ಶಿಸ್ತುಬದ್ಧ ಕೃಷಿಯಿಂದ ನಷ್ಟವಿಲ್ಲ: ಮೂರ್ತಿ


Team Udayavani, Dec 15, 2018, 5:10 PM IST

cta-1.jpg

ಚಿತ್ರದುರ್ಗ: ಕೃಷಿ ನಷ್ಟದ ವಲಯ ಎನ್ನುವ ಅಭಿಪ್ರಾಯ ಎಲ್ಲೆಡೆಯಿದ್ದು, ಶಿಸ್ತು ಬದ್ಧವಾಗಿ ಕೃಷಿ ಕಾಯಕದಲ್ಲಿ ತೊಡಗಿದರೆ ನಷ್ಟದ ಮಾತೆ ಬರುವುದಿಲ್ಲ ಎಂದು ಪ್ರಗತಿಪರ ರೈತ ಆರ್‌.ಎ. ದಯಾನಂದ ಮೂರ್ತಿ ಹೇಳಿದರು.

ಇಲ್ಲಿನ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಕೃಷಿ ಕಾಯಕವನ್ನು ಪ್ರಮಾಣಿಕವಾಗಿ ಮಾಡಿದ್ದಲ್ಲದೆ ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವುದಕ್ಕೆ ದುಬೈನಲ್ಲಿ ಇಂಡೋ ಗಲ್ಫ್  ಗೋಲ್ಡ್‌ ಮೆಡಲ್‌ ಅವಾರ್ಡ್‌ ನೀಡಲಾಗಿದೆ ಎಂದರು.

ರಷ್ಯಾ, ಥೈಲಾಂಡ್‌, ಅಬುದಾಬಿಯಲ್ಲಿ ಸುತ್ತಾಡಿ ಅಲ್ಲಿನ ಕೃಷಿ ಪದ್ಧತಿಯನ್ನು ವೀಕ್ಷಿಸಿ ಬಂದಿದ್ದೇನೆ. ಭೂಮಿ ತಾಯಿಯನ್ನು ನಂಬಿ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಬೇಸಾಯ ಮಾಡುತ್ತಿದ್ದೇನೆ. ಇನ್ನು ಹೆಚ್ಚು ಬೆಳೆಯಬೇಕೆಂಬ ಆಸೆಯಿದೆ. ಆದರೆ, ಚಿತ್ರದುರ್ಗ ಜಿಲ್ಲೆ ಬರಪೀಡಿತ ಪ್ರದೇಶ ಮಳೆಯ ಕೊರತೆಯಿರುವುದರಿಂದ ಇದ್ದುದರಲ್ಲಿಯೇ ತೃಪ್ತಿಪಟ್ಟುಕೊಂಡು ನೆಮ್ಮದಿಯ ಜೀವನ ಕಂಡುಕೊಳ್ಳಬೇಕೆ ವಿನಃ ಆತ್ಮಹತ್ಯೆಯಂತ ಕೆಟ್ಟ ಆಲೋಚನೆ ಮಾಡಬಾರದು ಎಂದು ರೈತರಲ್ಲಿ ಮನವಿ ಮಾಡಿದರು.

ಅಲ್ಪಸ್ವಲ್ಪ ಮಳೆಯಲ್ಲಿಯೇ ರೈತರು ಬೆಳೆಯುವ ಬೆಳೆಗೆ ಬೆಂಬಲ ಬೆಲೆ ಸಿಗದಂತಾಗಿದೆ. ಮಾರುಕಟ್ಟೆಯಲ್ಲಿ  ಮಧ್ಯವರ್ತಿಗಳ ಹಾವಳಿ ಮತ್ತು ದೌರ್ಜನ್ಯ ತಡೆಗಟ್ಟಬೇಕಾಗಿದೆ. ರೈತರು ಪ್ರಾಮಾಣಿಕತೆಯಿಂದ ಕೃಷಿಯಲ್ಲಿ ತೊಡಗಿದರೆ ಒಂದಲ್ಲ ಒಂದು ದಿನ ಅವಕಾಶ ಸಿಕ್ಕೇ ಸಿಗುತ್ತದೆ ಎಂದರು.

 ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆ ಬೆಳೆಯುವುದನ್ನು ಕಂಡುಕೊಳ್ಳಬೇಕು. ದೇಶಕ್ಕೆ ಅನ್ನ ಕೊಡುವ ರೈತನೇ ಸತ್ತರೆ ಅನ್ನ ಬೆಳೆಯುವವರು ಯಾರು ಎನ್ನುವುದನ್ನು ಮೊದಲು ರೈತ ಅರ್ಥಮಾಡಿಕೊಂಡರೆ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಮಿಶ್ರ ಸಮಗ್ರ ಕೃಷಿ ಸಾವಯವ ಪದ್ಧತಿಯಲ್ಲಿ ಹತ್ತು ಎಕರೆಯಲ್ಲಿ ಶೇಂಗಾ, ತೊಗರಿ, ಸೂರ್ಯಕಾಂತಿ, ಜೋಳ,
ಹಲಸಂದೆ ಬೆಳೆದಿದ್ದೇನೆ. ಇನ್ನು ಐದು ಎಕರೆಯಲ್ಲಿ ಅಡಿಕೆ, ತೆಂಗು, ಮಾವು, ಸಪೋಟ, ದಾಳಿಂಬೆ, ಪಪ್ಪಾಯಿ, ಸೀಬೆ, ನುಗ್ಗೆ, ಸೀತಾಫಲ, ಗೋಡಂಬಿ, ಮೋಸಂಬಿ, ಬದನೆ, ಜಂಬುನೇರಳೆ, ನಿಂಬೆ, ಮಲ್ಲಿಗೆ ಬೆಳೆದಿದ್ದೇನೆ, ಕೃಷಿ ಜತೆ ಕೋಳಿ, ಪಾರಿವಾಳ, ಮೊಲ, ಹಸು, ಎಮ್ಮೆ, ಕುದುರೆಯನ್ನು ಸಾಕಿಕೊಂಡಿದ್ದು, ಬೇರೆ ರೈತರಿಗೆ ಸ್ಪೂರ್ತಿಯಾಗಬೇಕೆಂಬುದು ನನ್ನ ಬಯಕೆ ಎಂದು ಹೇಳಿದರು.

ಹೋರಾಟಗಾರ ಮುರುಘರಾಜೇಂದ್ರ ಒಡೆಯರ್‌, ರೈತ ಮುಖಂಡ ಬಸ್ತಿಹಳ್ಳಿ ಸುರೇಶ್‌ ಬಾಬು, ನಾಗಪ್ಪ, ತಿಮ್ಮಣ್ಣ, ರುದ್ರಮುನಿಯಪ್ಪ, ಪಾಂಡುರಂಗಪ್ಪ ಇತರರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.