ಗಿಡ-ಮರಗಳಿಲ್ಲದ ನಾಡು ನರಕಸದೃಶ: ಮುರುಘಾ ಶರಣರು


Team Udayavani, Feb 7, 2019, 11:16 AM IST

cta-1.jpg

ಚಿತ್ರದುರ್ಗ: ಮರಗಳಿಗೆ ಮಾನವ ಬೇಕಿಲ್ಲ, ಆದರೆ ಮರಗಳು ಮನುಷ್ಯರಿಗೆ ವರವಾಗಿವೆ. ಮರವಿಲ್ಲದ ನಾಡು ನರಕ ಸದೃಶವಾದುದು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಇಲ್ಲಿನ ಮುರುಘಾ ಮಠದ ಬಸವ ಕೇಂದ್ರ ಹಾಗೂ ಎಸ್‌ಜೆಎಂ ಆಂಗ್ಲ ಮಾಧ್ಯಮ ಶಾಲೆ ಸಹಯೋಗದಲ್ಲಿ ನಡೆದ ‘ಶರಣಸಂಗಮ’ ಕಾರ್ಯಕ್ರಮದಲ್ಲಿ ‘ಪೆರಿಯಾರ್‌ ಚಿಂತನೆ’ ಕೃತಿ ಲೋಕಾರ್ಪಣೆ ಮಾಡಿ ‘ಜಾಗತಿಕ ತಾಪಮಾನ ಮತ್ತು ಜನಜೀವನ’ ವಿಷಯದ ಕುರಿತು ಶರಣರು ಮಾತನಾಡಿದರು.

ಜಗತ್ತು ಹೆಚ್ಚಿನ ಉಷ್ಣತೆಗೆ ಒಳಗಾಗಿ ಅಪಾಯದ ಕಡೆಗೆ ವಾಲುತ್ತಿದೆ. ಪ್ರಕೃತಿಮಾತೆ ನಮ್ಮನ್ನು ರಕ್ಷಿಸುತ್ತಾಳೆ. ಪ್ರಕೃತಿ ಎಂದರೆ ಪಂಚಭೂತಗಳು. ಮಾನವ ಭೂಮಿಯನ್ನು ಹಾಳು ಮಾಡುತ್ತಿದ್ದಾನೆ. ಅಂತರ್ಜಲಕ್ಕೆ ಕೈಹಾಕುತ್ತಿದ್ದಾನೆ. ಮಕ್ಕಳ ಸಂತಾನದ ಜೊತೆಗೆ ವೃಕ್ಷ ಸಂತಾನವೂ ಬೇಕು. ಗಿಡ ಮರಗಳು ಇಲ್ಲದೇ ಹೋದರೆ ಮಾನವ ತುಂಬ ಕಷ್ಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಅಭಿವೃದ್ಧಿ ಹೆಸರಿನಲ್ಲಿ ನಗರಗಳ ವಿಸ್ತರಣೆ ಆಗುತ್ತಿದೆ. ಇದರಿಂದಾಗಿ ಅರಣ್ಯ ಸಂಪತ್ತು ಅತ್ಯಲ್ಪವಾಗಿದೆ. ವಾತಾವರಣದಲ್ಲಿ ಅತಿಯಾದ ಕಾರ್ಬನ್‌ ಡೈಯಾಕ್ಸೈಡ್‌ನಿಂದಾಗಿ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದೆ. ಇದು ಅಪಾಯಕಾರಿ ಲಕ್ಷಣ. ಆದ್ದರಿಂದ ಪ್ರಕೃತಿ ಪ್ರೀತಿ ಬೆಳೆಸಿಕೊಳ್ಳಬೇಕಿದೆ. ನಮಗೆ ಜಲ ಹಾಗೂ ವನಸಂಪತ್ತು ಬೇಕು. ಹೊರ ರಾಷ್ಟ್ರಗಳು ಪ್ರಕೃತಿ ಬಗ್ಗೆ ವಿಶೇಷ ಕಾಳಜಿ ತೋರಿಸುತ್ತಿವೆ. ಹಾಗೆಯೇ ಸ್ವಚ್ಛತೆ ಮತ್ತು ಪರಿಸರವನ್ನು ಕಾಪಾಡುವ ಜವಾಬ್ದಾರಿ ಎಲ್ಲರದಾಗಿದೆ ಎಂದು ತಿಳಿಸಿದರು.

ಪೆರಿಯಾರ್‌ ಪ್ರಕಾರ ಮೊದಲು ಮಾನವ, ಆನಂತರ ದೇವರು. ಮಾನವ ದೇವರನ್ನು ಸೃಷ್ಟಿ ಮಾಡಿದ ಎಂದು ಹೇಳಿದ್ದಾರೆ. ಬಸವಣ್ಣನವರು ಕೂಡ ದೇವರಿಗಿಂತ ಕಾಯಕವೇ ಮುಖ್ಯ ಎಂದು ಪ್ರತಿಪಾದಿಸಿದ್ದರು ಎಂದರು.

ವಿಷಯಾವಲೋಕನ ಮಾಡಿದ ನಿವೃತ್ತ ಪ್ರಾಂಶುಪಾಲ ಪ್ರೊ| ಎಚ್. ಲಿಂಗಪ್ಪ, ಭೂಮಿಯ ಮೇಲಿರುವ ಸಂಪತ್ತನ್ನು ಬಳಕೆ ಮಾಡಿಕೊಳ್ಳುವವನು ಮಾನವ. ಆದರೆ ಅದರ ಉಪಯೋಗ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದೆ. ಬರಡಾಗಿರುವ ಭೂಮಿಯನ್ನು ಫಲವತ್ತುಗೊಳಿಸಬೇಕಿದೆ. ಇಂದು ಪ್ರಾಣಿಗಳು ಅಳಿವಿನಂಚಿಗೆ ಸರಿಯುತ್ತಿವೆ. ವಾಯುಮಾಲಿನ್ಯ, ಜಲಮಾಲಿನ್ಯವಾಗುತ್ತಿದೆ. ಅತಿಯಾದ ವಾಹನಗಳಿಂದಾಗಿ ಹೊಗೆ ಪ್ರಮಾಣ ಜಾಸ್ತಿಯಾಗಿ ಜನರ ಮೇಲೆ, ವಾತಾವರಣದ ಮೇಲೆ ಪ್ರಭಾವ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ನಮ್ಮಲ್ಲಿ ಅರಣ್ಯ ಪ್ರಮಾಣ ಕಡಿಮೆಯಾಗುತ್ತಿದ್ದು, ಪರಿಸರವನ್ನು ನಾಶ ಮಾಡುವ ಜೀವಿ ಎಂದರೆ ಮಾನವ. ದುರಾಸೆಯಿಂದ ಬುದ್ಧ, ಬಸವ, ಅಂಬೇಡ್ಕರ್‌ ಮೊದಲಾದವರು ಬಹಳ ದೂರ ಇದ್ದರು. ಕಳೆದ ಮೂರ್‍ನಾಲ್ಕು ದಶಕಗಳಿಂದ ಭೂಮಿಯ ತಾಪಮಾನ ಜಾಸ್ತಿಯಾಗುತ್ತಿದೆ. ಔಷಧೋಪಕರಣಗಳು, ಕೈಗಾರಿಕೀಕರಣ, ತ್ಯಾಜ್ಯ ವಸ್ತು ಮೊದಲಾದವು ತಾಪಮಾನ ಬದಲಾವಣೆಗೆ ಮುಖ್ಯ ಕಾರಣ. ಪೆರಿಯಾರ್‌ ಬ್ರಾಹ್ಮಣತ್ವವನ್ನು ವಿರೋಧಿಸಿದರು. ಕೊನೆಯವರೆಗೂ ಬಡವರ ಅಭ್ಯುದಯಕ್ಕಾಗಿ ಶ್ರಮಿಸಿದರು. ಪೆರಿಯಾರ್‌ಗೆ ಪೆರಿಯಾರ್‌ ಅವರೇ ಸರಿಸಾಟಿ ಎಂದು ಬಣ್ಣಿಸಿದರು.ಎಸ್‌ಜೆಎಂ ವಿದ್ಯಾಪೀಠದ ಕಾರ್ಯನಿರ್ವಹಣಾ ನಿರ್ದೇಶಕ ಡಾ| ಜಿ.ಎನ್‌. ಮಲ್ಲಿಕಾರ್ಜುನಪ್ಪ, ಎಸ್‌ಜೆಎಂ ಆಂಗ್ಲಮಾಧ್ಯಮ ಶಾಲೆ ಮುಖ್ಯಾಧ್ಯಾಪಕಿ ಪರಂಜ್ಯೋತಿ, ಪ್ರೊ| ಶಿವಲಿಂಗಪ್ಪ, ಡಾ| ಮಂಜಣ್ಣ, ಪ್ರೊ| ಪರಮೇಶ್ವರಪ್ಪ ಇದ್ದರು. ಬಿ. ನಿರ್ಮಲಾ ಪ್ರಾರ್ಥಿಸಿದರು. ಸೃಜನ ಸ್ವಾಗತಿಸಿದರು. ನವ್ಯ ನಿರೂಪಿಸಿದರು. ಪ್ರೀತಿ ವಂದಿಸಿದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.