ಸುಡುಗಾಡು ಸಿದ್ಧರಿಗೆ ಜಾತಿ ಪ್ರಮಾಣ ಪತ್ರ ನೀಡದೆ ಶೋಷಣೆ


Team Udayavani, Sep 17, 2018, 5:22 PM IST

cta.jpg

ಚಿತ್ರದುರ್ಗ: ಸುಡುಗಾಡು ಸಿದ್ಧರಿಗೆ ಜಾತಿ ಪ್ರಮಾಣ ಪತ್ರಗಳನ್ನು ನೀಡದೆ ಶೋಷಣೆ ಮಾಡಲಾಗುತ್ತಿದೆ ಎಂದು
ಅಖೀಲ ಕರ್ನಾಟಕ ಸುಡುಗಾಡು ಸಿದ್ಧರ ಮಹಾಸಭಾ ರಾಜ್ಯಾಧ್ಯಕ್ಷ ಲೋಹಿತಾಕ್ಷ ಹೇಳಿದರು. ಇಲ್ಲಿನ ಪತ್ರಕರ್ತರ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸುಡುಗಾಡು ಸಿದ್ಧ ಸಮುದಾಯದ ಮುಖಂಡರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯಾ ಬಂದು 72 ವರ್ಷ ಕಳೆದರೂ ಸುಡುಗಾಡು ಸಿದ್ಧರಿಗೆ ಇನ್ನೂ ಸ್ವಾತಂತ್ರ್ಯಾ ಸಿಕ್ಕಿಲ್ಲ. ಸುಡುಗಾಡು ಸಿದ್ಧರು ಎಂದು ಹೇಳಿಕೊಳ್ಳಲು ಸರ್ಕಾರ ನಮಗೆ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ. ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲವಾದ್ದರಿಂದ ಮಕ್ಕಳನ್ನು ಶಾಲೆಗೆ ಸೇರಿಸುವಂತಿಲ್ಲ. ಜಾತಿ ಪ್ರಮಾಣ ಪತ್ರ ಕೊಡಿ ಎಂದು ಸಾಕಷ್ಟು ಹೋರಾಟ ಮಾಡುತ್ತಿದ್ದರೂ ಇಂದಿಗೂ ಜಾತಿ ಪ್ರಮಾಣ ಪತ್ರ ನೀಡದೆ ಸುಡುಗಾಡು ಸಿದ್ಧರನ್ನು ಜಿಲ್ಲಾಡಳಿತ ಅವಮಾನಿಸುತ್ತಿದೆ ಎಂದು ದೂರಿದರು.

ಸಾಮಾಜಿಕವಾಗಿ ಅತ್ಯಂತ ಶೋಷಣೆಗೆ ಒಳಗಾಗಿರುವ ಸುಡುಗಾಡು ಸಿದ್ಧರಿಗೆ ಒಂದು ನೆಲೆಯಿಲ್ಲ. ಹೊಟ್ಟೆಪಾಡಿಗಾಗಿ
ಊರೂರು ಅಲೆಯುತ್ತಿರುವ ಸಮುದಾಯಕ್ಕೆ ದಿಕ್ಕು ದೆಸೆ ಎನ್ನುವುದಿಲ್ಲ. ಜೋರಾಗಿ ಗಾಳಿ ಬೀಸಿದರೆ ಹಾರುವ,
ಮಳೆಗಾಲದಲ್ಲಿ ಸೋರುವ ಟೆಂಟ್‌ಗಳಲ್ಲೇ ಸುಡುಗಾಡು ಸಿದ್ಧರು ದಿನದೂಡುವಂತಾಗಿದೆ. ಶೇ. 90ರಷ್ಟು ಮಂದಿಗೆ
ಸೂರಿಲ್ಲ ಎಂದರು. ಶಾಶ್ವತ ಸೂರಿಗಾಗಿ ಹಲವು ಬಾರಿ ಮನವಿ ಸಲ್ಲಿಸಿದರೂ ಜಿಲ್ಲಾಡಳಿತ ಕನಿಷ್ಟ ಸ್ಪಂದನೆ ಮಾಡುತ್ತಿಲ್ಲ. ಮತದಾರರ ಗುರುತಿನ ಚೀಟಿ, ಆಧಾರ್‌ ಚೀಟಿಗೂ ನಿರಂತರ ಹೋರಾಟ ನಡೆಸಬೇಕಾದ ಪರಿಸ್ಥಿತಿ ಇದೆ. ಅಲೆಮಾರಿಗಳಾಗಿರುವ ಸುಡುಗಾಡು ಸಿದ್ಧರ ಮಕ್ಕಳಿಗೆ ಶಿಕ್ಷಣ ಇಲ್ಲವಾಗಿದೆ. ಊರೂರು ಅಲೆದು ಸಂಜೆಯಾಗುತ್ತಿದ್ದಂತೆ ಊರ ಹೊರಗಿನ ಬಯಲು ಪ್ರದೇಶದಲ್ಲಿ ಬಿಡಾರ ಹೂಡಿ ಜೀವನ ಸಾಗಿಸುವುದೇ ದೊಡ್ಡ ಸಾಧನೆ ಎಂಬಂತಾಗಿದೆ. ಮಕ್ಕಳನ್ನು ಕಂಕುಳಲ್ಲಿಟ್ಟುಕೊಂಡು ಕೂದಲು ಮತ್ತು ಪ್ಲ್ಯಾಸ್ಟಿಕ್‌ ಸಂಗ್ರಹಣೆ ಮೂಲಕ ಹೊಟ್ಟೆ ಹೊರೆಯಲಾಗುತ್ತಿದ್ದು ಬಡತನವನ್ನೇ ಹಾಸಿ ಹೊದ್ದಿದ್ದು ಮಕ್ಕಳು ಶಾಲೆ ಮುಖ ಕಾಣುತ್ತಿಲ್ಲ. ಕೇವಲ ಹೊಟ್ಟೆಬಟ್ಟೆ ತುಂಬಿದರೆ ಸಾಕೆನ್ನುವ ಇರಾದೆ ಸಮುದಾಯದ್ದಾಗಿದೆ ಎಂದರು.

ಪಾರಂಪರಿಕ ವತ್ತಿ ನಂಬಿ ಅಲೆಮಾರಿಯಾಗಿ ನಿತ್ಯ ಊರೂರು ಅಲೆಯಬೇಕಿದೆ. ಬಿಪಿಎಲ್‌ ಪಡಿತರ ಚೀಟಿ ನೀಡುತ್ತಿಲ್ಲ. ನಿವೇಶನ ಮತ್ತು ವಸತಿ ಸೇರಿದಂತೆ ಸರ್ಕಾರದ ಯಾವ ಸೌಲಭ್ಯಗಳೂ ಸಮುದಾಯಕ್ಕೆ ದಕ್ಕುತ್ತಿಲ್ಲ. ರಾಜ್ಯ
ಸರ್ಕಾರ ಅಲೆಮಾರಿಗಳ ಕೋಶ ಆರಂಭಿಸಿದೆ. ಆದರೆ ಅದು ಬೇರೆಯವರ ಪಾಲಾಗುತ್ತಿದೆ ಎಂದು ದೂರಿದರು.

ಅಖೀಲ ಕರ್ನಾಟಕ ಸುಡುಗಾಡು ಸಿದ್ಧರ ಮಹಾಸಭಾ ಜಿಲ್ಲಾಧ್ಯಕ್ಷ ಹಿರಿಯೂರು ಕೃಷ್ಣಪ್ಪ ಮಾತನಾಡಿ, ಸುಡುಗಾಡು
ಸಿದ್ಧ ಸಮುದಾಯದವರನ್ನು ಸರ್ಕಾರ ಮನುಷ್ಯರಂತೆ ಕಾಣಲಿ. ಇಂದಿಗೂ ಸುಡುಗಾಡು ಸಿದ್ಧರಿಗೆ ನಿವೇಶನವಿಲ್ಲ,
ಮನೆಯಿಲ್ಲ, ಇದ್ದರೂ ಬಟ್ಟೆ ಟೆಂಟ್‌ ಗಳು ಇದ್ದು ವಿದ್ಯುತ್‌, ಕುಡಿವ ನೀರು, ಶೌಚಾಲಯ ಸೇರಿದಂತೆ ಬಹುತೇಕ
ಸೌಲಭ್ಯಗಳು ಮರೀಚಿಕೆಯಾಗಿವೆ ಎಂದರು.

ರಾಜ್ಯ ಸರ್ಕಾರ ಕೂಡಲೇ ಎಲ್ಲ ಸುಡುಗಾಡು ಸಿದ್ಧರಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಆದೇಶ ನೀಡಬೇಕು.
ಇಲ್ಲವಾದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ವಕೀಲ ದಾವಣಗೆರೆ ವೀರೇಶ್‌, ಸಮುದಾಯದ ಮುಖಂಡರಾದ ಕೆ.ಎಂ. ನಾಗರಾಜ್‌, ಕುರಿ ಜಯಣ್ಣ, ಅಪ್ಪಣ್ಣ, ಗೌರಿಪುರದ ಹೊನ್ನೂರಪ್ಪ, ಗಂಗಣ್ಣ, ನಾಯಕನಹಟ್ಟಿ ಸತ್ಯಪ್ಪ ಇತರರು ಇದ್ದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.