ಸಿಸಿ ರಸ್ತೆ ಪೂರ್ಣಗೊಂಡಿದ್ರೂ ಬಳಕೆ ಆಗ್ತಿಲ್ಲ!


Team Udayavani, Oct 22, 2018, 5:17 PM IST

cta-2.jpg

ಮೊಳಕಾಲ್ಮೂರು: ಪಟ್ಟಣದ ಖಾಸಗಿ ಬಸ್‌ ನಿಲ್ದಾಣದ ಸಿಸಿ ರಸ್ತೆ ಕಾಮಗಾರಿ ಪೂರ್ಣಗೊಂಡು ಹಲವಾರು ದಿನಗಳಾಗಿವೆ. ಆದರೂ ಪ್ರಯಾಣಿಕರ ಬಳಕೆಗೆ ನೀಡುವಲ್ಲಿ ಪಟ್ಟಣ ಪಂಚಾಯತ್‌ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ.

ತಾಲೂಕಿನ ಕೇಂದ್ರ ಸ್ಥಾನವಾದ ಪಟ್ಟಣದ ಖಾಸಗಿ ಬಸ್‌ ನಿಲ್ದಾಣದ ಆವರಣ ಧೂಳಿನಿಂದ ಕೂಡಿತ್ತು. ಸರಿಯಾದ ರಸ್ತೆ ಇಲ್ಲದ ಕಾರಣ ಪ್ರಯಾಣಿಕರು ಪರದಾಡುವಂತಾಗಿತ್ತು. ಇದರ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗಳಿಗೆ ಸ್ಪಂದಿಸಿದ ಶಾಸ ಕರು, ಪಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ನಗರೋತ್ಥಾನ ಯೋಜನೆಯಡಿ 46 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದರು. 

ಕಾಮಗಾರಿ ಪ್ರಾರಂಭವಾಗುವ ಮುನ್ನ ಬಸ್‌ ನಿಲ್ದಾಣದ ಆವರಣದಲ್ಲಿದ್ದ ಗೂಡಂಗಡಿಗಳನ್ನು ತೆರವುಗೊಳಿಸಲಾಗಿತ್ತು. ಕಾಮಗಾರಿಯ ಗುತ್ತಿಗೆ ಪಡೆದ ಗುತ್ತಿಗೆದಾರರು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿಕೊಟ್ಟಿದ್ದಾರೆ. ಆದರೆ ಇನ್ನೂ ಬಳಕೆಗೆ ನೀಡದೇ ಇರುವುದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಸ್‌ ನಿಲ್ದಾಣ ಆವರಣದಲ್ಲಿ ಸಿಸಿ ರಸ್ತೆ ಕಾಮಗಾರಿ ನಡೆದಿದ್ದರೂ ಬಸ್‌ಗಳ ನಿಲುಗಡೆಗೆ ಪಪಂ ಪರ್ಯಾಯ ವ್ಯವಸ್ಥೆ ಮಾಡಿಲ್ಲ. ಇದರಿಂದಾಗಿ ಚಿತ್ರದುರ್ಗ, ದಾವಣಗೆರೆ , ಬಳ್ಳಾರಿ, ಬೆಂಗಳೂರು, ಚಳ್ಳಕೆರೆ , ರಾಯದುರ್ಗ, ಅನಂತಪುರ ಸೇರಿದಂತೆ ವಿವಿಧ ಪ್ರದೇಶಗಳಿಗೆ ತೆರಳುವ ಖಾಸಗಿ ಮತ್ತು ಸರ್ಕಾರಿ ಬಸ್‌ಗಳನ್ನು ಕಿರಿದಾದ ಮುಖ್ಯ ರಸ್ತೆ ಬದಿಯಲ್ಲಿಯೇ ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಸಂಚಾರ ದಟ್ಟಣೆ ಸಮಸ್ಯೆ ಉದ್ಭವಿಸಿದೆ. ರಸ್ತೆಯ ಎರಡೂ ಬದಿಗಳಲ್ಲಿ ಗೂಡಂಗಡಿಗಳಿದ್ದು, ಅವರ ವ್ಯಾಪಾರಕ್ಕೂ ತೊಂದರೆಯಾಗುತ್ತಿದೆ.

ಕೆಲವು ಬಸ್‌ಗಳನ್ನು ಕೆಇಬಿ ವೃತ್ತದ ಬಳಿ ನಿಲುಗಡೆ ಮಾಡುವುದರಿಂದ ಮಹಿಳೆಯರು, ಮಕ್ಕಳು, ವೃದ್ಧರು ಕೆಇಬಿ ವೃತ್ತದವರೆಗೂ ನಡೆದುಕೊಂಡು ಬರಬೇಕಾಗಿದೆ. ರಸ್ತೆ ಬದಿಯ ವ್ಯಾಪಾರಸ್ಥರು ಜಾಗದ ಕೊರತೆಯಿಂದ ಪರದಾಡುವಂತಾಗಿದೆ. ಬಸ್‌ನಿಲ್ದಾಣದಲ್ಲಿ ಬೈಕ್‌ ಮತ್ತು ಕಾರುಗಳ ನಿಲುಗಡೆಗಾಗಿ ಅಗತ್ಯ ಜಾಗ ಮತ್ತು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಯೋ ವೃದ್ಧರು ಮತ್ತು ಗರ್ಭಿಣಿಯರು ಕೆಇಬಿ ವೃತ್ತದಿಂದ ಲಗೇಜ್‌ಗಳೊಂದಿಗೆ ಬಸ್‌ನಿಲ್ದಾಣಕ್ಕೆ ಬರಲು ತುಂಬಾ ತೊಂದರೆಯಾಗುತ್ತಿದೆ. ಈ ಬಗ್ಗೆ ಮನವಿ ಸಲ್ಲಿಸಲಾಗಿದ್ದು, ಪಪಂ ಮುಖ್ಯಾಧಿಕಾರಿಗಳು ನಿರ್ಲಕ್ಷಿಸದೆ ಸಿಸಿ ರಸ್ತೆಯನ್ನು ಕೂಡಲೇ ಉದ್ಘಾಟಿಸಬೇಕು.
ಬೆಳಗಲ್‌ ಈಶ್ವರಯ್ಯಸ್ವಾಮಿ, ರೈತ ಸಂಘದ ತಾಲೂಕು ಅಧ್ಯಕ್ಷ.

ಪಟ್ಟಣದ ಖಾಸಗಿ ಬಸ್‌ ನಿಲ್ದಾಣದ ಆವರಣದ ಸಿಸಿ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದರೂ ಪಟ್ಟಣ ಪಂಚಾಯತ್‌ಗೆ ಹಸ್ತಾಂತರಿಸಿಲ್ಲ. ಈ ಕಾಮಗಾರಿಯನ್ನು ಥರ್ಡ್‌ ಪಾರ್ಟಿಯಿಂದ ಪರೀಕ್ಷಿಸಿದ ನಂತರ ಸಾರ್ವಜನಿಕ ಬಳಕೆಗೆ ನೀಡಲಾಗುವುದು. 
ಎಸ್‌. ರುಕ್ಮಿಣಿ, ಪಪಂ ಮುಖ್ಯಾಧಿಕಾರಿ.

„ಎಸ್‌. ರಾಜಶೇಖರ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.