ಸುಪ್ರೀಂ ತೀರ್ಪಿಗೆ ಭಕ್ತರ ಅಸಮಾಧಾನ


Team Udayavani, Oct 26, 2018, 3:52 PM IST

dvg-3.jpg

ಚಿತ್ರದುರ್ಗ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ವಿರೋಧಿಸಿ ಶ್ರೀ ಶಬರಿಮಲೈ ಅಯ್ಯಪ್ಪಸ್ವಾಮಿ ಸೇವಾ ಸಮಾಜಂ ಕರ್ನಾಟಕ, ವಿಶ್ವ ಹಿಂದೂ ಪರಿಷತ್‌, ಭಜರಂಗದಳ ಹಾಗೂ
ಚಾಮುಂಡೇಶ್ವರಿ ಅಯ್ಯಪ್ಪ ಭಜನಾ ಮಂಡಳಿ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಆನೆಬಾಗಿಲು ಗಣಪತಿ ದೇವಸ್ಥಾನ ಸಮೀಪ ಸಮಾವೇಶಗೊಂಡ ಭಕ್ತರು, ಶಬರಿಮಲೆಯ ಧಾರ್ಮಿಕ ಆಚರಣೆ ಪದ್ಧತಿ ಉಳಿಸಿ ಹಾಗೂ ಧಾರ್ಮಿಕ ನಂಬಿಕೆಗಳಿಗೆ ಗೌರವ ಕೊಡಿ ಎಂಬ ಘೋಷಣೆಯುಳ್ಳ ಫಲಕಗಳನ್ನು ಪ್ರದರ್ಶಿಸಿದರು. ಶಬರಿಮಲೆಯ ಮೂಲ ಸಂಪ್ರದಾಯ ಮತ್ತು ಆಶಯಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ನೀಡಿರುವ ಸರ್ವೋತ್ಛ ನ್ಯಾಯಾಲಯದ ತೀರ್ಪು ಖಂಡನೀಯ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದರು.

ಶಬರಿಮಲೆಯಲ್ಲಿ ಶತಮಾನಗಳಿಂದ ನಡೆದುಕೊಂಡು ಬಂದ ಪದ್ಧತಿ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪು ಭಕ್ತರ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ಇದನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಗಂಭೀರ ಸ್ವರೂಪದ ಹೋರಾಟ ನಡೆಸಲಿದ್ದೇವೆ ಎಂದು ಎಚ್ಚರಿಸಿದರು. ಯಾವುದೋ ಸರ್ಕಾರೇತರ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಈ ತೀರ್ಪು ನೀಡಿರುವುದು ಸರಿಯಲ್ಲ. ತೀರ್ಪು ಮರು ಪರಿಶೀಲನೆಗಾಗಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು. ಶಬರಿಮಲೆ ದೇವಸ್ಥಾನದ ನಂಬಿಕೆ ಹಾಗೂ ಪರಂಪರೆಗೆ ಧಕ್ಕೆಯಾಗಿದ್ದು ಅದನ್ನು ರಕ್ಷಿಸಲು ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಬಳಿಕ ದೇಶದಲ್ಲಿನ ಹಿಂದೂ ಪರ ಸಂಘಟನೆಗಳು, ಬುಡಕಟ್ಟು ಜನರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಮಹಿಳೆಯರಿಗೆ ಅಯ್ಯಪ್ಪಸ್ವಾಮಿ ದೇವಾಲಯದ ಒಳಗೆ ಪ್ರವೇಶಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಬುಡಕಟ್ಟು ಜನರ ಭಾವನೆಗಳನ್ನು ಸುಪ್ರೀಂ ಕೋರ್ಟ್‌ ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. 

ಶ್ರೀ ಶಬರಿಮಲೈ ಅಯ್ಯಪ್ಪಸ್ವಾಮಿ ಸೇವಾ ಸಮಾಜಂ ಕರ್ನಾಟಕದ ಜಿಲ್ಲಾಧ್ಯಕ್ಷ ಶರಣ್‌ ಕುಮಾರ್‌, ಕಾರ್ಯದರ್ಶಿ ಬಿ.ಎಸ್‌. ಮೋಹನ್‌ ಕುಮಾರ್‌, ಚಿತ್ರದುರ್ಗ ಅಯ್ಯಪ್ಪಸ್ವಾಮಿ ದೇವಸ್ಥಾನದ ಕಾರ್ಯದರ್ಶಿ ಎಂ.ಪಿ. ವೆಂಕಟೇಶ್‌, ಗುರುಸ್ವಾಮಿ, ಸತೀಶ್‌ ಸ್ವಾಮಿ, ವಿಶ್ವ ಹಿಂದೂ ಪರಿಷತ್‌, ಭಜರಂಗದಳ ಹಾಗೂ ಚಾಮುಂಡೇಶ್ವರಿ ಅಯ್ಯಪ್ಪ ಭಜನಾ ಮಂಡಳಿ ಸದಸ್ಯರು, ಮುಖಂಡರು ಸೇರಿದಂತೆ ನೂರಾರು ಭಕ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.