ಐತಿಹಾಸಿಕ ಕಾದಂಬರಿ ರಚನೆ ಲೇಖಕರಿಗೆ ಸವಾಲು


Team Udayavani, Aug 27, 2018, 5:03 PM IST

cta-1.jpg

ಚಿತ್ರದುರ್ಗ: ಇತಿಹಾಸ ಪುರುಷರ ಚರಿತ್ರೆಗೆ ಧಕ್ಕೆ ಬಾರದಂತೆ ಕಾದಂಬರಿ ಬರೆಯುವುದೆಂದರೆ ಕತ್ತಿ ಮೇಲೆ ನಡೆದಂತೆ ಎಂದು ತುಮಕೂರಿನ ವಿಮರ್ಶಕ ಡಾ| ಜಿ.ವಿ.ಆನಂದಮೂರ್ತಿ ಹೇಳಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಹಾಗೂ ಗೀತಾಂಜಲಿ ಪುಸ್ತಕ ಪ್ರಕಾಶನ ಶಿವಮೊಗ್ಗ ಇವುಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿರಿಯ ಕಾದಂಬರಿಕಾರ ಡಾ| ಬಿ.ಎಲ್‌. ವೇಣು ಬರೆದ “ರಾಜಾ ಮತ್ತಿ ತಿಮ್ಮಣ್ಣ ನಾಯಕ’ ಐತಿಹಾಸಿಕ ಕಾದಂಬರಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಇತಿಹಾಸ ಪುರುಷರ ಆಳ್ವಿಕೆ, ಘಟನೆ ಕುರಿತು ಬರೆಯುವುದು ಲೇಖಕರಿಗೆ ದೊಡ್ಡ ಸವಾಲು. ಬಹಳ ಎಚ್ಚರಿಕೆ ವಹಿಸಿ ಚರಿತ್ರೆಗೆ ಚ್ಯುತಿ ಬಾರದಂತೆ ಕಾದಂಬರಿ ಬರೆಯಬೇಕು. ಆ ಕೆಲಸವನ್ನು ಬಿ.ಎಲ್‌. ವೇಣು ಈ ಕಾದಂಬರಿಯಲ್ಲಿ ಸಮರ್ಥವಾಗಿ ನಿಭಾಯಿಸಿದ್ದಾರೆ. 16ನೇ ಶತಮಾನದಲ್ಲಿ ಚಿತ್ರದುರ್ಗ ಕೋಟೆಯನ್ನು ಆಳಿದ ಪಾಳೆಯಗಾರರನ್ನು ಕೇಂದ್ರೀಕರಿಸಿ “ರಾಜಾ ಮತ್ತಿ ತಿಮ್ಮಣ್ಣ ನಾಯಕ’ ಕಾದಂಬರಿ ಬರೆದಿದ್ದಾರೆ. ಆದರ್ಶ ಸಮಾಜ ಹೇಗಿರಬೇಕೆಂಬುದನ್ನು ಬಹಳ ಸುಂದರವಾಗಿ ತಮ್ಮ ಬರಹದಲ್ಲಿ ಕಟ್ಟಿಕೊಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಎಲ್ಲ ವಿದ್ಯಮಾನ, ಪಾತ್ರ, ಘಟನೆಗಳು ಕಣ್ಣ ಮುಂದೆ ಬಂದು ನಿಲ್ಲವಷ್ಟು ಕಾದಂಬರಿ ಪ್ರಭಾವಶಾಲಿಯಾಗಿದೆ. ಶ್ರಮಿಕ ವರ್ಗಗಳಾದ ರೈತರು, ದುಡಿಯುವ ಜನ, ಮಹಿಳೆಯರು, ಭೂಮಿ ಸಮಾನ ಹಂಚಿಕೆ ಹೀಗೆ ಎಲ್ಲಾ ರೀತಿಯ ತಲ್ಲಣಗಳಿಗೆ
ಧ್ವನಿಯಾಗಿ ಕೃತಿ ಹೊರಹೊಮ್ಮಿದೆ. ರಾಜಸ್ವ, ಆಳ್ವಿಕೆ ಅರಮನೆಗೆ ಸೀಮಿತವಾಗಿರಬಾರದು ಎನ್ನುವುದನ್ನು ಮಾತು ಕ್ರಿಯೆಗಳ ಮೂಲಕ ಶಕ್ತಿಶಾಲಿಯಾಗಿ ಕಾದಂಬರಿಯಲ್ಲಿ ಕಾಣಬಹುದಾಗಿದೆ. ಬುದ್ಧ, ಬಸವ, ಅಲ್ಲಮಪ್ರಭು, ಸರ್ವಜ್ಞ ಎಲ್ಲರೂ ಕಾದಂಬರಿಯಲ್ಲಿ ಬಂದು ಹೋಗಿದ್ದಾರೆ. ಇದೊಂದು ಹೊಸ ಕಾಲದ ಚಿಂತನೆ ಸಮಾನತೆಯ ಸಮಾಜವನ್ನು ಮೈಗೂಡಿಸಿಕೊಂಡಿರುವ ಅದ್ಭುತ ಕಾದಂಬರಿ.

ದುಡಿಯವ ಜನತೆಯ ವಿವೇಚನೆಗಳನ್ನು ದೊಡ್ಡ ದಾಹವನ್ನಾಗಿಸಿಕೊಂಡು ಬರೆದಿರುವ ಈ ಕಾದಂಬರಿಯನ್ನು ಎಲ್ಲರೂ ತಪ್ಪದೇ ಓದಲೇಬೇಕು ಎಂದು ಕೋರಿದರು. ರಾಜಾ ಮತ್ತಿ ತಿಮ್ಮಣ್ಣ ನಾಯಕ ಹಿಂಸೆಯ ವಿರೋಧಿಯಾಗಿದ್ದ ಎನ್ನುವುದು ಈ ಕಾದಂಬರಿಯಿಂದ ತಿಳಿಯುತ್ತದೆ. ಹಿಂಸೆ, ಕೌರ್ಯ, ದಬ್ಟಾಳಿಕೆ ಇಲ್ಲದ ಸಮಾಜವಿರಬೇಕು ಎನ್ನುವುದು ಈ ಕಾದಂಬರಿಯ ಮೂಲ ಉದ್ದೇಶ. 

ಪಾಳೆಯಗಾರರೆಂದರೆ ಬರೀ ಧೈರ್ಯ, ಸಾಹಸಕ್ಕಷ್ಟೆ ಹೆಸರುವಾಸಿಯಾಗಿರಬಾರದು. ಕತ್ತಿ ಹಿಡಿದರೂ ದಯೆ, ಕರುಣೆ ಇರಬೇಕು ಎನ್ನುವುದನ್ನು ಬರವಣಿಗೆಯಲ್ಲಿ ವೇಣು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಸಂಶೋಧಕ ಲಕ್ಷ್ಮಣ ತೆಲಗಾವಿ ಮಾತನಾಡಿ, ಚಿತ್ರದುರ್ಗದ ಭೂ ಪರಿಸರ ಸ್ವಾಭಿಮಾನ, ಛಲವನ್ನು ಕೆರಳಿಸಿತು ಎಂಬುದು ಕಾದಂಬರಿಯಲ್ಲಿ ಸ್ಪಷ್ಟವಾಗುತ್ತದೆ. ದುರ್ಗದಲ್ಲಿ ಕೆರೆ ಕಟ್ಟೆ, ಹೊಂಡ ನಿರ್ಮಿಸಿ ಸಕಲ ಜೀವರಾಶಿಗಳಿಗೂ ನೀರಿನ ದಾಹ ತೀರಿಸುವ ಹಂಬಲ ರಾಜಾ ಮತ್ತಿ ತಿಮ್ಮಣ್ಣ ನಾಯಕರಿಗೆ ಇತ್ತು. ಛಲ ಸಾಧಿಸಿದ ಮತ್ತಿ ತಿಮ್ಮಣ್ಣ ನಾಯಕರ ವ್ಯಕ್ತಿತ್ವವನ್ನು ಬಿ.ಎಲ್‌. ವೇಣು ಸರಿಯಾಗಿ ಗ್ರಹಿಸಿಕೊಂಡು ಕಾದಂಬರಿ ಬರೆದಿದ್ದಾರೆ ಎಂದರು.

ಸಾಹಿತಿ ಶಿವಮೊಗ್ಗದ ಶ್ರೀಕಂಠ ಕೂಡಿಗೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕೆ.ಎಂ. ವೀರೇಶ್‌, ಗೀತಾಂಜಲಿ ಪುಸ್ತಕ ಪ್ರಕಾಶನದ ಮೋಹನ್‌ಕುಮಾರ್‌, ಕಾದಂಬರಿಕಾರ ಡಾ| ಬಿ.ಎಲ್‌. ವೇಣು, ಸಾಹಿತಿ-ಚಿಂತಕ ಕುಂ. ವೀರಭದ್ರಪ್ಪ, ಲೋಕೇಶ್‌ ಅಗಸನಕಟ್ಟೆ, ಪ್ರಾಧ್ಯಾಪಕ ಡಾ| ಕರಿಯಪ್ಪ ಮಾಳಿಗೆ, ಪ್ರೊ| ಲಿಂಗಪ್ಪ, ಮದಕರಿನಾಯಕ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಡಿ. ಗೋಪಾಲಸ್ವಾಮಿ ನಾಯಕ, ಸಂಗೇನಹಳ್ಳಿ ಅಶೋಕ್‌ಕುಮಾರ್‌, ಆರ್‌. ಸತ್ಯಣ್ಣ, ಭದ್ರಣ್ಣ, ಅಹೋಬಲ ನಾಯಕ, ನಿರಂಜನ ದೇವರಮನೆ, ಲಲಿತಾ ಕೃಷ್ಣಮೂರ್ತಿ ಮತ್ತಿತರರು ಇದ್ದರು. ಪ್ರಾಧ್ಯಾಪಕ ಮಹಂತೇಶ್‌ ನಿರೂಪಿಸಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.