ಕೋಟೆ ಮೇಲ್ಭಾಗದಲ್ಲಿ ವಿದ್ಯುತ್‌ ದೀಪ ಅಳವಡಿಕೆಗೆ ಒತ್ತಾಯ


Team Udayavani, Jan 11, 2019, 11:35 AM IST

cta-1.jpg

ಚಿತ್ರದುರ್ಗ: ಐತಿಹಾಸಿಕ ಕೋಟೆ ಮೇಲ್ಭಾಗದಲ್ಲಿ ಹತ್ತಾರು ದೇವಸ್ಥಾನಗಳಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ದೇವಸ್ಥಾನಗಳಿಗೆ ದೀಪ ಅಳವಡಿಸುವಂತೆ ಒತ್ತಾಯಿಸಿ ಭಕ್ತರು ಹಾಗೂ ಸಾರ್ವಜನಿಕರು ಕೋಟೆ ಸಮೀಪ ಗುರುವಾರ ಪ್ರತಿಭಟನೆ ನಡೆಸಿದರು. ನಂತರ ಪುರಾತತ್ವ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮೇಲುದುರ್ಗದಲ್ಲಿ (ಕೋಟೆ ಮೇಲ್ಭಾಗ) ಏಕನಾಥೇಶ್ವರಿ, ಗಣೇಶ, ಬನಶಂಕರಿ, ಹಿಡಂಬೇಶ್ವರಿ, ಸಂಪಿಗೆ ಸಿದ್ದೇಶ್ವರ, ವೇಣುಗೋಪಾಲಸ್ವಾಮಿ, ಆಂಜನೇಯಸ್ವಾಮಿ, ಕಾಶಿ ವಿಶ್ವನಾಥಸ್ವಾಮಿ, ಮುರುಘಾಮಠ ಸೇರಿದಂತೆ ಮತ್ತಿತರ ದೇವಸ್ಥಾನಗಳು, ಗುಡಿ ಗೋಪುರಗಳಿವೆ. ನಿತ್ಯ ಪೂಜೆ, ಪುನಸ್ಕಾರ ಮಾಡಲು ಮತ್ತು ಭಕ್ತರು, ಸಾರ್ವಜನಿಕರು ದೇವಸ್ಥಾನಗಳಿಗೆ ಬಂದು ಹೋಗಲು ವಿದ್ಯುತ್‌ ದೀಪಗಳ ಅವಶ್ಯಕತೆ ಇದೆ. ಆದ್ದರಿಂದ ಕೂಡಲೇ ಮೇಲುದುರ್ಗದ ಎಲ್ಲ ದೇವಸ್ಥಾನಗಳಿಗೆ ಬೀದಿದೀಪಗಳನ್ನು ಪುರಾತತ್ವ ಇಲಾಖೆಯವರು ಅಳವಡಿಸಬೇಕು ಎಂದು ಒತ್ತಾಯಿಸಿದರು.

ಕೋಟೆ ಆವರಣ ಸೇರಿದಂತೆ ವಿವಿಧ ದೇವಸ್ಥಾನಗಳ ಬಳಿ 2006ರಲ್ಲಿ ಬಣ್ಣ ಬಣ್ಣದ ವಿದ್ಯುತ್‌ ದೀಪಗಳನ್ನು ಅಳವಡಿಸಲಾಗಿತ್ತು. ಭಾರತೀಯ ಸರ್ವೇಕ್ಷಣ ಪುರಾತತ್ವ ಇಲಾಖೆ ಮತ್ತು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಜಂಟಿಯಾಗಿ ವಿದ್ಯುತ್‌ ದೀಪ ಅಳವಡಿಸಿದ್ದವು. ಪುರಾತತ್ವ ಇಲಾಖೆ ವತಿಯಿಂದ 3, 4, 5 ಮತ್ತು 6ನೇ ಸುತ್ತಿನ ಕೋಟೆಗಳಿಗೆ ಪ್ರತಿಫಲನ ನೀಡುವ ವಿದ್ಯುತ್‌ ದೀಪ ಅಳವಡಿಸಲಾಗಿತ್ತು. ಅಲ್ಲದೆ ವಿದ್ಯುತ್‌ಗಾಗಿ ಜನರೇಟರ್‌ ಬಳಸಿ ದೀಪ ಬೆಳಗಿಸಿ ರಾತ್ರಿ ಕೋಟೆ ಪ್ರದೇಶದ ಸೌಂದರ್ಯವವನ್ನು ಹೆಚ್ಚಿಸಲಾಗಿತ್ತು. ವಿದ್ಯುತ್‌ ದೀಪ ಅಳವಡಿಸಿದ ಸಂದರ್ಭದಲ್ಲಿ ಪ್ರತಿ ನಿತ್ಯ ಸಂಜೆ 6 ರಿಂದ 9 ಗಂಟೆವರೆಗೆ ದೀಪಗಳು ಬೆಳಗುತ್ತಿದ್ದವು ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆ ಪ್ರತಿಫಲನ ನೀಡುವ ನೂರಾರು ವಿದ್ಯುತ್‌ ದೀಪಗಳನ್ನು ಕಾಂಕ್ರಿಟ್ ಬುನಾದಿ ಹಾಕಿ ಶಕ್ತಿಯುತ ಬಲ್ಬ್ಗಳನ್ನು ನೆಲದಾಳದಲ್ಲಿ ವೈರ್‌ಗಳ ಸಂಪರ್ಕ ಬಳಸಿ ಅಳವಡಿಸಿತ್ತು. ಬೆಟ್ಟದ ಏಳನೇ ಸುತ್ತಿನ ಕೋಟೆ, ಗಣಪತಿ ದೇವಸ್ಥಾನ, ಏಕನಾಥೇಶ್ವರಿ ದೇವಸ್ಥಾನ, ದೀಪಸ್ತಂಭಗಳು, ಟಂಕಸಾಲೆ ಆವರಣ, ಹಿಡಂಬೇಶ್ವರ ದೇವಸ್ಥಾನ, ಮುರುಘಾಮಠ, ಸಂಪಿಗೆ ಸಿದ್ದೇಶ್ವರ ದೇವಸ್ಥಾನ, ಅಕ್ಕ-ತಂಗಿಯರ ಹೊಂಡ, ಗೋಪಾಲಸ್ವಾಮಿ ದೇವಸ್ಥಾನ ಇತ್ಯಾದಿ ಸ್ಥಳಗಳಲ್ಲಿ ಅಳವಡಿಸಿತ್ತು. ಇದರಿಂದಾಗಿ ಸಾಕಷ್ಟು ಮಂದಿ ಪ್ರವಾಸಿಗರು ಬರುತ್ತಿದ್ದರು. ಅಲ್ಲದೆ 2006 ರಲ್ಲಿ ಅಂದಿನ ಜಿಲ್ಲಾಧಿಕಾರಿ ಕೆ. ಅಮರನಾರಾಯಣ ಮತ್ತಿತರರ ಪ್ರಯತ್ನದಿಂದಾಗಿ ಬೆಟ್ಟದ ಮೇಲಿನ ದೀಪಗಳು ಬೆಳಗಿದ್ದವು ಎಂದು ಪುರಾತತ್ವ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿಗಳಿಗೆ ಮನವರಿಕೆ ಮಾಡಿದರು.

ಏಕನಾಥೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ದೊರೆಸ್ವಾಮಿ, ಪ್ರಧಾನ ಅರ್ಚಕ ವಿ. ಮೃತ್ಯುಂಜಯಮೂರ್ತಿ,‌ ಜೆ. ಹನುಮಂತಪ್ಪ, ಮಲ್ಲಿಕಾರ್ಜುನ್‌, ಎಚ್. ತಿಮ್ಮಣ್ಣ, ರಾಮಜ್ಜ, ಗೌಡ್ರು ಗುರುಸಿದ್ದಪ್ಪ, ಓಂಕಾರ್‌, ಗಿರೀಶ್‌, ಕಿರಣ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿದ್ಯುತ್‌ ಸಂಪರ್ಕ ಸ್ಥಗಿತದಿಂದ ತೊಂದರೆ

ಈ ಹಿಂದೆ ಕೋಟೆ ಮೇಲ್ಭಾಗದಲ್ಲಿರುವ ಎಲ್ಲ ದೇವಸ್ಥಾನಗಳಿಗೆ ವಿದ್ಯುತ್‌ ಲೈನ್‌ ಮತ್ತು ದೀಪಗಳನ್ನು ಅಳವಡಿಸಲಾಗಿತ್ತು. ಇತ್ತೀಚೆಗೆ ವಿದ್ಯುತ್‌ ಸಂಪರ್ಕ ಕಡಿತ ಮಾಡಲಾಗಿದೆ. ಪ್ರತಿನಿತ್ಯ ಬೆಳಗಿನ ಜಾವ ನಾಲ್ಕೈದು ಗಂಟೆಗೆ ಪೂಜಾ ಕೈಂಕರ್ಯಗಳು ಆರಂಭವಾದರೆ ರಾತ್ರಿ 10ರ ತನಕ ನಾನಾ ರೀತಿಯ ಪೂಜೆ, ಪುಷ್ಪಾಲಂಕಾರ, ವಾರದ ಪೂಜೆ ನಿರಂತರವಾಗಿ ನಡೆಯುತ್ತಿರುತ್ತವೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು, ಅದರಲ್ಲೂ ಮಹಿಳೆಯರು ಮತ್ತು ಮಕ್ಕಳು ಪೂಜಾ ಕಾರ್ಯಗಳಿಗೆ ಬೆಳಿಗ್ಗೆ, ಸಂಜೆ, ರಾತ್ರಿ ಸಮಯದಲ್ಲಿ ಬರುತ್ತಾರೆ. ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸಬೇಕಾಗಿರುವುದರಿಂದ ಪುರಾತತ್ವ ಇಲಾಖೆ ಕಡ್ಡಾಯವಾಗಿ ವಿದ್ಯುತ್‌ ದೀಪದ ವ್ಯವಸ್ಥೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.