ಎಳ್ಳು-ಬೆಲ್ಲದ ಹಬ್ಬಕ್ಕೆ ಸಿದ್ಧತೆ ಜೋರು


Team Udayavani, Jan 15, 2019, 10:18 AM IST

cta-1.jpg

ಚಿತ್ರದುರ್ಗ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂಕ್ರಾಂತಿ ಹಬ್ಬದ ಸಿದ್ಧತೆ ಜೋರಾಗಿ ನಡೆದಿದೆ. ಜ. 15 ರಂದು ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ನಗರದ ಗಾಂಧಿ ವೃತ್ತ, ಸಂತೇಹೊಂಡ ಮಾರುಕಟ್ಟೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಜನರು ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದರು.

ಸಂಕ್ರಾಂತಿ ಹಬ್ಬದ ಅಂಗವಾಗಿ ಮನೆಗಳಲ್ಲಿ ಧಾರ್ಮಿಕ ಕಾರ್ಯ ನಡೆಯುತ್ತದೆ. ಹಾಗಾಗಿ ಎಳ್ಳು, ಬೆಲ್ಲ, ಕಬ್ಬು, ಕೊಬ್ಬರಿ, ಹೂವು, ಹಣ್ಣು ಮತ್ತು ಸಿಹಿ ಖರೀದಿಗೆ ಜನರು ಮುಗಿ ಬಿದ್ದಿದ್ದರು. ಮಾರುಕಟ್ಟೆಯಲ್ಲಿ ಬೆಳಿಗ್ಗೆಯಿಂದ ಕಡಲೆಕಾಯಿ (ಶೇಂಗಾ), ಎಳ್ಳು, ಕುಸರೆಳ್ಳು ಸೇರಿದಂತೆ ನಾನಾ ತಿನಿಸು, ವಸ್ತುಗಳನ್ನು ಖರೀದಿಸಿದರು. ವಿಶೇಷ ತಿನಿಸುಗಳ ದರ ತುಸು ಹೆಚ್ಚಾಗಿದ್ದರೂ ಅವುಗಳನ್ನು ಕೊಳ್ಳುವಲ್ಲಿ ಹಿಂದೆ ಬೀಳಲಿಲ್ಲ.

ದೇವಾಲಯಗಳಲ್ಲಿ ವಿಶೇಷ ಪೂಜೆ: ಕೋಟೆ ನಗರಿಯ ವಿವಿಧ ದೇಗುಲಗಳಲ್ಲಿ ಸಂಕ್ರಾಂತಿ ಹಬ್ಬದಂದು ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಹೊಳಲ್ಕೆರೆ ರಸ್ತೆಯ ಬರಗೇರಮ್ಮ ದೇಗುಲದಲ್ಲಿ ದೇವಿ ಮೂರ್ತಿಗೆ ಅಲಂಕಾರ, ಮಹಾಮಂಗಳಾರತಿ ಹಾಗೂ ಪೂಜೆ ಬೆಳಿಗ್ಗೆ 5:30ರಿಂದ ನಡೆಯಲಿವೆ. ರಾತ್ರಿ 10 ಗಂಟೆವರೆಗೆ ಭಕ್ತರಿಗೆ ದೇವರ ದರ್ಶನ ಪಡೆಯಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದೇಗುಲದ ಪ್ರಧಾನ ಅರ್ಚಕ ಪೂಜಾರ್‌ ಸತ್ಯಪ್ಪ ತಿಳಿಸಿದ್ದಾರೆ.

ಹೊಳಲ್ಕೆರೆ ರಸ್ತೆಯ ಗೌರಸಂದ್ರ ಮಾರಮ್ಮ ದೇವತೆಯ ದೇಗುಲದಲ್ಲಿ ಬೆಳಿಗ್ಗೆ 5:30ಕ್ಕೆ ಪುಷ್ಪಾಲಂಕಾರ, ಮಹಾಮಂಗಳಾರತಿ ನಡೆಯಲಿದೆ. ರಾತ್ರಿ 9 ಗಂಟೆವರೆಗೆ ಭಕ್ತರಿಗೆ ದೇವರ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ದೇಗುಲ ಅಭಿವೃದ್ಧಿ ಸಮಿತಿ ಪ್ರಕಟಣೆ ತಿಳಿಸಿದೆ.

ಕೋಟೆ ಸಮೀಪದ ಏಕನಾಥೇಶ್ವರಿ ದೇವಿ ದೇಗುಲದಲ್ಲಿ ಬೆಳಿಗ್ಗೆ 5:30ಕ್ಕೆ ಪುಷ್ಪಾಲಂಕಾರ, ಮಹಾಮಂಗಳಾರತಿ ಹಾಗೂ ಪೂಜೆ ನೆರವೇರಿಸಲಾಗುವುದು. ದೊಡ್ಡಪೇಟೆ ರಾಜ ಉತ್ಸವಾಂಬ ಉಚ್ಚಂಗಿ ಯಲ್ಲಮ್ಮ ದೇವಿಯ ದೇಗುಲದಲ್ಲಿ ಬೆಳಿಗ್ಗೆ 5 ಗಂಟೆಗೆ ದೇವತೆಗೆ ಪುಷ್ಪಾಲಂಕಾರ ನಡೆಯಲಿದ್ದು, ರಾತ್ರಿ 9ರವರೆಗೆ ಭಕ್ತರು ದೇವರ ದಶೇನ ಪಡೆಯಬಹುದು. ಜೋಗಿಮಟ್ಟಿ ರಸ್ತೆಯ ತ್ರಿಪುರಸುಂದರಿ ತಿಪ್ಪಿನಘಟ್ಟಮ್ಮ ದೇವಿ ದೇಗುಲದಲ್ಲಿ ಬೆಳಗಿನ ಜಾವ 3 ಗಂಟೆಗೆ ಮಹಾ ಅಭಿಷೇಕ, 5 ಗಂಟೆಗೆ ಪುಷ್ಪಾಲಂಕಾರ, 6 ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ.

ರಾತ್ರಿ 9 ಗಂಟೆವರೆಗೆ ಭಕ್ತರಿಗೆ ದೇವತೆಯ ದರ್ಶನ ಪಡೆಯಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದೇಗುಲ ಅಭಿವೃದ್ಧಿ ಸಮಿತಿ ತಿಳಿಸಿದೆ. ಬೆಟ್ಟದ ಗಣಪತಿ, ಹಿಡಂಬೇಶ್ವರ ಸ್ವಾಮಿ, ಸಂಪಿಗೆ ಸಿದ್ದೇಶ್ವರ ಸ್ವಾಮಿ, ಅಂತರಘಟ್ಟಮ್ಮ ದೇವಿ ದೇವಾಲಯ ಸೇರಿದಂತೆ ಹಲವು ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಲಿದೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.