ರಸ್ತೆ ದುರಸ್ತಿಗೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ


Team Udayavani, Dec 4, 2018, 5:29 PM IST

c-ta-1.jpg

ಚಿತ್ರದುರ್ಗ: ಜಿಲ್ಲಾದ್ಯಂತ ರಸ್ತೆಯ ತಗ್ಗು, ಗುಂಡಿಗಳನ್ನು ದುರಸ್ತಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಚಳ್ಳಕೆರೆ ತಾಲೂಕಿನ ಮೀರಾಸಾಬಿಹಳ್ಳಿ, ಕರಿಕೆರೆ, ಜಾಜೂರು ಮಾರ್ಗವಾಗಿ ಕಲ್ಯಾಣದುರ್ಗದ ರಸ್ತೆಯಲ್ಲಿ ನೂರಾರು ಗುಂಡಿಗಳು ಉಂಟಾಗಿ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಶೇಂಗಾ ಕಟಾವು ಮಾಡುತ್ತಿದ್ದು ಎತ್ತಿನ ಗಾಡಿಗಳಲ್ಲಿ ಶೇಂಗಾ ಬಳ್ಳಿ ತುಂಬಿಕೊಂಡು ರಸ್ತೆಯಲ್ಲಿ ಸಾಗುವುದೇ ದೊಡ್ಡ ಸವಾಲಾಗಿದೆ. ಆ ರಸ್ತೆ ಸೇರಿದಂತೆ ಜಿಲ್ಲಾದ್ಯಂತ ತಗ್ಗು, ಗುಂಡಿಗಳು ಬಿದ್ದಿರುವ ಎಲ್ಲ ರಸ್ತೆಗಳನ್ನು ದುರಸ್ತಿ ಮಾಡಿಸಿ ಅನುಕೂಲ ಕಲ್ಪಿಸಬೇಕು ಎಂದು ರೈತರು ಒತ್ತಾಯಿಸಿದರು.

ಚಿತ್ರದುರ್ಗ ಜಿಲ್ಲೆ ಸತತ ಬರಗಾಲಕ್ಕೆ ತುತ್ತಾಗುತ್ತಿದ್ದು ಹಲವು ಸಮಸ್ಯೆಗಳಿಂದ ಬಳಲುತ್ತಿದೆ. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕಾಡುವ ಸಾಧ್ಯತೆ ಹೆಚ್ಚಿದೆ. ಮೇವಿನ ಅಭಾವದಿಂದಾಗಿ ಈಗಾಗಲೇ ರೈತರು ಜಾನುವಾರುಗಳನ್ನು ಮಾರಾಟ ಮಾಡಿ ಗುಳೆ ಹೋಗುತ್ತಿದ್ದು ಸ್ಥಳದಲ್ಲೇ ಉದ್ಯೋಗ ಒದಗಿಸುವ ಕಾರ್ಯ ಮಾಡಬೇಕು. ಕೆರೆಗಳ ಹೂಳೆತ್ತುವುದು ಸೇರಿದಂತೆ ರೈತ ಪರ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಉದ್ಯೋಗ ನೀಡಬೇಕು.

ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು ಎಲ್ಲ ಕಡೆ ಚೆಕ್‌ಡ್ಯಾಂ, ಗೋಕಟ್ಟೆ, ಬದುಗಳ ನಿರ್ಮಾಣ ಸೇರಿದಂತೆ ಮತ್ತಿತರ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಆಗ್ರಹಿಸಿದರು.  ರೈತ ಸಂಘದ ಜಿಲ್ಲಾಧ್ಯಕ್ಷ ನುಲೇನೂರು ಶಂಕರಪ್ಪ, ರಾಜ್ಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ, ಮಲ್ಲಾಪುರ ತಿಪ್ಪೇಸ್ವಾಮಿ, ಹಿರಿಯೂರು ತಾಲೂಕು ಅಧ್ಯಕ್ಷ ಕೆ.ಸಿ. ಹೊರಕೇರಪ್ಪ, ಪಲ್ಲವಗೆರೆ ತಿಪ್ಪೇಸ್ವಾಮಿ, ಜೆ.ಎನ್‌. ಕೋಟೆ ಲಿಂಗಪ್ಪ, ಹಂಪಣ್ಣ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.