ಕೆರೆಗೆ ಮಾರಕವಾದ ಬಳ್ಳಾರಿ ಜಾಲಿ!


Team Udayavani, Oct 22, 2018, 4:59 PM IST

cta-1.jpg

ಚಳ್ಳಕೆರೆ: ಕಳೆದ ಮೂರ್‍ನಾಲ್ಕು ದಿನಗಳಿಂದ ಹಿಂದೆ ಸುರಿದ ಮಳೆಯಿಂದ ತಾಲೂಕಿನ ಬಹುತೇಕ ಕೆರೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ನೀರು ಸಂಗ್ರಹಗೊಂಡಿದೆ. ಆದರೆ ಕೆರೆಗಳಲ್ಲಿ ಜಾಲಿ ಗಿಡಗಳು ತುಂಬಿ ಹೋಗಿದೆ. ಇದರಿಂದ ಕೆರೆ ಏರಿ ಒಡೆದು ನೀರು ಪೋಲಾಗುವ ಭೀತಿ ಎದುರಾಗಿದೆ.

ಮಳೆ ವೈಫಲ್ಯದಿಂದ ಕೆರೆಗಳ ಅಭಿವೃದ್ಧಿ ಬಗ್ಗೆ ಸಣ್ಣ ನೀರಾವರಿ ಇಲಾಖೆ ಅಷ್ಟೊಂದು ಗಮನ ನೀಡಿಲ್ಲ. ಸರ್ಕಾರ ಕೆರೆ ಸಂಜೀವಿನಿ ಯೋಜನೆಯಡಿ ಹಲವಾರು ಕೆರೆಗಳ ದುರಸ್ತಿಗೆ ಅನುದಾನ ಬಿಡುಗಡೆ ಮಾಡಿದೆ. ಆದರೆ ಬಹುತೇಕ ಕೆರೆಗಳಲ್ಲಿ ದುರಸ್ತಿ ಕಾರ್ಯ ಕೈಗೊಳ್ಳದೇ ಇರುವುದರಿಂದ
ನೀರು ವ್ಯರ್ಥವಾಗುತ್ತಿದೆ. ಇದರಿಂದ ಕೆರೆ ಏರಿ ಒಡೆದುಹೋಗುವ ಅಪಾಯ ಸೃಷ್ಟಿಯಾಗಿದೆ. 

ಮಳೆಯಿಂದ ಕೆಲವು ಕೆರೆಗಳಲ್ಲಿ ನೀರಿದ್ದರೂ ಸೋರಿಕೆಯಿಂದಾಗಿ ವ್ಯರ್ಥವಾಗಿ ಹರಿಯುತ್ತಿದೆ. ಹತ್ತು ವರ್ಷಗಳಿಂದ ಬತ್ತಿ ಹೋಗಿದ್ದ ಚಳ್ಳಕೆರೆ ನಗರದ ಅಜ್ಜಯ್ಯನಗುಡಿ ಕೆರೆಯಲ್ಲೂ ನೀರು ಕಾಣಿಸಿಕೊಂಡಿದೆ. ಆದರೆ ಕೆರೆ ಏರಿಯಲ್ಲಿ ನೀರು ಸೋರಿಕೆಯಾಗುತ್ತಿರುವುದರಿಂದ ಜನರಲ್ಲಿ ಆತಂಕ ಮೂಡಿದೆ. ತಾಲೂಕಿನ ಬಹುತೇಕ ಕೆರೆಗಳಲ್ಲಿ ಇದೇ ಪರಿಸ್ಥಿತಿ ಇದೆ. ದೊಡ್ಡೇರಿ, ಎನ್‌. ಉಪ್ಪಾರಹಟ್ಟಿ, ರಾಣಿಕೆರೆ, ಚಿಕ್ಕಮಧುರೆ ಕೆರೆ, ನಗರಂಗೆರೆ ಕೆರೆ, ತಳಕು ಕೆರೆ, ಬೆಳೆಗೆರೆ ಕೆರೆ ಮುಂತಾದ ಕೆರೆಗಳಲ್ಲಿ ಜಾಲಿ ಗಿಡಗಳು ಮಿತಿ ಮೀರಿ ಬೆಳೆದಿವೆ.

ಗಿಡಗಳ ಬೇರು ಆಳವಾಗಿ ಬೇರೂರಿದ್ದು, ಅವುಗಳಿಂದ ಕೆರೆ ಏರಿಯಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿದೆ. ತುರ್ತಾಗಿ ಕೆರೆಗಳನ್ನು ದುರಸ್ತಿ ಮಾಡಿಸಿದಲ್ಲಿ ಜಾನುವಾರುಗಳಿಗೆ ಮತ್ತು ಕುಡಿಯುವ ನೀರಿನ ಸಮಸ್ಯೆ ಅಲ್ಪ ಪ್ರಮಾಣದಲ್ಲಾದರೂ ಬಗೆಹರಿಯಬಹುದು. ಸುಮಾರು ನಾಲ್ಕು ದಿನಗಳಿಂದ ನೀರು ಸೋರಿ ಹೋಗುತ್ತಿದ್ದರೂ ತಡೆಗಟ್ಟಲು ಇಲಾಖೆ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ಷೇಪಿಸಿದ್ದಾರೆ.

ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.  ಐತಿಹಾಸಿಕ ಕೆರೆಗಳನ್ನು ಉಳಿಸಲು ಕೆರೆ ಏರಿ ದುರಸ್ತಿಗೊಳಿಸಬೇಕು. ಕೆರೆಯ ಒಳ ಭಾಗದಲ್ಲಿ ಬೆಳೆದ ಜಾಲಿಯನ್ನು ತೆರವು ಮಾಡಬೇಕು. ಈ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯ ಸಲ್ಲದು. ಕೆರೆಗಳ ಸಂರಕ್ಷಣೆಗೆ ಹೋರಾಟ ನಡೆಸಲು ನಾವು ಸಿದ್ಧರಿದ್ದೇವೆ. 
 ಮೀರಾಸಾಬಿಹಳ್ಳಿ ಮೋಹನ್‌, ಯುವ ಮುಖಂಡ.

ತಾಲೂಕಿನ ಹಲವಾರು ಕೆರೆಗಳಲ್ಲಿ ಮಿತಿ ಮೀರಿ ಬೆಳೆದ ಬಳ್ಳಾರಿ ಜಾಲಿಯಿಂದ ಮೀನುಗಾರರಿಗೆ ಮೀನು ಹಿಡಿಯಲಾಗುತ್ತಿಲ್ಲ, ಜಾನುವಾರುಗಳಿಗೂ ನೀರು ಕುಡಿಯಲು ಆಗುತ್ತಿಲ್ಲ. ಗ್ರಾಮಸ್ಥರು ಕೆರೆ ನೀರನ್ನು ಬಳಸಿಕೊಳ್ಳಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು.
 ಎನ್‌. ವೀರಣ್ಣ ಉಪ್ಪಾರಹಟ್ಟಿ, ರೈತ.

„ಕೆ.ಎಸ್‌. ರಾಘವೇಂದ್ರ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.