ಮೀಸಲಾತಿ ಬದಲಾವಣೆ ಬಿಜೆಪಿ ಅಧಿಕಾರದ ಕನಸಿಗೆ ಕೈ ಹೊಡೆತ?


Team Udayavani, Sep 8, 2018, 5:30 PM IST

cta-1.jpg

ಚಿತ್ರದುರ್ಗ: ಇಲ್ಲಿನ ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ ಬದಲಾಗಿದ್ದು, ಪಕ್ಷಗಳ ಲೆಕ್ಕಾಚಾರ ತಲೆಕಳಗಾಗುವ ಲಕ್ಷಣಗಳಿವೆ. ಮೀಸಲಾತಿ ಬದಲಾವಣೆಯಿಂದ ಪಕ್ಷೇತರ ಸದಸ್ಯರಿಗೆ ಮಾತ್ರ “ಭಾರಿ ಬೆಲೆ’ ಬಂದಿದೆ.

ಈ ಹಿಂದಿನ ಮೀಸಲಾತಿ ಪ್ರಕಾರ ನಗರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ (ಮಹಿಳೆ), ಉಪಾಧ್ಯಕ್ಷ ಸ್ಥಾನ ಬಿಸಿಎಂ
(ಬಿ)ಗೆ ಮೀಸಲಾಗಿತ್ತು. ಆದರೆ ದಿಢೀರ್‌ ಬೆಳವಣಿಗೆಯಲ್ಲಿ ಹೊಸ ಮೀಸಲಾತಿ ಪ್ರಕಟಿಸಲಾಗಿದ್ದು, ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ ನಿಗದಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಚಿತ್ರದುರ್ಗ ನಗರಸಭೆ 35 ವಾರ್ಡ್‌ಗಳಲ್ಲಿ ಬಿಜೆಪಿ-17, ಜೆಡಿಎಸ್‌- 6, ಕಾಂಗ್ರೆಸ್‌-5, ಪಕ್ಷೇತರರು-7 ಕಡೆ ಗೆಲುವು ಸಾಧಿಸಿದ್ದಾರೆ. ನಗರಸಭೆ ಆಡಳಿತ ಚುಕ್ಕಾಣಿ ಹಿಡಿಯಲು 18 ಸ್ಥಾನಗಳ ಅಗತ್ಯ ಇದ್ದು, ಸದ್ಯ ಬಿಜೆಪಿ 17 ಸ್ಥಾನ ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಬಿಜೆಪಿಗೆ ಒಂದು ಸ್ಥಾನದ ಕೊರತೆ ಇದೆ. ಇನ್ನೊಂದೆಡೆ
ಜೆಡಿಎಸ್‌, ಕಾಂಗ್ರೆಸ್‌ ಮತ್ತು ಪಕ್ಷೇತರರು ಸೇರಿದರೆ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್‌ ಸಂಖ್ಯೆ 18 ಆಗಲಿದ್ದು ಬಹುಮತ ಸಾಬೀತುಪಡಿಸಬಹುದು. ಇದಲ್ಲದೆ ಸಂಸದ ಬಿ.ಎನ್‌. ಚಂದ್ರಪ್ಪನವರ ಒಂದು ಮತ ಕೂಡ ಇದ್ದು ಒಟ್ಟು 19 ಮತಗಳಾಗಲಿದೆ.

ಹೀಗಾಗಿ ಸುಲಭವಾಗಿ ಅಧಿಕಾರ ಹಿಡಿಯಲು ಜೆಡಿಎಸ್‌-ಕಾಂಗ್ರೆಸ್‌ ಪಕ್ಷದ ಮುಖಂಡರು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಜೆಡಿಎಸ್‌, ಕಾಂಗ್ರೆಸ್‌ ಮತ್ತು ಪಕ್ಷೇತರರು ಒಗ್ಗೂಡಿ ನಗರಸಭೆ ಅಧಿಕಾರ ಹಿಡಿಯುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಅಧಿಕಾರ ಹಿಡಿಯುವ ಉದ್ದೇಶದಿಂದಲೇ ಅಧ್ಯಕ್ಷ ಸ್ಥಾನದ ಮೀಸಲಾತಿ ಬದಲಾಯಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಮೀಸಲಾತಿ ಬದಲಾಗಿದ್ದರಿಂದ ಪಕ್ಷೇತರ ಸದಸ್ಯರೇ ನಿರ್ಣಾಯಕರಾಗಿದ್ದು ಇವರ ಬೆಂಬಲ ಪಡೆಯಲು ಕಸರತ್ತು ಆರಂಭವಾಗಿದೆ.

ಈ ಮೊದಲಿದ್ದ ಎಸ್ಟಿ ಮಹಿಳೆ ಮೀಸಲಾತಿಯಡಿ ಬಿಜೆಪಿಗೆ ಅಧಿಕಾರ ದಕ್ಕುತ್ತಿತ್ತು. ಪರಿಶಿಷ್ಟ ಪಂಗಡ ಮಹಿಳಾ
ಮೀಸಲಾತಿಯಡಿ ಆಯ್ಕೆಯಾಗಿದ್ದ 1ನೇ ವಾರ್ಡ್‌ನ ನಾಗಮ್ಮ, 19ನೇ ವಾರ್ಡ್‌ನ ತಿಪ್ಪಮ್ಮ ವೆಂಕಟೇಶ್‌ ಅಧ್ಯಕ್ಷ ಹುದ್ದೆ
ರೇಸ್‌ನಲ್ಲಿದ್ದರು. ಆದರೆ ಈಗ ಮೀಸಲಾತಿ ಬದಲಾಗಿದ್ದು, ವಾಲ್ಮೀಕಿ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ದಕ್ಕುವುದು ಅನುಮಾನ ಎನ್ನುವ ಪರಿಸ್ಥಿತಿ ನಿರ್ಮಾಣವಾಗಲಿದೆ.

ಬಿಜೆಪಿಗಿಲ್ಲ ತೊಂದರೆ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಅವರ ರಾಜಕೀಯ ತಂತ್ರಗಳಿಂದ ನಗರಸಭೆಯಲ್ಲಿ ಬಿಜೆಪಿ ಅಧಿಕಾರದ ಹೊಸ್ತಿಲಿಗೆ ಬಂದು ನಿಂತಿದೆ. ಈಗ ಮೀಸಲಾತಿ ಬದಲಾದರೂ ಸಹ 7 ಜನ ಪಕ್ಷೇತರ ಸದಸ್ಯರಲ್ಲಿ ಮೂರು ಮಂದಿ ಬಿಜೆಪಿ ಪರವಾಗಿದ್ದು, ಈಗಾಗಲೇ ಗುರುತಿಸಿಕೊಂಡಿದ್ದಾರೆ. 6ನೇ ವಾರ್ಡ್‌ ಕೆ. ಮಂಜುಳಾ, 20ನೇ ವಾರ್ಡ್‌ ಅನಿತಾ ರಮೇಶ್‌, 24ನೇ ವಾರ್ಡ್‌ ಮಹಮ್ಮದ್‌ ದಾವೊದ್‌, ಶಾಸಕರ ಒಂದು ಮತ ಸೇರಿ ಒಟ್ಟು
21 ಮತಗಳಾಗಲಿದೆ.

ಕಾಂಗ್ರೆಸ್‌ ಪಕ್ಷದಿಂದ ಆಯ್ಕೆಯಾಗಿರುವ 3ನೇ ವಾರ್ಡ್‌ನ ಗೀತಾ ವೆಂಕಟೇಶ್‌ ಬಿಜೆಪಿಗೆ ಬೆಂಬಲ ನೀಡಲಿದ್ದು, ಬಿಜೆಪಿ ಬಲ 22ಕ್ಕೆ ಏರಲಿದೆ ಎನ್ನುವ ಲೆಕ್ಕಾಚಾರ ಬಿಜೆಪಿಯಲ್ಲಿದೆ.
ಹೀಗಾಗಿ ಬಿಜೆಪಿಯಿಂದ ಅ ಧಿಕಾರ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ. ಆದರೆ ಅತೀ ಹೆಚ್ಚು ಸ್ಥಾನ ಪಡೆದಿರುವ ಬಿಜೆಪಿ ಗದ್ದುಗೆ ಏರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಸಾಮಾನ್ಯ ವರ್ಗದ ಮೀಸಲಿನಲ್ಲಿ ಯಾರೂ ಬೇಕಾದರೂ ಸ್ಪರ್ಧೆ ಮಾಡಬಹುದಾಗಿದ್ದು, ಸದಸ್ಯರೆಲ್ಲರೂ ಒಟ್ಟಿಗೆ ಕೂತು ತೀರ್ಮಾನ ಮಾಡಲಿದ್ದಾರೆ.
 ಜಿ.ಎಚ್‌.ತಿಪ್ಪಾರೆಡ್ಡಿ, ಶಾಸಕರು. 

ನಗರಸಭೆ ರಾಜಕಾರಣಕ್ಕೂ, ಮೀಸಲಾತಿ ಬದಲಾವಣೆಗೂ ನನಗೂ ಸಂಬಂಧವಿಲ್ಲ. ಎಸ್ಟಿ ಮೀಸಲಾತಿಯಲ್ಲಿ ಯಾರನ್ನು
ಅಧ್ಯಕ್ಷರನ್ನಾಗಿ ಮಾಡಬೇಕೆಂದು ಬಿಜೆಪಿಯವರು ನಿರ್ಧರಿಸಿದ್ದರೋ ಸಾಮಾನ್ಯ ಮೀಸಲಿನಲ್ಲೂ ಮಾಡಬಹುದಾಗಿದೆ. ವಾಲ್ಮೀಕಿ ಜಾತಿ ಬಗ್ಗೆ ಅವರಿಗೆ ಅನುಕಂಪ ಇದ್ದರೆ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಲಿ.
 ಬಿ.ಕಾಂತರಾಜ್‌, ರಾಜ್ಯ ಪ್ರಧಾನ ಕಾರ್ಯದರ್ಶಿ, ಜೆಡಿಎಸ್‌.

ಟಾಪ್ ನ್ಯೂಸ್

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.