ಮಠಗಳು ಜಾತಿ ಬೇರು ಸಡಿಲಗೊಳಿಸಲಿ


Team Udayavani, Feb 11, 2019, 9:42 AM IST

cta-2.jpg

ಹೊಸದುರ್ಗ: ಜಾತಿ ವ್ಯವಸ್ಥೆಯಿಂದ ಸಾಮಾಜಿಕ ಆರ್ಥಿಕ ಅಸಮಾನತೆ ಉಂಟಾಗುತ್ತಿದೆ. ನಾಡಿನಲ್ಲಿ ಎಲ್ಲಾ ವರ್ಗದ ಜನರಿಗೂ ಸಮಾನ ಅವಕಾಶಗಳು ಸಿಗಬೇಕು. ಆದರೆ ದೇಶದ ಸಂಪತ್ತು ಕೆಲವರ ಬಳಿ ಕೇಂದ್ರೀಕೃತವಾಗಿದ್ದು, ಸಂಪತ್ತಿನ ಸಮ ಹಂಚಿಕೆ ಆದಾಗ ಮಾತ್ರ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತಾಲೂಕಿನ ಬ್ರಹ್ಮವಿದ್ಯಾನಗರದ ಭಗೀರಥ ಪೀಠದಲ್ಲಿ ಭಾನುವಾರ ನಡೆದ ಅಖೀಲ ಭಾರತ ಭಗೀರಥ ಜಯಂತ್ಯುತ್ಸವ ಹಾಗೂ ಡಾ| ಪುರುಷೋತ್ತಮಾನಂದಪುರಿ ಸ್ವಾಮೀಜಿಯವರ ಪಟ್ಟಾಭಿಷೇಕದ 19ನೇ ವಾರ್ಷಿಕ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇವಲ ಮತದಾನ ಮಾಡುವುದಷ್ಟೇ ಸ್ವಾತಂತ್ರ್ಯವಲ್ಲ. ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯದ ಜತೆಗೆ ಪ್ರತಿಯೊಬ್ಬರಿಗೂ ಸಮಾನತೆ ದೊರಕಿದಾಗ ಮಾತ್ರ ಸಂವಿಧಾನದ ಆಶಯ ಈಡೇರುತ್ತದೆ ಎಂದರು.

ಸಾಧು-ಸಂತರ ನಾಡಾಗಿರುವ ರಾಜ್ಯದಲ್ಲಿ ಬಸವಾದಿ ಶರಣರು ವರ್ಗರಹಿತ ಸಮಾಜ ನಿರ್ಮಾಣ ಮಾಡಲು ಸಾಮಾಜಿಕ ಕ್ರಾಂತಿ ಮಾಡಿದ್ದರು. ಆದರೆ ಸಮಾಜದಲ್ಲಿ ಜಾತಿ ರಹಿತ ವ್ಯವಸ್ಥೆ ಇನ್ನೂ ಮುಂದುವರೆದಿರುವುದು ವಿಷಾದನೀಯ. ಜಾತಿ ವ್ಯವಸ್ಥೆಯ ಬೇರುಗಳನ್ನು ಸಡಿಲಗೊಳಿಸಲು ಮಠಗಳು ಮುಂದಾಗಬೇಕು ಎಂದು ತಿಳಿಸಿದರು.

ಚಾಮರಾಜನಗರ ಕ್ಷೇತ್ರದಲ್ಲಿ ಉಪ್ಪಾರ ಸಮುದಾಯದವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿತ್ತು. ಪ್ರಯತ್ನ ಮಾಡದೆ ಗೆಲ್ಲಲು ಹೇಗೆ ಸಾಧ್ಯವಾಗುತ್ತದೆಂದು ಹೇಳಿ ಪುಟ್ಟರಂಗ ಶೆಟ್ಟಿಗೆ ಟಿಕೆಟ್ ಕೊಟ್ಟಿದ್ದೆ. ಮೂರು ಬಾರಿ ಗೆಲ್ಲುವ ಮೂಲಕ ಅವರು ಹ್ಯಾಟ್ರಿಕ್‌ ಹೀರೋ ಆಗಿದ್ದಾರೆ ಎಂದರು.

ಉಪ್ಪಾರರಿಗೆ ಕಾಂಗ್ರೆಸ್‌ ಬಿಟ್ಟರೆ ಬೇರೆ ಯಾವ ಪಕ್ಷವೂ ರಾಜಕೀಯ ಪ್ರಾತಿನಿಧ್ಯ ನೀಡಿಲ್ಲ. ಸ್ವತಂತ್ರ ಭಾರತದಲ್ಲಿಯೇ ಉಪ್ಪಾರ ಸಮುದಾಯಕ್ಕೆ ಸೇರಿದವರ್ಯಾರೂ ಮಂತ್ರಿಯಾಗಿರಲಿಲ್ಲ. ನಾನು ಹಠಕ್ಕೆ ಬಿದ್ದು ಉಪ್ಪಾರ ಸಮುದಾಯಕ್ಕೆ ಸೇರಿದ ಪುಟ್ಟರಂಗ ಶೆಟ್ಟಿಯನ್ನು ಸಚಿವನನ್ನಾಗಿ ಮಾಡಿದ್ದೇನೆ. ಆದರೆ ಮಂತ್ರಿಯಾಗಿ ಕೇವಲ ಏಳೇ ತಿಂಗಳಿಗೆ ಅವರ ಕಾಲೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಆರೂವರೆ ಕೋಟಿ ಜನರ ಸರ್ಕಾರ ಇದು. ಇದರಲ್ಲಿ ನಿಮಗೆ ಬರಬೇಕಾದ ಪಾಲು ಕೂಡ ಇರುತ್ತದೆ. ಇದನ್ನು ನೀವು ಕೇಳಿ ಅಥವಾ ಸಮಯ ಬಂದಾಗ ಹೋರಾಟದ ಮೂಲಕವಾದರೂ ಪಡೆದುಕೊಳ್ಳಬೇಕು. ಆಯಾ ಕಾಲದಲ್ಲಿ ಅವರವರ ಮಠಕ್ಕೆ ಸಾಕಷ್ಟು ಅನುದಾನ ನೀಡಿದ್ದಾರೆ. ನಿಮ್ಮ ಉಪ್ಪಾರ ಮಠಕ್ಕೂ ಧೈರ್ಯವಾಗಿ ಬೇಕಾದಷ್ಟು ಹಣ ನೀಡು. ಯಾರಿಗೂ ಹೆದರುವ ಅವಶ್ಯಕತೆ ಇಲ್ಲ. ನಿನ್ನ ಜತೆ ನಾನಿರುತ್ತೇನೆ ಎಂದು ಸಚಿವ ಪುಟ್ಟರಂಗ ಶೆಟ್ಟಿಯನ್ನುದ್ದೇಶಿಸಿ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಪುಟ್ಟರಂಗ ಶೆಟ್ಟಿ, ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ, ಸಂಸದ ಬಿ.ಎನ್‌. ಚಂದ್ರಪ್ಪ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಆಂಜನೇಯ, ಕಾಡಾ ಮಾಜಿ ಅಧ್ಯಕ್ಷ ವಿಜಯಪುರದ ಜೆಕ್ಕಪ್ಪ ಯಡವಿ, ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್‌. ಮೂರ್ತಿ, ತಾಲೂಕು ಅಧ್ಯಕ್ಷ ಮಂಜುನಾಥ್‌, ಆಡಿಟರ್‌ ಮಲ್ಲೇಶಪ್ಪ, ಜಿಪಂ ಸದಸ್ಯರಾದ ಅನಂತ್‌, ವಿಶಾಲಾಕ್ಷಿ , ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮೊದಲಾದವರು ಪಾಲ್ಗೊಂಡಿದ್ದರು.

ಉಪ್ಪಾರ ಸಮಾಜ ಅಭ್ಯುದಯಕ್ಕೆ ಬದ್ಧ
ಉಪ್ಪಾರ ಸಮುದಾಯನ್ನು ಎಸ್‌ಟಿಗೆ ಸೇರಿಸಲು ನನ್ನದೇನೂ ತಕರಾರಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರದೊಂದಿಗೆ ಚರ್ಚಿಸುತ್ತೇನೆ. ಸಮುದಾಯಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಕೊಡಿಸಲು ನಾನು ಬದ್ಧ. ನಾನು ಮುಖ್ಯಮಂತ್ರಿಯಾಗಿದ್ದಾಗ ಉಪ್ಪಾರ ಅಭಿವೃದ್ಧಿ ನಿಗಮ, ಭಗೀರಥ ಜಯಂತಿ, ಬಿಸಿಎಂ ರಿಸರ್ವೇಷನ್‌ ಹಾಗೂ ಮುಖಂಡರಿಗೆ ವಿವಿಧ ಸ್ಥಾನಮಾನಗಳನ್ನು ನೀಡುವ ಮೂಲಕ ಸಮುದಾಯವನ್ನು ಮೇಲೆತ್ತುವ ಕೆಲಸ ಮಾಡಿದ್ದೇನೆ. ಆದ್ದರಿಂದ ನಿಮ್ಮ ಕಷ್ಟಗಳಿಗೆ ಸ್ಪಂದಿಸುವ ವ್ಯಕ್ತಿಗೆ ಬೆಂಬಲ ನೀಡಬೇಕು ಎಂದು ಸಿದ್ದರಾಮಯ್ಯ ಕೋರಿದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.