ಪಿಒಪಿ ಗಣೇಶಗೆ ಬ್ರೇಕ್‌


Team Udayavani, Sep 7, 2018, 4:48 PM IST

cta-1.jpg

ಚಿತ್ರದುರ್ಗ: ಪರಿಸರಕ್ಕೆ ಮಾರಕವಾಗಲಿರುವ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ (ಪಿಒಪಿ) ತಯಾರಿಸಿ ರಾಸಾಯನಿಕ ಬಣ್ಣ ಲೇಪಿತವಾದ ಗಣೇಶ ಮೂರ್ತಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ಪರಿಸರ ಇಲಾಖೆ ನಿಷೇಧಿಸಿದೆ. 

ಜಿಲ್ಲೆಯಲ್ಲಿ ಪಿಒಪಿ ಮೂರ್ತಿಗಳ ಉತ್ಪಾದನೆ ಮಾಡುತ್ತಿಲ್ಲವಾದರೂ ಹೊರ ರಾಜ್ಯಗಳಿಂದ ಪಿಒಪಿ ವಿಗ್ರಹಗಳ ಪೂರೈಕೆ ಆಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಹದ್ದಿನ ಕಣ್ಣಿಟ್ಟಿದೆ.

ಈ ಬಾರಿ ಪಿಒಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಿರುವ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಈಗಾಗಲೇ ಗಣೇಶ ಮೂರ್ತಿಗಳ ತಯಾರಕರು ಹಾಗೂ ಮಾರಾಟಗಾರರಿಗೆ ಪಿಒಪಿ ಗಣೇಶ
ಮೂರ್ತಿ ತರಿಸಿ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದೆ. ಪಿಒಪಿ ಗಣೇಶ ವಿಗ್ರಹಗಳು ಹೊರಗಡೆಯಿಂದ ಪೂರೈಕೆಯಾಗದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ. ಹೊರ ಜಿಲ್ಲೆಗಳಿಂದ ಪಿಒಪಿ ಮೂರ್ತಿಗಳ ಪೂರೈಕೆ ತಡೆಗೆ ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್‌, ಮಾಲಿನ್ಯ ನಿಯಂತ್ರಣ ಮಂಡಳಿ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನೊಳಗೊಂಡ ತಂಡ ರಚಿಸಲಾಗಿದೆ.

ಶಾಲಾ-ಕಾಲೇಜುಗಳ ಮಕ್ಕಳಿಗೆ ಮಣ್ಣಿನ ಗಣೇಶ ಮೂರ್ತಿಯನ್ನೇ ಬಳಸುವಂತೆ ಪರಿಸರವಾದಿಗಳು ಸಾಕಷ್ಟು ಅರಿವು ಮೂಡಿಸುತ್ತಿದ್ದಾರೆ. ಇಷ್ಟಾದರೂ ಪಿಒಪಿ ಹಾಗೂ ರಸಾಯನಿಕ ವಿಗ್ರಹಗಳು ಜಿಲ್ಲೆಯ ಮಾರುಕಟ್ಟೆಗೆ ಬರುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಒಂದು ವೇಳೆ ಪಿಒಪಿ ಹಾಗೂ ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳ ಮಾರಾಟ ನಡೆದು ದಾಳಿ ಮಾಡಿ ವಶಪಡಿಸಿಕೊಂಡರೆ ಎಲ್ಲಿ, ಹೇಗೆ ಪಿಒಪಿ ಮೂರ್ತಿಗಳನ್ನು ಶೇಖರಿಸಿ ನಾಶ ಮಾಡಬೇಕು ಎನ್ನುವ ಚಿಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಾಡುತ್ತಿದೆ. ಅಕ್ರಮವಾಗಿ ಪಿಒಪಿ ಮೂರ್ತಿಗಳು ಬಂದಿಳಿದರೆ ಸೂಕ್ತ ಮಾಹಿತಿ ನೀಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ, ನಗರಸಭೆ, ಪೊಲೀಸ್‌ ಇಲಾಖೆಗೆ ದೂರು ನೀಡುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಜಿಲ್ಲೆಯ ಹೊರಕೆದೇವಪುರ ಗ್ರಾಮದ ಕೆಲವೇ ಕುಟುಂಬಗಳು ಗಣಪತಿ ಮೂರ್ತಿ ತಯಾರಿಸುತ್ತವೆ. ಹತ್ತಾರು ಸಾವಿರ ಗಣೇಶ ಮೂರ್ತಿಗಳ ಬೇಡಿಕೆ ಇದ್ದು ಇಷ್ಟೊಂದು ಪ್ರಮಾಣದಲ್ಲಿ ಮಣ್ಣಿನ ಮೂರ್ತಿಗಳ ತಯಾರಿ ಕಷ್ಟವಾಗುತ್ತಿದೆ.
ಮಾನವ ಸಂಪನ್ಮೂಲ ಕೊರತೆ, ಸತತ ಬರದಿಂದಾಗಿ ಹದವಾದ ಕೆರೆ ಮಣ್ಣಿನ ಅಲಭ್ಯತೆ ಮತ್ತಿತರ ಕಾರಣಗಳಿಂದಾಗಿ ಪರಿಸರ ಸ್ನೇಹಿ ಗಣಪತಿ ಮೂರ್ತಿ ಪೂರೈಕೆ ಕಷ್ಟ ಎಂಬ ಮಾತು ಕೇಳಿ ಬರುತ್ತಿದೆ

ಪಿಒಪಿ ಗಣೇಶ ಮೂರ್ತಿ ನಿಷೇಧ ಮಾಡಿದ್ದರೂ ಜಿಲ್ಲಾ ಕೇಂದ್ರದಿಂದ 20-30 ಕಿಮೀ ದೂರದ ಹಳ್ಳಿಗಳಲ್ಲಿ ಪಿಒಪಿ ಮೂರ್ತಿಗಳು ಮಾರಾಟಕ್ಕಿವೆ. ಹಾಗಾಗಿ ನಾವು ಹೆಚ್ಚು ಮಣ್ಣಿನ ಮೂರ್ತಿಗಳನ್ನು ತಯಾರಿಸುತ್ತಿಲ್ಲ. ಯಾರು ಮುಂಗಡ ಬುಕ್ಕಿಂಗ್‌ ಕೊಟ್ಟಿದ್ದಾರೋ ಅಂಥವರಿಗೆ ಮತ್ತು ಒಂದಿಷ್ಟು ಚಿಕ್ಕ ಚಿಕ್ಕ ಮೂರ್ತಿಗಳನ್ನು ತಯಾರಿಸುತ್ತಿದ್ದೇವೆ.
 ಗುರುಮೂರ್ತಿ, ಗಣಪತಿ ಮೂರ್ತಿ ತಯಾರಕ, ಹೊರಕೆದೇವಪುರ.

ಹೈಕೋರ್ಟ್‌ ಆದೇಶದ ಮೇರೆಗೆ ಪಿಒಪಿ ಗಣೇಶ ಮೂರ್ತಿ ಉತ್ಪಾದನೆ, ಮಾರಾಟ ನಿಷೇಧಿಸಲಾಗಿದೆ. ಈ ಕುರಿತು ಕಳೆದ ಒಂದು ತಿಂಗಳಿಂದ ಶಾಲಾ-ಕಾಲೇಜು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಈ ತನಕ ಪಿಒಪಿ ಮೂರ್ತಿಗಳು ಕಂಡು ಬಂದಿಲ್ಲ. ಮಣ್ಣಿನ ಗಣೇಶ ಮೂರ್ತಿಗಳನ್ನೇ ತಯಾರಿಸುವಂತೆ ತಯಾರಕರಿಗೆ ಮನವಿ ಮಾಡಿಕೊಳ್ಳಲಾಗಿದೆ.
 ಮುರಳೀಧರ ರಾವ್‌, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ.

ಚಿತ್ರದುರ್ಗ ನಗರಕ್ಕೆ ಪಿಒಪಿ ಗಣೇಶ ಮೂರ್ತಿಗಳು ಹೊರ ಜಿಲ್ಲೆಗಳಿಂದ ಬರುತ್ತವೆ. ಈಗಾಗಲೇ ಎಲ್ಲ ಗಣೇಶ ಮೂರ್ತಿ ಮಾರಾಟಗಾರರಿಗೆ ಸೂಚನೆ ನೀಡಲಾಗಿದ್ದು, ಯಾವುದೇ ಕಾರಣಕ್ಕೂ ಪಿಒಪಿ ಗಣಪತಿ ಮಾರಾಟ ಮಾಡದಂತೆ ಎಚ್ಚರಿಸಲಾಗಿದೆ. ನಗರಸಭೆ ಮೂರ್ತಿ ತಯಾರಕರು, ಮಾರಾಟಗಾರರ ನಿಗಾ ಇಟ್ಟಿದೆ.
 ಸಿ. ಚಂದ್ರಪ್ಪ, ನಗರಸಭೆ ಆಯುಕ್ತರು.

ಪಿಒಪಿ ಗಣಪತಿ ಮಾರಾಟ ತಡೆಯಲು ಪರಿಸರ ಮಾಲಿನ್ಯ ಮಂಡಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಯಾವುದೇ ಕಾರಣಕ್ಕೂ ಪಿಒಪಿ ಮೂರ್ತಿಗಳನ್ನು ಖರೀದಿಸಿ ತಂದು ಮಾರಾಟ ಮಾಡದಂತೆ ಎಚ್ಚರ ವಹಿಸಲಾಗಿದೆ. ಇದನ್ನೂ
ಮೀರಿ ಮಾರಾಟ ಮಾಡಿದರೆ ವಶಪಡಿಸಿಕೊಳ್ಳಲಾಗುತ್ತದೆ. ಪಿಒಪಿ ಗಣಪನ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ.
 ಶ್ರೀನಾಥ್‌ ಜೋಶಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ.

„ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.