15 ದಿನದಲ್ಲಿ ಅರ್ಜಿ ಇತ್ಯರ್ಥಪಡಿಸಿ


Team Udayavani, Dec 6, 2018, 5:01 PM IST

cta-2.jpg

ಮೊಳಕಾಲ್ಮೂರು: ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನರೊಂದಿಗೆ ಬೆರೆತು ಕೆಲಸ ಮಾಡಿದರೆ ಸಕಾಲದಲ್ಲಿ ಜನರ ಕುಂದುಕೊರತೆ ನಿವಾರಿಸಲು ಸಾಧ್ಯ ಎಂದು ಸಂಸದ ಬಿ.ಎನ್‌. ಚಂದ್ರಪ್ಪ ಅಭಿಪ್ರಾಯ ಪಟ್ಟರು. ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ವತಿಯಿಂದ ಬುಧವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿವೆ. ಯೋಜನೆಗಳು ಹಾಗೂ ಸೌಲಭ್ಯಗಳನ್ನು ಜನರಿಗೆ ತಲುಪಿಸಬೇಕಾದ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಆದರೆ ಇಂತಹ ಯೋಜನೆಗಳನ್ನು ತಲುಪಿಸುವಾಗ ಜನರನ್ನು ಅಲೆದಾಡಿಸಬಾರದು. ಅಧಿಕಾರಿಗಳು ಕೂಡ ಓದುವಾಗ ತುಂಬಾ ಬಡತನ ಹಾಗೂ ಸಂಕಷ್ಟಗಳನ್ನು ಅನುಭವಿಸಿದ್ದಾರೆ. ಆದರೆ ಸರ್ಕಾರಿ ಸೇವೆಗೆ ಸೇರಿದ ನಂತರ ಹಿಂದಿನ ಬಡತನ, ಜನರಿಗಾಗುವ ಸಂಕಷ್ಟಗಳನ್ನು ಮರೆತು ಸಂಬಂಧವೇ ಇಲ್ಲವೆಂಬ ರೀತಿಯಲ್ಲಿ ವರ್ತಿಸುತ್ತಾರೆ. ಇಂತಹ ಭಾವನೆ ಅಧಿಕಾರಿಗಳು ಸೇರಿದಂತೆ ಯಾವುದೇ ಸಿಬ್ಬಂದಿಗೆ ಬರಬಾರದು ಎಂದರು.

ಜನಸಂಪರ್ಕ ಸಭೆಯಲ್ಲಿ ಸ್ವೀಕರಿಸಲಾಗುವ ಅರ್ಜಿಗಳನ್ನು 15 ದಿನಗಳಲ್ಲಿ ಇತ್ಯರ್ಥಪಡಿಸಲಾಗುವುದು. ರೈತರು ಸಂಕಷ್ಟದಲ್ಲಿದ್ದು ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ನಾನು ಗ್ರಾಮ ವಾಸ್ತವ್ಯ ಮಾಡದೆ ಬೆಳಿಗ್ಗೆಯಿಂದ ಸಂಜೆಯವರೆಗೆ ಜನರೊಂದಿಗೆ ಇದ್ದು ಅವರ ಸಮಸ್ಯೆಗಳನ್ನು ಆಲಿಸಿ ನಿವಾರಿಸಲು ಕ್ರಮ ಕೈಗೊಳ್ಳುತೇನೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ. ಶ್ರೀರಾಮುಲು ಮಾತನಾಡಿ, ಮೊಳಕಾಲ್ಮುರು ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳಿವೆ. ಕುಡಿಯುವ ನೀರಿನ ತೀವ್ರ ಸಮಸ್ಯೆ ಇದ್ದು ತುಂಗಭದ್ರಾ ಹಿನ್ನೀರು ಯೋಜನೆಯಿಂದ ನೀರು ಪೂರೈಕೆ ಮಾಡಲಾಗುವುದು. ಫಸಲ್‌ ಬಿಮಾ ಯೋಜನೆಯಡಿ ಸರಿಯಾಗಿ ಪರಿಹಾರ ಸಿಕ್ಕಿಲ್ಲ ಎಂದು ರೈತರು ತಿಳಿಸಿದ್ದು ಆ ಬಗ್ಗೆ ಕ್ರಮ ಜರುಗಿಸಲಾಗುತ್ತದೆ.

ಬಗರ್‌ಹುಕುಂ ಅಡಿ ಭೂಮಿಯನ್ನು ಮಂಜೂರಾತಿ ಮಾಡಿಲ್ಲವೆಂದು ಜನರ ಬೇಡಿಕೆಯಾಗಿದ್ದು 2019 ರ ಮಾರ್ಚ್‌ 15 ರವರೆಗೆ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಕಾಲಾವಕಾಶ ಇದೆ. ಯಾರು ಅರ್ಜಿ ಸಲ್ಲಿಸಿಲ್ಲವೋ ಅಂತಹ ಫಲಾನುಭವಿಗಳು ತಪ್ಪದೇ ಅರ್ಜಿಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.

ರಂಗಯ್ಯನದುರ್ಗ ಜಲಾಶಯದ ನಿರ್ಮಾಣದಿಂದ ಸಂತ್ರಸ್ತರಾದವರಿಗೆ ಪರಿಹಾರ ದೊರೆತಿಲ್ಲ. 2009 ರಲ್ಲಿ ಹಳ್ಳದಲ್ಲಿ ಕೊಚ್ಚಿ ಹೋದವರಿಗೆ ಪರಿಹಾರ, ಬುಕ್ಕನಹಳ್ಳಿ ಕಲ್ಲು ಗಣಿಗಾರಿಕೆ ತಡೆ ಸೇರಿದಂತೆ ವಿವಿಧ ರಸ್ತೆ ನಿರ್ಮಾಣ, ಅಭಿವೃದ್ಧಿ,  ಚೆಕ್‌ಡ್ಯಾಂ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಕೆಲವು ವಿಷಯಗಳನ್ನು ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚಿಸುವುದಾಗಿ ಹೇಳಿದರು.

ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಪ್ರಾಸ್ತಾವಿಕವಾಗಿ ಮಾತನಾಡಿ, ಜನಸಂಪರ್ಕ ಸಭೆಯಲ್ಲಿ ಸ್ವೀಕರಿಸಲಾ ಗುವ ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಆಯಾ ಇಲಾಖೆಗಳಿಗೆ ಕಳುಹಿಸಿ ಕೊಡಲಾಗುತ್ತದೆ. ಆಯಾ ಇಲಾಖೆ ಗಳಿಂದ 15 ದಿನಗಳಲ್ಲಿ ಪರಿಶೀಲಿಸಿ ಇತ್ಯರ್ಥ ಮಾಡಲಾಗುತ್ತದೆ ಎಂದರು.

ಜನಸಂಪರ್ಕ ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯೆ ಜಯಮ್ಮ ಬಾಲರಾಜ್‌, ಜಿಪಂ ಸದಸ್ಯರಾದ ಮುಂಡರಗಿ ನಾಗರಾಜ್‌, ಡಾ| ಬಿ. ಯೋಗೇಶ್‌ ಬಾಬು, ತಾಲೂಕು ಪಂಚಾಯತ್‌ ಅಧ್ಯಕ್ಷೆ ಲತಮ್ಮ, ಉಪಾಧ್ಯಕ್ಷೆ ತಿಮ್ಮಕ್ಕ, ಪಟ್ಟಣ ಪಂಚಾಯತ್‌ ಅಧ್ಯಕ್ಷ ಪ್ರಕಾಶ್‌, ಜಿಪಂ ಸಿಇಒ ಪಿ.ಎನ್‌. ರವೀಂದ್ರ, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ವಿಜಯಕುಮಾರ್‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಮುಖಂಡರು ಭಾಗವಹಿಸಿದ್ದರು. ವಸತಿ, ಶಿಕ್ಷಣ, ನಿವೇಶನ ಸೇರಿದಂತೆ 206 ಅರ್ಜಿಗಳು ಜನರಿಂದ ಸಲ್ಲಿಕೆಯಾದವು. 

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.