ತಂಡಗದಲ್ಲಿಂದು ಡಿಸಿ ಗ್ರಾಮ ವಾಸ್ತವ್ಯ
Team Udayavani, Oct 5, 2018, 5:34 PM IST
ಹೊಸದುರ್ಗ: ನೂತನ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅ. 5 ರಂದು ತಾಲೂಕಿನ ತಂಡಗ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಡಲಿದ್ದು, ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಆರಂಭದಲ್ಲಿ ಜನಸಂಪರ್ಕ ಸಭೆ ನಡೆಸಲಿರುವ ಜಿಲ್ಲಾಧಿಕಾರಿಯವರು, ನಂತರ ತಂಡಗ ಗ್ರಾಮದಲ್ಲಿ ಸಂಚರಿಸಲಿದ್ದಾರೆ. ಇದಾದ ಬಳಿ ಗ್ರಾಪಂ ವ್ಯಾಪ್ತಿಯ ಜನರ ಅಹವಾಲು ಆಲಿಸಿ ಫಲಾನುಭವಿಗಳಿಗೆ ಸರ್ಕಾರಿ ಸವಲತ್ತು ವಿತರಿಸಲಿದ್ದಾರೆ. ಗ್ರಾಮದ ಬಿಸಿಎಂ ಹಾಸ್ಟೆಲ್ನಲ್ಲಿ ಜಿಲ್ಲಾಧಿಕಾರಿ ಗಿರೀಶ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ವಾಸ್ತವ್ಯ ಮಾಡಲಿದ್ದಾರೆ.
ತಹಶೀಲ್ದಾರ್ ಎಂ.ಪಿ. ಕವಿರಾಜ್ ನೇತೃತ್ವದಲ್ಲಿ ಅಧಿಕಾರಿಗಳು ಗ್ರಾಮ ವಾಸ್ತವ್ಯಕ್ಕೆ ಸಿದ್ಧತೆ ಕೈಗೊಂಡಿದ್ದಾರೆ. ಗುರುವಾರ ತಾಲೂಕು ಆಡಳಿತದೊಂದಿಗೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಯುವಕರು ಗ್ರಾಮದಲ್ಲಿ ಸ್ವತ್ಛತಾ ಕಾರ್ಯ ಕೈಗೊಂಡರು.
ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಆರ್.ಗಿರೀಶ್ ಅವರು ಜಿಲ್ಲೆಯಲ್ಲಿ ಮೊದಲ ಬಾರಿ ಜನಸಂಪರ್ಕ
ಸಭೆ ಹಾಗೂ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಸಾರ್ವಜನಿಕ ಸಮಸ್ಯೆಗಳು, ಗ್ರಾಮದಅಭಿವೃದ್ಧಿ, ಆರೋಗ್ಯ, ಶಿಕ್ಷಣ, ಸಾರಿಗೆ ಹಾಗೂ ರಸ್ತೆ ಸಂಪರ್ಕ, ಕುಡಿಯುವ ನೀರು ಮೊದಲಾದ ಸಮಸ್ಯೆಗಳನ್ನು ಜಿಲ್ಲಾಧಿಕಾರಿಯವರ ಮುಂದಿಟ್ಟು ಪರಿಹಾರ ಪಡೆಯುವ ನಿರೀಕ್ಷೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು