ಫಲ ಕೊಡದ ಆಯುಷ್ಮಾನ್‌ ಭಾರತ್‌


Team Udayavani, Dec 14, 2018, 4:01 PM IST

cta-1.jpg

ಚಿತ್ರದುರ್ಗ: ಬಿಪಿಎಲ್‌ ಕುಟುಂಬಗಳಿಗೆ ವಾರ್ಷಿಕ ಐದು ಲಕ್ಷ, ಎಪಿಎಲ್‌ ಕುಟುಂಬಗಳಿಗೆ ವಾರ್ಷಿಕ ಎರಡು ಲಕ್ಷ ರೂ. ತನಕ ಆರೋಗ್ಯ ಭಾಗ್ಯ ನೀಡಲು ವಿವಿಧ ಆರೋಗ್ಯ ಯೋಜನೆಗಳನ್ನು ಒಗ್ಗೂಡಿಸಿ ರಾಜ್ಯ ಸರ್ಕಾರ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೊಳಿಸಿದೆ. ಆದರೆ ಜಿಲ್ಲೆಯಲ್ಲಿ ಈ ಯೋಜನೆ ನಿರೀಕ್ಷಿತ ಫಲ ನೀಡುತ್ತಿಲ್ಲ.

ಆರೋಗ್ಯ ಯೋಜನೆಗಳಾದ ಬಿಪಿಎಲ್‌ ಕುಟುಂಬಗಳಿಗೆ ವಾಜಪೇಯಿ ಆರೋಗ್ಯ ಶ್ರೀ ಉಚಿತ ಯೋಜನೆ, ಎಪಿಎಲ್‌ ಕುಟುಂಬಗಳಿಗೆ ರಾಜೀವ್‌ ಆರೋಗ್ಯ ಭಾಗ್ಯ ಯೋಜನೆ, ರಾಜ್ಯ ಸರ್ಕಾರಿ ನೌಕರರಿಗೆ ಜ್ಯೋತಿ ಸಂಜೀವಿನಿ, ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗಾಗಿ ಮುಖ್ಯಮಂತ್ರಿ ಸಾಂತ್ವನ ಹರೀಶ್‌ ಯೋಜನೆ ಮತ್ತು ಬಿಪಿಎಲ್‌ ಕುಟುಂಬಗಳು ಹಾಗೂ ಅಸಂಘಟಿತ ಕಾರ್ಮಿಕರಿಗೆ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ, ಶಾಲಾ ಮಕ್ಕಳಿಗೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ಯಶಸ್ವಿನಿ, ಆತ್ಮಾಹುತಿಗೆ ಒಳಗಾದ ರೈತರ ಕುಟುಂಬಗಳ ಅವಲಂಬಿತರಿಗೆ ಇಂದಿರಾ ಸುರಕ್ಷಾ ಯೋಜನೆ ಇವೆಲ್ಲವುಗಳನ್ನೂ ಒಗ್ಗೂಡಿಸಿ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆಯನ್ನು ಅನುಷ್ಠಾನ ‌ಗೊಳಿಸಲಾಗಿದೆ.

ಯೂನಿವರ್ಸಲ್‌ ಹೆಲ್ತ್‌ ಕಾರ್ಡ್‌ಗಳನ್ನು ಜಿಲ್ಲಾಸ್ಪತ್ರೆ ಹಾಗೂ ಆಯಾ ತಾಲೂಕು ಆಸ್ಪತ್ರೆಗಳಲ್ಲಿ ನೀಡಲಾಗುತ್ತದೆ. ಬಿಪಿಎಲ್‌ ಮತ್ತು ಎಪಿಎಲ್‌ ಕುಟುಂಬಗಳು ಆಧಾರ್‌ ಕಾರ್ಡ್‌, ಬಿಪಿಲ್‌ ಕಾರ್ಡ್‌, ಚುನಾವಣಾ ಗುರುತಿನಚೀಟಿ ನೀಡಿ 10 ರೂ. ಶುಲ್ಕ ಪಾವತಿಸಿ ಕಾರ್ಡ್‌ ಪಡೆಯಬೇಕು. ಆದರೆ ಚಿತ್ರದುರ್ಗ ಜಿಲ್ಲಾಸ್ಪತ್ರೆ ಸೇರಿದಂತೆ ಆರು ತಾಲೂಕುಗಳ ಯಾವುದೇ ಸರ್ಕಾರಿ ಆಸ್ಪತ್ರೆಯಲ್ಲಿ ಈ ವರೆಗೂ ಒಂದೇ ಒಂದು ಆರೋಗ್ಯ ಕಾರ್ಡ್‌ ವಿತರಣೆ ಆಗಿಲ್ಲ. 

ಡಿಎಚ್‌ಒಗೇ ಯೋಜನೆ ಮಾಹಿತಿ ಇಲ್ಲ!: ವಿಚಿತ್ರ ಎಂದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರಿಗೇ ಈ ಯೋಜನೆ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಕೇಸ್‌ ವರ್ಕರ್‌, ಕಂಪ್ಯೂಟರ್‌ ಎಂಟ್ರಿ ಮಾಡುವವರ ಕಡೆ ಕೈ ತೋರಿಸಿ ಮಾಹಿತಿ ಪಡೆಯಿರಿ ಎನ್ನುವ ಉದಾಸೀನದ ಮಾತುಗಳನ್ನು ಆಡುತ್ತಿದ್ದಾರೆ. 

ಇಂದಿಗೂ ಯಾವುದೇ ನೋಂದಣಿ ಮಾಡುತ್ತಿಲ್ಲ. ಇದರಿಂದಾಗಿ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆ ಬಡ ಕುಟುಂಬಗಳ ಪಾಲಿಗೆ ಮರೀಚಿಕೆಯಾಗಿದೆ.
 ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿ ನೋಂದಣಿ ಮಾಡಿಕೊಂಡು ಆರೋಗ್ಯ ಕಾರ್ಡ್‌ ವಿತರಣೆ ಮಾಡಿದ್ದರೆ ಆಸ್ಪತ್ರೆಗಳಲ್ಲಿ ಬಿಲ್‌ ಕಟ್ಟುವ ಅವಶ್ಯಕತೆಯೇ ಇರುತ್ತಿರಲಿಲ್ಲ. ಬಿಪಿಲ್‌ ಕಾರ್ಡ್‌ ಹೊಂದಿದವರಿಗೆ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ಸಿಗುತ್ತಿತ್ತು. ಎಪಿಲ್‌ ಕಾರ್ಡ್‌ ಹೊಂದಿದವರಿಗೆ ಚಿಕಿತ್ಸಾ ವೆಚ್ಚದಲ್ಲಿ ಶೇ. 30 ರಷ್ಟು ರಿಯಾಯತಿ ಪಡೆಯಬಹುದಾಗಿತ್ತು.

ಬಿಪಿಎಲ್‌ ಕುಟುಂಬಗಳು ಖಾಸಗಿ ಆಸ್ಪತ್ರೆಗಳಲ್ಲೂ ಐದು ಲಕ್ಷ ರೂ. ತನಕ ಉಚಿತ ಚಿಕಿತ್ಸೆ ಪಡೆಯಬಹುದಾಗಿತ್ತು. ರಾಜ್ಯದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಗಳಿವೆಯೋ ಅಲ್ಲಿ ನೋಂದಣಿ ಮಾಡಲಾಗುತ್ತಿದೆ ಎಂದು ಕೇಸ್‌ ವರ್ಕರ್‌ಗಳು ಹೇಳುತ್ತಾರೆ.
 
ಬಡ ಕುಟುಂಬಗಳಿಗೆ ಯೂನಿವರ್ಸಲ್‌ ಹೆಲ್ತ್‌ ಕಾರ್ಡ್‌ ನೀಡಲು ಪ್ರತ್ಯೇಕ ಘಟಕ ಕೆಲಸ ಮಾಡಬೇಕಿತ್ತು. ಆದರೆ ಅಂತಹ ಯಾವುದೇ ಕಾರ್ಯ ಆಗಿಲ್ಲ. ಯಾವ ರೋಗಿ ಬಿಪಿಎಲ್‌ ಕಾರ್ಡ್‌ ಹಿಡಿದು ಬರುತ್ತಾನೋ ಸರ್ಕಾರಿ ವೈದ್ಯರು ಚಿಕಿತ್ಸೆ ನೀಡುತ್ತಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಆ ಚಿಕಿತ್ಸೆಗೆ ಸೌಲಭ್ಯ ಇಲ್ಲದಿದ್ದರೆ ವೈದ್ಯರು ಪತ್ರ ನೀಡಿ ಬೇರೆ ಕಡೆ ಚಿಕಿತ್ಸೆಗೆ ಶಿಫಾರಸು ಮಾಡುತ್ತಾರೆ. 

ಒಟ್ಟಿನಲ್ಲಿ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಬಡ ಕುಟುಂಬಗಳಲ್ಲಿ ಗೊಂದಲ ಇದೆ. ಈ ಗೊಂದಲವನ್ನು ನಿವಾರಿಸಿ ಬಡವರಿಗೆ ಆರೋಗ್ಯ ಭಾಗ್ಯ ನೀಡುವ ಹೊಣೆ ಸಂಬಂಧಿಸಿದ ಅಧಿಕಾರಿಗಳ ಮೇಲಿದೆ.  

ಯಾವ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ ಇದೆಯೋ ಅಲ್ಲಿ ಮಾತ್ರ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆಗೆ ನೋಂದಣಿ ಮಾಡಲಾಗುತ್ತಿದೆ. ಚಿತ್ರದುರ್ಗದಲ್ಲಿ ಇರುವರೆಗೆ ಯಾವುದೇ ನೋಂದಣಿ ಮಾಡಲಾಗಿಲ್ಲ. ಬಿಪಿಎಲ್‌ ಕಾರ್ಡ್‌ ತಂದಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ.
 ಡಾ| ಬಿ.ವಿ. ನೀರಜ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ.

ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.