಈ ಕಾರ್ಯಕ್ಕೆ ಸ್ಥಳೀಯ ಜನಪ್ರನಿಧಿಗಳು, ಸರ್ಕಾರ ಮತ್ತು ಅಧಿಕಾರಿಗಳು ಇಚ್ಛಾಶಕ್ತಿ ತೋರಬೇಕಿದೆ.
 
1933ರಲ್ಲಿ ಕೋಡಿ ಹರಿದಿತ್ತು ಜಿಲ್ಲೆಯಲ್ಲಿ ಮಳೆಯಾಗದಿದ್ದರೂ ವಿವಿ ಸಾಗರಕ್ಕೆ 1933ರಲ್ಲಿ 135.25 ಅಡಿ ನೀರು ಹರಿದು ಭರ್ತಿಯಾಗಿ ಕೋಡಿ ಹರಿದಿತ್ತು. ನಂತರ 2000ರಲ್ಲಿ 122.50 ಅಡಿ, 2010ರಲ್ಲಿ 112.75 ಅಡಿಗೂ ಅಧಿಕ ನೀರು ಹರಿದು ಬಂದು ಹತ್ತಾರು ವರ್ಷಗಳ ನೀರಿನ ಸಮಸ್ಯೆಯನ್ನು ಹೋಗಲಾಡಿಸಿತ್ತು. ಈ ಬಾರಿ ಆಗಸ್ಟ್‌ ತಿಂಗಳ ಆರಂಭದಲ್ಲೇ ಮದಗದ ಕೆರೆ ಮತ್ತು ಅಯ್ಯನಕೆರೆಗಳು ಭರ್ತಿಯಾಗಿವೆ. ಸೆಪ್ಟಂಬರ್‌, ಅಕ್ಟೋಬರ್‌ ತಿಂಗಳವರೆಗೂ ಮಳೆ ಬರುವ ಸಾಧ್ಯತೆ ಇದ್ದು ಈ ವರ್ಷ ವಾಣಿವಿಲಾಸ ಸಾಗರಕ್ಕೂ ಹೆಚ್ಚಿನ ನೀರು ಹರಿದು ಬರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

„ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.