17 ತಿಂಗಳಿನಿಂದ ನಡೆದಿತ್ತು ಹಾವು ಏಣಿ ಆಟ


Team Udayavani, Feb 8, 2019, 11:39 AM IST

cta-1.jpg

ಚಿತ್ರದುರ್ಗ: ಒಂದು ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ನಡೆಯುತ್ತಿದ್ದ ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ಪದಚ್ಯುತಿ ಪ್ರಯತ್ನದಲ್ಲಿ ಅವರ ವಿರೋಧಿ ಬಣಕ್ಕೆ ಕೊನೆಗೂ ನಗು ಬೀರಿದೆ. ಈ ಮೂಲಕ ಹಾವು ಏಣಿ ಆಟಕ್ಕೆ ತೆರೆ ಬಿದ್ದಿದೆ.

ಜಿಪಂ ಉಪಾಧ್ಯಕ್ಷೆ ಸುಶೀಲಮ್ಮ ಅಧ್ಯಕ್ಷತೆಯಲ್ಲಿ ಜಿಪಂ ಸಭಾಂಗಣದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಸೌಭಾಗ್ಯ ಬಸವರಾಜನ್‌ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯದ ಪರವಾಗಿ 25 ಸದಸ್ಯರು ಕೈ ಎತ್ತುವ ಮೂಲಕ ಬೆಂಬಲಿಸಿದ್ದರಿಂದ ಅವಿಶ್ವಾಸ ನಿರ್ಣಯಕ್ಕೆ ಗೆಲುವು ದೊರೆಯಿತು.

ಬಿಜೆಪಿಯ ಎಂಟು, ಇಬ್ಬರು ಪಕ್ಷೇತರರು ಮತ್ತು ಕಾಂಗ್ರೆಸ್‌ ಪಕ್ಷದ ಏಳು ಸದಸ್ಯರು ಹಾಗೂ ಸೌಭಾಗ್ಯ ಬಸವರಾಜನ್‌ ಸೇರಿದಂತೆ ಒಟ್ಟು 18 ಜನ ಸದಸ್ಯರು ಅವಿಶ್ವಾಸ ನಿರ್ಣಯದ ವಿರುದ್ಧ ಇದ್ದರು. ಆದರೆ ಬುಧವಾರ ರಾತ್ರಿ ಕೆಲವರು ರಾಮನಗರ ರೆಸಾರ್ಟ್‌ಗೆ ನುಗ್ಗಿ ಅಲ್ಲಿದ್ದ ಪಕ್ಷೇತರ ಸದಸ್ಯೆಯನ್ನು ಅಪಹರಣ ಮಾಡಿ ಹೈಡ್ರಾಮಾ ಸೃಷ್ಟಿಸಿದ್ದರಿಂದ ಸೌಭಾಗ್ಯ ಪರ ಇದ್ದವರು ವಿಶೇಷ ಸಾಮಾನ್ಯ ಸಭೆಯಿಂದ ದೂರ ಉಳಿದರು. ಸೌಭಾಗ್ಯ ಹಾಗೂ ಬಿಜೆಪಿ ಸದಸ್ಯ ಅಜ್ಜಪ್ಪ ಅವರಿಬ್ಬರೇ ಆಗಮಿಸಿ ಸೋಲು ಸ್ವೀಕರಿಸಿದರು.

17 ತಿಂಗಳ ಹಿಂದಿನಿಂದಲೇ ಪದಚ್ಯುತಿಗೆ ಯತ್ನ: ವಿಧಾನಸಭಾ ಚುನಾವಣೆಗೂ ಮುನ್ನ ಜಿಪಂ ಅಧ್ಯಕ್ಷೆ ಪದಚ್ಯುತಿ ಪ್ರಕ್ರಿಯೆ ಆರಂಭಗೊಂಡಿತ್ತು. 17 ತಿಂಗಳ ನಂತರ ಅವಿಶ್ವಾಸ ತಂದು ಗೆಲುವು ಸಾಧಿಸುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ. ಆದರೆ ಅವಿಶ್ವಾಸ ನಿರ್ಣಯ ಮಂಡಿಸಿ ಗೆಲ್ಲಲು ಸಾಕಷ್ಟು ಪ್ರಯಾಸ ಪಡಬೇಕಾಯಿತು.

ಕಳೆದ ಜ.25 ರಂದು ಅವಿಶ್ವಾಸ ನಿರ್ಣಯದ ಪರ ಇದ್ದ ಸದಸ್ಯರು ಗೋವಾಕ್ಕೆ ಪ್ರವಾಸ ತೆರಳಿದ್ದರು. ಬಿಜೆಪಿಯ ಒಟ್ಟು ಹತ್ತು ಸದಸ್ಯರಲ್ಲಿ ಜಿ.ಆರ್‌. ಹಳ್ಳಿ ಕ್ಷೇತ್ರದ ಕೆ.ಟಿ. ಗುರುಮೂರ್ತಿ ಹಾಗೂ ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿ ಕ್ಷೇತ್ರದ ಎಚ್.ಆರ್‌. ಗೌರಮ್ಮ ಅವರು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರಿಗೆ ಆಪ್ತರು. ಆದರೆ ಅವಿಶ್ವಾಸದ ಪರವಾಗಿ ಕೈ ಎತ್ತಿದ್ದಾರೆ. ಜೆಡಿಎಸ್‌ನ ಇಬ್ಬರು ಸದಸ್ಯರು ಕೂಡ ಅವಿಶ್ವಾಸ ನಿರ್ಣಯವನ್ನು ಬೆಂಬಲಿಸಿದರು.

ಕೈ ಕೊಟ್ಟ ಜೆಡಿಎಸ್‌ ಸದಸ್ಯರು: ಜೆಡಿಎಸ್‌ನ ಇಬ್ಬರು ಸದಸ್ಯರು, ಸೌಭಾಗ್ಯ ಬಸವರಾಜನ್‌ ನಮ್ಮ ಮುಂದೆ 11 ಸದಸ್ಯರನ್ನು ಪರೇಡ್‌ ಮಾಡಿಸಿದರೆ ನಾವು ಅವರ ಪರವಾಗಿ ನಿಲ್ಲುವುದಾಗಿ ಹೇಳಿದ್ದರು. ಈ ಮಾತನ್ನು ನಂಬಿದ ಸೌಭಾಗ್ಯ 11 ಸದಸ್ಯರನ್ನು ಪರೇಡ್‌ ಮಾಡಿಸಿದರೂ ಕೊನೆ ಕ್ಷಣದಲ್ಲಿ ಜೆಡಿಎಸ್‌ ಸದಸ್ಯರು ಕೈ ಕೊಟ್ಟಿದ್ದಾರೆ. ಈ ಮೂಲಕ ಜೆಡಿಎಸ್‌ ಜಿಲ್ಲಾಧ್ಯಕ್ಷರು ಹಾಗೂ ಮುಖಂಡರ ಸೂಚನೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎನ್ನಲಾಗಿದೆ. ಸೌಭಾಗ್ಯ ಬಸವರಾಜನ್‌, ಜೆಡಿಎಸ್‌ ಸದಸ್ಯರಾದ ಮುತ್ತುರಾಜ್‌, ತ್ರಿವೇಣಿ ಒಂದೇ ಸಮುದಾಯಕ್ಕೆ ಸೇರಿದ್ದರಿಂದ ಸೌಭಾಗ್ಯ ಪರ ನಿಲ್ಲಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.

ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.