ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ ಶಿವಶರಣ
Team Udayavani, Feb 2, 2019, 9:24 AM IST
ಹಿರಿಯೂರು: ನಗರದ ತಾಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಶಿವಶರಣರು ಸಮಾಜ ಸುಧಾರಣೆಗೆ ಶ್ರಮಿಸಿದರು. ಕೆಳವರ್ಗದ ಜನರಲ್ಲಿ ಜಾಗೃತಿ ಮೂಡಿಸಿ ಎಲ್ಲರೂ ಸಮಾನರು ಎಂಬ ಭಾವನೆ ಮೂಡಿಸಿದ್ದಾರೆ. ಅವರಲ್ಲಿ ಬಸವಣ್ಣನವರ ಅನುಯಾಯಿ ಮಡಿವಾಳ ಮಾಚಿದೇವರು ಬಸವಣ್ಣನವರ ಮಾರ್ಗದರ್ಶನದಲ್ಲಿ ನಡೆದು ಕೆಳವರ್ಗದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅಂತಹ ಮಹನೀಯರ ಆದರ್ಶ ಜೀವನದಲ್ಲಿ ಅಳವಡಿಸಿ ಕೊಂಡರೆ ಉತ್ತಮ ಜೀವನ ನಡೆಸಲು ಸಾಧ್ಯ ಎಂದರು.
ತಾಪಂ ಅಧ್ಯಕ್ಷರಾದ ಎಸ್. ಚಂದ್ರಪ್ಪ, ತಹಶೀಲ್ದಾರ್ ಜೆ.ಸಿ. ವೆಂಕಟೇಶಯ್ಯ, ರಾಜ್ಯ ಬಿಜೆಪಿ ಮುಖಂಡ ಡಿ.ಟಿ. ಶ್ರೀನಿವಾಸ್, ನಗರಸಭೆ ಅಧ್ಯಕ್ಷೆ ಮಂಜುಳಾ, ತಾಪಂ ಸದಸ್ಯರಾದ ಓಂಕಾರಪ್ಪ, ಯಶವಂತ್, ನಗರಸಭೆ ಸದಸ್ಯರಾದ ಎಚ್. ನಟರಾಜ್, ಚಂದ್ರಶೇಖರ್, ಜಿ. ಪ್ರೇಮ್ಕುಮಾರ್, ಎಸ್.ಪಿ.ಟಿ. ದಾದಪೀರ್, ಪೌರಾಯಕ್ತ ಮಹಾಂತೇಶ್, ಗ್ರೇಡ್ -2 ತಹಶೀಲ್ದಾರ್ ಚಂದ್ರಕುಮಾರ್, ತಾಲೂಕು ಮಡಿವಾಳ ಸಂಘದ ಅಧ್ಯಕ್ಷ ಸಿದ್ದೇಶ್, ಡಾ| ಡಿ. ಧರಣೇಂದ್ರಯ್ಯ ಉಪಸ್ಥಿತರಿದ್ದರು.