ಸಮಾಜದಲ್ಲಿ ನೈತಿಕತೆ ಕಣ್ಮರೆ


Team Udayavani, Jan 30, 2019, 10:06 AM IST

cta-4.jpg

ಚಿತ್ರದುರ್ಗ: ನೈತಿಕ ನೆಲೆಗಟ್ಟು ಸಂಪೂರ್ಣ ಕುಸಿದಿದ್ದು ಅದನ್ನು ಭದ್ರಪಡಿಸಿಕೊಂಡು ತಲೆಯೆತ್ತಿ ಬಾಳುವಂತೆ ಜೀವನ ನಡೆಸಬೇಕು ಎಂದು ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದ ರಂಗಯ್ಯನ ಬಾಗಿಲು ಸಮೀಪದ ಎಸ್‌.ಜಿ ಪ್ಯಾರಾ ಮೆಡಿಕಲ್‌ ಕಾಲೇಜು ಕ್ಯಾಂಪಸ್‌ನಲ್ಲಿ ಚಿತ್ರದುರ್ಗ ನರ್ಸಿಂಗ್‌ ಮತ್ತು ಪ್ಯಾರಾ ಮೆಡಿಕಲ್‌ ಫೆಡರೇಷನ್‌ ವತಿಯಿಂದ ಆಯೋಜಿಸಿದ್ದ ನರ್ಸಿಂಗ್‌ ಮತ್ತು ಪ್ಯಾರಾ ಮೆಡಿಕಲ್‌ ಎಕ್ಸ್‌ಪೋ-2019 ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.

ಮೆಡಿಕಲ್‌, ಇಂಜಿನಿಯರಿಂಗ್‌ ಸೇರಿದಂತೆ ಮತ್ತಿತರ ಕೋರ್ಸ್‌ಗಳನ್ನು ಓದುವ ವಿದ್ಯಾರ್ಥಿಗಳು ದುಶ್ಚಟಗಳ ದಾಸರಾಗಿ ಪ್ರಾಣ ಕಳೆದುಕೊಳ್ಳುವುದನ್ನು ಗಮನಿಸಿದ್ದೇವೆ. ಅದರಲ್ಲೂ

ಶ್ರೀಮಂತ ಮನೆತನದ ಹೆಣ್ಣು, ಗಂಡು ಇಂತಹ ದಾಸ್ಯಕ್ಕೆ ಬಲಿಯಾಗುತ್ತಿರುವುದು ಆತಂಕದ ವಿಚಾರ. ದುಶ್ಚಟಗಳಿಗೆ ಹೆಣ್ಣು-ಗಂಡು ಎನ್ನುವ ಭೇದ ಇಲ್ಲ ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ. ಇಬ್ಬರು ಕೂಡ ಮಾದಕ ವಸ್ತುಗಳಿಗೆ ಬಲಿಯಾಗಿ ಬದುಕು ನರಕ ಮಾಡಿಕೊಳ್ಳುತ್ತಿರುವುದು ಬೇಸರದ ಸಂಗತಿ. ತಂದೆ ತಾಯಿಗಳು ಹತ್ತಾರು ಕನಸು ಕಟ್ಟಿಕೊಂಡು ಮಕ್ಕಳನ್ನು ಶಾಲಾ, ಕಾಲೇಜುಗಳಿಗೆ ಕಳುಹಿಸಿರುತ್ತಾರೆ. ಮಕ್ಕಳು ನಾಳೆಯ ಭವಿಷ್ಯಕ್ಕೆ ದಿಕ್ಕಾಗುತ್ತಾರೆ ಎಂದು

ಭಾವಿಸಿಕೊಳ್ಳುತ್ತಾರೆ. ಆದರೆ ವಿದ್ಯಾರ್ಥಿಗಳು ಪೋಷಕರಿಗೆ ದಿಕ್ಕಾಗುವ ಬದಲಾಗಿ ಅವರನ್ನು ದಿಕ್ಕುಗೇಡಿಗಳನ್ನಾಗಿ ಮಾಡುತ್ತಾರೆ ಎಂದು ವಿಷಾದಿಸಿದರು.

ಶಿಕ್ಷಣದಲ್ಲಿ ನಾವು ಎತ್ತರದ ಸ್ಥಾನಕ್ಕೆ ಹೋಗುತ್ತಿದ್ದೇವೆ. ಆದರೆ ನೈತಿಕವಾಗಿ ಅದಕ್ಕಿಂತ ಪ್ರಪಾತಕ್ಕೆ ಇಳಿಯುತ್ತಿರುವುದು ಆಘಾತಕಾರಿ ವಿಚಾರ. ಇಂದಿನ ಧಾರ್ಮಿಕ ಹಾಗೂ ರಾಜಕೀಯ ಕ್ಷೇತ್ರವನ್ನು ಗಮನಿಸಿದರೆ ಪರಿಸ್ಥಿತಿ ಹೇಗಿದೆ ಎನ್ನುವುದು ತಿಳಿಯಲಿದೆ. ರೆಸಾರ್ಟ್‌ಗೆ ತೆರಳಿದ್ದ ರಾಜಕಾರಣಿಗಳು ಕುಡಿತದಿಂದ ಏನೆಲ್ಲಾ ಅವಾಂತರ ಮಾಡಿಕೊಂಡರು, ಸಮಾಜಕ್ಕೆ ಇದು ಬೇಕಾ ಎಂದು ಪ್ರಶ್ನಿಸಿದರು. ಕಾಲೇಜುಗಳಲ್ಲಿ ಅಧ್ಯಾಪಕ ಪಾಠ ಮಾಡಲು ಸಾಕಷ್ಟು ಅಭ್ಯಾಸ ಮಾಡುತ್ತಾನೆ. ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕಾದ ಅಗತ್ಯವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ದೃಶ್ಯ ಮಾಧ್ಯಮಗಳ ಹಾವಳಿಯಿಂದಾಗಿ ಬದುಕು ಕಳೆದುಕೊಳ್ಳುವ ಮಂದಿ ಬಹಳ ಇದ್ದಾರೆ. ನಾವು ಎಲ್ಲಿ ಕುಳಿತಿದ್ದೇವೆ ಎಂಬ ಅರಿವಿಲ್ಲದೇ ಮೊಬೈಲ್‌ನಲ್ಲೇ ನಿಮ್ಮನ್ನು ನೀವು ಮುಳುಗಿಸಿ ಕೊಂಡಿರುತ್ತೀರಿ, ಹಾಗಾಗಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬಂದ ತಕ್ಷಣ ಮೊಬೈಲ್‌ ಜಾಮ್‌ ಮಾಡುವಂತ ವ್ಯವಸ್ಥೆ ಆಗಬೇಕು. ಮೊಬೈಲ್‌ ಆನ್‌ ಆಗದಿದ್ದರೆ ಏನೆಲ್ಲಾ ಸಾಧ್ಯತೆಗಳನ್ನು ಕಂಡುಕೊಳ್ಳಲು ಅವಕಾಶ ಇದೆ ಎಂಬುದನ್ನು ಅರಿತುಕೊಳ್ಳಬೇಕು ಎಂದರು. ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ನರ್ಸಿಂಗ್‌ ಮತ್ತು ಪ್ಯಾರಾ ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳು ತಯಾರಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎನ್‌. ಜಯಪ್ರಕಾಶ್‌, ಬೆಂಗಳೂರು ಕೆಎನ್‌ಸಿ ರಿಜಿಸ್ಟ್ರಾರ್‌ ಬಿ. ಜ್ಯೋತಿ ಇದ್ದರು.

ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ
ವಿದ್ಯಾರ್ಥಿ ಜೀವನ ಬಂಗಾರದ ಜೀವನ. ಅದನ್ನು ಕಬ್ಬಿಣದ ಜೀವನವನ್ನಾಗಿ ಮಾಡಿಕೊಳ್ಳಬೇಡಿ. ನೈತಿಕವಾಗಿ ಬಾಳಬೇಕಾದರೆ ಬಹಳ ಎಚ್ಚರಿಕೆಯ ಹೆಜ್ಜೆ ಇಡಬೇಕು. ಅಧ್ಯಯನಾಸಕ್ತಿ ಬೆಳೆಸಿಕೊಳ್ಳಬೇಕು. ಹೊಸ ಹೊಸ ಶೋಧನೆ ಮಾಡಬೇಕು ಎಂದು ಪಂಡಿತಾರಾಧ್ಯ ಶ್ರೀಗಳು ತಿಳಿಸಿದರು. ವಿಜ್ಞಾನ ತುಂಬಾ ಬೆಳೆದಿದೆ. ವಿಜ್ಞಾನ ಬೆಳೆಯುವುದರ ಜತೆ ನಾವೂ ಬೆಳೆಯದಿದ್ದರೆ ಹೇಗೆ, ವಿಜ್ಞಾನ ಬೆಳೆಯುವುದೇ ನಮ್ಮ ಬೆಳವಣಿಗೆ ಮೂಲಕ. ಹಾಗಾಗಿ ವಿದ್ಯಾರ್ಥಿಗಳು ಯಾವಾಗಲೂ ಚಿಂತನೆ ಮಾಡುತ್ತಿರಬೇಕು. ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ನಾವು ಸಮಾಜಕ್ಕೆ ಏನು ಕೊಡಬಲ್ಲೆ ಎಂಬ ಪ್ರಶ್ನೆ ಹಾಕಿಕೊಂಡು ಹೊಸ ಶೋಧಗಳ ಹುಟ್ಟಿಗೆ ಕಾರಣರಾಗಬೇಕು. ಶ್ರದ್ಧೆ, ಸದ್ಬಾವನೆಯನ್ನು ಮೈಗೂಡಿಸಿಕೊಂಡರೆ ಸಾಧನೆ ಸುಲಭವಾಗಲಿದೆ. ಕ್ರಿಯಾಶೀಲ, ಸಕಾರಾತ್ಮಕ ಚಟುವಟಿಕೆಗಳಿಂದ ಬಾಳು ಹಸನಾಗುತ್ತದೆ ಎಂದರು.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.