ಮಡಿವಾಳ ಮಾಚಿದೇವರ ಕೊಡುಗೆ ಅನನ್ಯ
Team Udayavani, Feb 3, 2019, 9:25 AM IST
ಹೊಳಲ್ಕೆರೆ: ಮಡಿವಾಳ ಮಾಚಿದೇವರು 12ನೇ ಶತಮಾನದ ಪ್ರಮುಖ ಬಸವಾದಿ ಶರಣರಾಗಿದ್ದಾರೆ. ಅನುಭವ ಮಂಟಪದ ಮೂಲಕ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್ ಚೇತನ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.
ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. 12ನೇ ಶತಮಾನದಲ್ಲಿದ್ದ ಜಾತಿವಾದಿಗಳ ಸಿದ್ದಾಂತಕ್ಕೆ ಕೊನೆ ಹಾಡುವ ನಿಟ್ಟಿನಲ್ಲಿ ಹಲವಾರು ಶರಣರು ಅನುಭವ ಮಂಟಪದ ಮೂಲಕ ಶ್ರಮಿಸಿದ್ದಾರೆ. ಮನುಕುಲಕ್ಕೆ ಮಾನವೀಯ ಸಂದೇಶಗಳನ್ನು ನೀಡಿದ್ದಾರೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸವಿತಾ ಬಸವರಾಜ್, ಶರಣರು ಸಮಾಜದಲ್ಲಿ ಭಾವೈಕ್ಯತೆಯನ್ನು ಸೃಷ್ಟಿಸುವ ನಿಟ್ಟಿನಲ್ಲಿ ವಿಶೇಷ ಸಂಧೇಶ ನೀಡಿದ್ದಾರೆ. ಜಾತಿ ಧರ್ಮ ಎನ್ನುವ ಕಲ್ಪನೆ ಇಲ್ಲದೆ ಎಲ್ಲವನ್ನು ಸಮಾನತೆಯಿಂದ ಕಂಡಿದ್ದಾರೆ. ಅವರುಗಳು ಅನುಭವ ಮಂಟಪದ ಮೂಲಕ ಸಾಮಾಜಿಕ ಬದಲಾವಣೆಗೆ ಶ್ರಮಿಸಿದ್ದಾರೆ. 12ನೇ ಶತಮಾನದಲ್ಲಿರುವ ಮಹಾನ್ ದಾರ್ಶನಿಕ ಶರಣರಲ್ಲಿ ಮಡಿವಾಳ ಮಾಚಿದೇವರೂ ಒಬ್ಬರು. ಸಮಾಜದ ಕಲ್ಯಾಣಕ್ಕೆ ಹಲವಾರು ವಚನಗಳ ಮೂಲಕ ಸಂದೇಶಗಳನ್ನು ಬಿತ್ತರಿಸುವ ಮೂಲಕ ಮಾನವ ಕುಲವೊಂದೇ ಎನ್ನುವ ಸಂದೇಶ ಸಾರಿದ್ದಾರೆ ಎಂದು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕೆ. ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಜಗದೀಶ್, ಮಡಿವಾಳ ಸಮಾಜದ ಮುಖಂಡ ತಿಪ್ಪೇಸ್ವಾಮಿ, ಪಪಂ ಮಾಜಿ ಸದಸ್ಯ ಗುರುಸ್ವಾಮಿ, ಎಚ್. ಬಸವರಾಜ್, ಸಿದ್ದಪ್ಪ, ಮಂಜುನಾಥ, ಶಿವಕುಮಾರ್, ಶಿಕ್ಷಕ ವೀರೇಶ್, ರಾಜ್ಯ ಮಡಿವಾಳ ಸಂಘದ ಯುವ ಘಟಕದ ಅಧ್ಯಕ್ಷ ಧ್ರುವಕುಮಾರ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ