ಸಾಣೇಹಳ್ಳಿ ಶ್ರೀ ಮಠ ಬಿಡ್ತಾರಾ?: ರಘು


Team Udayavani, Nov 24, 2018, 5:05 PM IST

shiv-3.jpg

ಚಿತ್ರದುರ್ಗ: ಉಪ ಮುಖ್ಯಮಂತ್ರಿ ಡಾ|ಜಿ. ಪರಮೇಶ್ವರ್‌ ಸಾಣೇಹಳ್ಳಿ ಮಠದ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ವೇಳೆ ಭದ್ರತಾ ಸಿಬ್ಬಂದಿ ಊಟದ ಪರೀಕ್ಷೆ ನಡೆಸಿರುವ ಬಗ್ಗೆ ಉಂಟಾದ ವಾದ ವಿವಾದ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಈ ಬಗ್ಗೆ ಮಾತನಾಡಿದ್ದ ವಿಧಾನ ಪರಿಷತ್‌ ಸದಸ್ಯ ರಘು ಆಚಾರ್‌ ಮತ್ತೂಮ್ಮೆ ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಗೇ ಸವಾಲು ಹಾಕಿದ್ದಾರೆ.

ಶುಕ್ರವಾರ ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಘು ಆಚಾರ್‌, “ನಾನು ವಿಧಾನ ಪರಿಷತ್‌ ಸ್ಥಾನಕ್ಕೆ ಈಗಲೇ ರಾಜೀನಾಮೆ ಸಲ್ಲಿಸಿ ರಾಜಕೀಯ ನಿವೃತ್ತಿ ಹೊಂದಿ ಈಚೆಗೆ ಬರುತ್ತೇನೆ. ಪಂಡಿತಾರಾಧ್ಯರು ಮಠ ಬಿಟ್ಟು ಬರುತ್ತಾರಾ’ ಎಂದು ಪ್ರಶ್ನಿಸಿದರು.

ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ನನ್ನನ್ನು ಮೂಲಭೂತವಾದಿ ಎಂದು ಕರೆದಿದ್ದಾರೆ. ನನಗೆ ಮೂಲಭೂತವಾದಿ, ಸಮಾಜವಾದಿ ಎಂದರೆ ಗೊತ್ತಿಲ್ಲ. ನಾನು 10ನೇ ತರಗತಿ ಓದಿದ್ದೇನೆ. ನನಗೆ ಅವು ಅರ್ಥ ವಾಗುವುದಿಲ್ಲ. ನನಗೆ ಅರ್ಥವಾಗಿರುವುದು ಎರಡೇ, ಒಂದು ಒಳ್ಳೆಯದು, ಇನ್ನೊಂದು ಕೆಟ್ಟದ್ದು ಎಂದರು.
 
ನಾನು ಯಾವುದೇ ಜಾತಿಯನ್ನು ನಂಬಲ್ಲ. ಡಿಸಿಎಂ ಅವರಿಗೆ ಸ್ವಾಮೀಜಿಗಳು ಅವಮಾನ ಮಾಡಿದ್ದು ಸರಿನಾ? ಶಿಷ್ಟಾಚಾರ ಬೇಡ ಎಂದರೆ ಜನಪ್ರತಿನಿಧಿಗಳನ್ನು ಯಾಕೆ ಆಹ್ವಾನಿಸಬೇಕು. ನಾನು ಯಾವುದೇ ತಪ್ಪು ಮಾಡಿಲ್ಲ. ನಾನೇಕೆ ಹೆದರಬೇಕು. ನಾನು ಸ್ವಾಭಿಮಾನ ಇಟ್ಟುಕೊಂಡು ಬಂದಿದ್ದೇನೆ.

ಸ್ವಾಮೀಜಿ ಎಂದರೆ ಎಲ್ಲ ಜಾತಿಗೂ, ಭಕ್ತರಿಗೂ ಸ್ವಾಮೀಜಿ ತಾನೇ. ನಾನು ಯಾವುದೇ ಸ್ವಾರ್ಥ ಇಟ್ಟುಕೊಂಡಿಲ್ಲ. ಸ್ವಾಮೀಜಿಗಳು ಎಲೆಕ್ಷನ್‌ ಮಾಡುತ್ತಾರಾ ಮಾಡಲಿ, ನಾನೂ ಎಲೆಕ್ಷನ್‌ ಮಾಡುತ್ತೇನೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಷ್ಟಾಚಾರ ಇದೆ. ಶಿಷ್ಟಾಚಾರ ಗೊತ್ತಿಲ್ಲದಿದ್ದರೆ ರಾಜಕಾರಣಿಗಳನ್ನು ಮಠಕ್ಕೆ ಕರೆಯಬೇಡಿ. ನನ್ನ ಬಗ್ಗೆ ಹಗುರವಾಗಿ ಮಾತನಾಡುವ ಮುನ್ನ ಯೋಚಿಸಬೇಕು. ನಾನು 11 ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವ ಎಂಎಲ್‌ಸಿ. ನಾನು ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದವನು. ನಾನು ತಪ್ಪು ಮಾಡಿದ್ದರೆ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ.
ನೀವು ಮಠ ಬಿಟ್ಟು ಹೊರಬರುತ್ತೀರಾ ಎಂದು ಸಾಣೇಹಳ್ಳಿ ಶ್ರೀಗಳಿಗೆ ಸವಾಲು ಹಾಕಿದರು.

ನೀವು ಚುನಾವಣೆಯಲ್ಲಿ ನನ್ನ ಸೋಲಿಸಲು ಮುಂದೆ ಬಂದರೆ ನಾನು ಮತ್ತೆ ಸ್ಪರ್ಧಿಸಿ ಗೆದ್ದು ತೋರಿಸುತ್ತೇನೆ. ಸ್ವಾಮೀಜಿಗಳು, ಎಂಎಲ್‌ಎಗಳು ಮೇಲಿಂದ ಬಂದಿರೋದಿಲ್ಲ. ಎಲ್ಲರೂ ಸಮಾನರು ಅಂತಾದರೆ ಸ್ವಾಮೀಜಿಗಳು ಕಾಲಿಗೆ ಯಾಕೆ ಬೀಳಿಸಿಕೊಳ್ಳಬೇಕು ಎಂದು ಪ್ರಶ್ನಿಸಿದರು. ಇಂದು ಮಠ, ಮಾನ್ಯಗಳು ಇಲ್ಲದಿದ್ದರೆ ರಾಜ್ಯದ ಜನ ಇಷ್ಟು ನೆಮ್ಮದಿಯಿಂದ ಬದುಕುತ್ತಿರಲಿಲ್ಲ.

ನಾನೂ ಕೂಡಾ ಸಾಣೇಹಳ್ಳಿ ಶ್ರೀಗಳ ಭಕ್ತ. ಚಿತ್ರದುರ್ಗ ಎಲ್ಲ ಸಮುದಾಯದ ಸ್ವಾಮೀಜಿಗಳಿರುವ ಜಿಲ್ಲೆ. ಇಲ್ಲಿರುವ ಸ್ವಾಮೀಜಿಗಳೆಲ್ಲ ಒಳ್ಳೆಯವರು. ಹೀಗಾಗಿ ಜನ ನೆಮ್ಮದಿಯಿಂದ ಇದ್ದೇವೆ. ಯಾರ ಬಗ್ಗೆಯೂ ಈ ರೀತಿ ಮಾತನಾಡಬೇಡಿ ಎಂದು ಸ್ವಾಮೀಜಿಗಳಿಗೆ ನಾನು ವಿನಮ್ರ ಪೂರ್ವಕವಾಗಿ ಮನವಿ ಮಾಡುತ್ತೇನೆ ಎಂದು ಹೇಳಿದರು. 

ಫೋನ್‌ ಕದ್ದಾಲಿಕೆ ಗೊತ್ತಿಲ್ಲ
ಟೆಲಿಪೋನ್‌ ಕದ್ದಾಲಿಕೆ ವಿಚಾರ ನನಗೆ ಗೊತ್ತಿಲ್ಲ. ಆ ಬಗ್ಗೆ ಅಶೋಕ್‌ ಅವರನ್ನೇ ಕೇಳಬೇಕು. ಕದ್ದಾಲಿಕೆ ಯಾವ ರೀತಿ ಆಗುತ್ತೆ ಅನ್ನೋದು ನನಗೇನು ಗೊತ್ತಾಗುತ್ತೆ. ಟೆಕ್ನಾಲಜಿ ಚೆನ್ನಾಗಿದೆ. ಹೈದರಾಬಾದ್‌ಗೆ ನಾನೇ ಶಾಸಕರನ್ನು ಕರೆದುಕೊಂಡು ಹೋಗಿದ್ದೆ. ಒಬ್ಬ ಗ್ರಾಮ ಪಂಚಾಯತಿ ಸದಸ್ಯರನ್ನು ಹಿಡಿದಿಟ್ಟು ಕೊಳ್ಳಲು ಆಗುವುದಿಲ್ಲ. ಇನ್ನೂ ಶಾಸಕರು ಹೋಗುತ್ತೇನೆ ಎಂದು ಡಿಸೈಡ್‌ ಮಾಡಿದರೆ ಹಿಡಿದಿಟ್ಟುಕೊಳ್ಳಲು ಆಗುತ್ತಾ. ಅವೆಲ್ಲಾ ಆಗುವ ಪ್ರಶ್ನೆಯೇ ಅಲ್ಲ. ಎಂಎಲ್‌ಎಗಳು ಯಾರ ಮಾತು ಕೇಳ್ತಾರೆ. ಇದೆಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಗುವುದಿಲ್ಲ. ನಮ್ಮ ಪಕ್ಷದ ಶಾಸಕರು ನಮ್ಮ ಜತೆಗೆ ಇದ್ದಾರೆ. ಸರ್ಕಾರ ಸುಭದ್ರವಾಗಿದೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.