ಬತ್ತಿದ ಕೆರೆ-ಒಣಗಿದ ಬೆಳೆ ದರ್ಶನ


Team Udayavani, Nov 19, 2018, 4:09 PM IST

cta-2.jpg

ಚಳ್ಳಕೆರೆ: ಕೇಂದ್ರ ಬರ ಅಧ್ಯಯನ ತಂಡ ಭಾನುವಾರ ತಾಲೂಕಿನ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ತಾಲೂಕಿನ ಗಡಿ ಭಾಗದ ಕೆಂಚಮ್ಮನಹಳ್ಳಿಯಲ್ಲಿ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರ ತಂಡವನ್ನು ಬರಮಾಡಿಕೊಂಡರು. ಸಂಸದ ಬಿ.ಎನ್‌. ಚಂದ್ರಪ್ಪ ಹಾಗೂ ಶಾಸಕ ಟಿ. ರಘುಮೂರ್ತಿ ಇಲ್ಲಿನ ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕೂಡಲೇ ವರದಿ ನೀಡುವಂತೆ ಕೋರಿದರು.

ಆರಂಭದಲ್ಲಿ ಪರಶುರಾಂಪುರ ಗ್ರಾಮದ ಹಳೆ ಕೆರೆಗೆ ಭೇಟಿ ನೀಡಿದ ಬರ ಅಧ್ಯಯನ ತಂಡದ ಸದಸ್ಯರು, ಅಲ್ಲಿನ ಕೆರೆ ಸಂಪೂರ್ಣವಾಗಿ ಒಣಗಿದ್ದನ್ನು ವೀಕ್ಷಿಸಿದರು. ಕೆರೆಯ ಒಳಭಾಗ ಹಾಗೂ ದಂಡೆ ಮೇಲೆ ಬಳ್ಳಾರಿ ಜಾಲಿ ಬೆಳೆದಿದ್ದನ್ನೂ ಗಮನಿಸಿದರು.

ಗ್ರಾಮದ ಐತಿಹಾಸಿಕ ಕೆರೆ ಇದಾಗಿದ್ದು ಸುಮಾರು 30 ವರ್ಷಗಳಿಂದ ಈ ಕೆರೆಗೆ ನೀರು ಬಂದಿಲ್ಲ ಎಂದು ಗ್ರಾಮಸ್ಥರು ತಂಡಕ್ಕೆ ಮನವರಿಕೆ ಮಾಡಿಕೊಟ್ಟರು. ನಂತರ ಅಲ್ಲಿಂದ ನೇರವಾಗಿ ಪರಶುರಾಂಪುರದ ಅಮೃತ ಮಹಲ್‌ ಕಾವಲು ಬಳಿ 5 ಲಕ್ಷ ರೂ. ವೆಚ್ಚದ ನರೇಗಾ ಕಾಮಗಾರಿಯನ್ನು ಪರಿಶೀಲಿಸಲಾಯಿತು. ಕೂಲಿಕಾರರಾದ ತಿಮ್ಮರಾಜು, ಮಹಾಲಕ್ಷ್ಮೀ ಎಂಬುವವರೊಂದಿಗೆ ಕೇಂದ್ರ ತಂಡದ ಸದಸ್ಯರು ಕೂಲಿ ಪಾವತಿ ಮತ್ತಿತರ ವಿಚಾರಗಳ ಬಗ್ಗೆ ಮಾಹಿತಿ ಪಡೆದರು.

ಇದಾದ ಬಳಿಕ ಪರಶುರಾಂಪುರ ಗ್ರಾಮಕ್ಕೆ ತೆರಳಿ ಕುಡಿಯುವ ನೀರಿನ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಸಂಗ್ರಹಿಸಿದರು. ಪರಶುರಾಂಪುರದಿಂದ ದೊಡ್ಡಗೊಲ್ಲರ ಹಟ್ಟಿಗೆ ಮೂರು ಟ್ಯಾಂಕರ್‌ಗಳಲ್ಲಿ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದರು. ಅಲ್ಲಿಂದ ವೇದಾವತಿ ನದಿ ತಟಕ್ಕೆ ಬಂದ ತಂಡ, ನದಿ ಸಂಪೂರ್ಣ ಬತ್ತಿ ಹೋಗಿದ್ದನ್ನು ವೀಕ್ಷಿಸಿತು. ಬಳಿಕ ಚೌಳೂರು ಗ್ರಾಮದ ನಾಗಣ್ಣ ಬಿನ್‌ ಅಜ್ಜಪ್ಪ ಎಂಬುವವರ ಜಮೀನಿನಲ್ಲಿ ಕೃಷಿ ಇಲಾಖೆಯಿಂದ ನಿರ್ಮಾಣ ಮಾಡಿದ್ದ ಕೃಷಿಹೊಂಡ, ಚಟ್ಟೆಕಂಬದ ರೈತ ತಿಪ್ಪೇಸ್ವಾಮಿ ಎಂಬುವವರ ಒಣಗಿದ ತೆಂಗಿನತೋಟವನ್ನು ವೀಕ್ಷಣೆ ಮಾಡಿತು. ಇದೇ ಸಂದರ್ಭದಲ್ಲಿ ಮಲ್ಲಪ್ಪ ಎಂಬುವವರು ತಾವು ಮೂರು ಎಕರೆ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಸಂಪೂರ್ಣ ಒಣಗಿದೆ. ಬಿತ್ತನೆ ಕಾರ್ಯಕ್ಕೆ 60 ಸಾವಿರ ರೂ. ಖರ್ಚು ಮಾಡಿರುವುದಾಗಿ ತಿಳಿಸಿದರು. 

ರೈತಸಂಘದ ಮುಖಂಡರಾದ ಕರೀಕೆರೆ ಭೀಮಾರೆಡ್ಡಿ, ರೆಡ್ಡಿಹಳ್ಳಿ ವೀರಣ್ಣ, ತಿಪ್ಪೇಸ್ವಾಮಿ, ಬಾಲರಾಜು ಮಾತನಾಡಿ, ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದರು. ಜಿಪಂ ಸಿಇಒ ಪಿ.ಎನ್‌. ರವೀಂದ್ರ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಡಾ| ಕೆ. ನಂದಿನಿದೇವಿ, ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌, ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ್‌, ಉಪವಿಭಾಗಾಧಿ ಕಾರಿ ವಿಜಯಕುಮಾರ್‌, ಕೃಷಿ ಇಲಾಖೆ ಉಪನಿರ್ದೇಶಕಿ ಡಾ| ಸುಜಾತಾ, ತಹಶೀಲ್ದಾರ್‌ ಟಿ.ಸಿ. ಕಾಂತರಾಜ್‌, ತಾಪಂ ಇಒ ಈಶ್ವರಪ್ರಸಾದ್‌, ಸಿಪಿಐ ಎನ್‌. ತಿಮ್ಮಣ್ಣ, ಸಹಾಯಕ ಕೃಷಿ ನಿರ್ದೇಶಕ ಮಾರುತಿ ಇದ್ದರು.

ಬರ ಪರಿಸ್ಥಿತಿಯ ಸಮಗ್ರ ವರದಿಯನ್ನು ಈಗಾಗಲೇ ಕೃಷಿ ಇಲಾಖೆ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇಲ್ಲಿನ ರೈತರು ಬರ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಕೇಂದ್ರ ಸರ್ಕಾರ ರೈತರ ಹಿತದೃಷ್ಟಿಯಿಂದ ಪರಿಹಾರವನ್ನು ಸಮರ್ಪಕವಾಗಿ ನೀಡಬೇಕು. ಒಂದು ಹೆಕ್ಟೇರ್‌ ಪ್ರದೇಶಕ್ಕೆ 6500 ರೂ. ಪರಿಹಾರ ನೀಡುತ್ತಿರುವುದನ್ನು ಹೆಚ್ಚಿಸಬೇಕು.
 ಟಿ. ರಘುಮೂರ್ತಿ, ಶಾಸಕರು. 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.