31 ಗ್ರಾಮಗಳಿಗೆ ಶುಕ್ರ ದೆಸೆ!


Team Udayavani, Feb 12, 2019, 10:07 AM IST

cta-4.jpg

ಚಿತ್ರದುರ್ಗ: ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಜಿಲ್ಲೆಯ ಒಟ್ಟು 31 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಪ್ರತಿ ಗ್ರಾಮದ ಅಭಿವೃದ್ಧಿಗೆ ತಲಾ ಒಂದು ಕೋಟಿ ರೂ. ಅನುದಾನ ದೊರೆಯಲಿದೆ.

ಈ ಯೋಜನೆಗೆ ಜಿಲ್ಲೆಯ ಆರು ತಾಲೂಕುಗಳಿಂದ ತಲಾ ಐದರಂತೆ ಮತ್ತು ಜಿಲ್ಲಾ ಕೇಂದ್ರವಾಗಿರುವ ಚಿತ್ರದುರ್ಗ ತಾಲೂಕಿನಲ್ಲಿ ಹೆಚ್ಚುವರಿಯಾಗಿ ಒಂದು ಗ್ರಾಮವನ್ನು ಆಯ್ಕೆ ಮಾಡಲಾಗಿದೆ. ಒಟ್ಟಾರೆ 31 ಗ್ರಾಮಗಳನ್ನು ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಗೆ ಆಯ್ಕೆ ಮಾಡಿ 31 ಕೋಟಿ ರೂ.ಗಳನ್ನು ನಿಗದಿ ಮಾಡಲಾಗಿದೆ. ಆ ಪೈಕಿ 12.06 ಕೋಟಿ ರೂ.ಗಳನ್ನು ಕಳೆದ ಜನವರಿ 19 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಬಿಡುಗಡೆ ಮಾಡಿ ಸಮಗ್ರವಾಗಿ ಅಭಿವೃದ್ಧಿಪಡಿಸುವಂತೆ ಸಿಇಒಗೆ ಸೂಚನೆ ನೀಡಲಾಗಿದೆ.

ಈ ಯೋಜನೆ ಅಡಿ ಗ್ರಾಮಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸುವರ್ಣ ಗ್ರಾಮ ಯೋಜನೆ ರೀತಿಯಲ್ಲಿಯೇ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯನ್ನೂ ಅನುಷ್ಠಾನ ಮಾಡಲಾಗುತ್ತಿದೆ. ಈ ಯೋಜನೆಯಡಿ ಒಂದು ಗ್ರಾಮಕ್ಕೆ ಒಂದು ಕೋಟಿ ರೂ. ಅನುದಾನ ನೀಡುವ ಜತೆಗೆ ನರೇಗಾ ಮೂಲಕವೂ ಹೆಚ್ಚುವರಿ ಕಾಮಗಾರಿ ಕೈಗೊಳ್ಳಲು ಅವಕಾಶ ನೀಡಲಾಗಿದೆ. ಗ್ರಾಮ ಪಂಚಾಯತ್‌ಗಳ ಮೂಲಕ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ.

ಯಾವ್ಯಾವ ಗ್ರಾಮಗಳು?: ಜಿಲ್ಲೆಯ ಆರು ತಾಲೂಕುಗಳಿಂದ ಒಟ್ಟು 31 ಗ್ರಾಮಗಳನ್ನು ಆಯಾ ಕ್ಷೇತ್ರದ ಶಾಸಕರ ಮೂಲಕ ಆಯ್ಕೆ ಮಾಡಲಾಗಿದೆ. ಅದರಂತೆ ಚಿತ್ರದುರ್ಗ ತಾಲೂಕಿನ ಗೂಳಯ್ಯನಹಟ್ಟಿ, ಮಠದ ಕುರುಬರಹಟ್ಟಿ, ಗೊಲ್ಲನಹಟ್ಟಿ, ಹಣಸೆಕಟ್ಟೆ ಗೊಲ್ಲರಹಟ್ಟಿ, ಗುತ್ತಿನಾಡು, ಆಲಘಟ್ಟ ಗ್ರಾಮಗಳಿಗೆ ತಲಾ ಒಂದು ಕೋಟಿ ರೂ.ಗಳಂತೆ ನಿಗದಿಪಡಿಸಲಾಗಿದೆ.

ಚಳ್ಳಕೆರೆ ತಾಲೂಕಿನ ಹರವಿಗೊಂಡನಹಳ್ಳಿ, ನಾಗಗೊಂಡನಹಳ್ಳಿ, ರಾಮಜೋಗಿಹಳ್ಳಿ, ಚಿಕ್ಕಗೊಂಡನಹಳ್ಳಿ, ಜೋಗಿಹಳ್ಳಿ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಳಿಕಟ್ಟೆ, ಅಂದನೂರು, ರಾಮಗಿರಿ, ಚಿಕ್ಕಂದವಾಡಿ, ಯಳಗೋಡು, ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆ.ಜಿ. ಹಳ್ಳಿ, ಆಲೂರು, ಆದಿವಾಲ, ಕೋವೇರಹಟ್ಟಿ, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸಗುಡ್ಡ (ರಾಮದುರ್ಗ), ಬೋಗನಹಳ್ಳಿ, ಕುಬೇರ ನಗರ(ಕೆರೆ ಕೊಂಡಾಪುರ), ವೆಂಕಟಾಪುರ, ವರವು, ಹೊಸದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲ್ಲೋಡು, ಅರಳೀಕಟ್ಟೆ, ಮಾಡದಕೆರೆ, ಗರಗ, ಬೆಲಗೂರು, ಶ್ರೀರಾಂಪುರ ಗ್ರಾಮಗಳಿಗೆ ಅಭಿವೃದ್ಧಿ ಭಾಗ್ಯ ಒಲಿದು ಬಂದಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರು ಹೆಚ್ಚಾಗಿ ವಾಸಿಸುವ ಗ್ರಾಮಗಳ ಆಯ್ಕೆಗೆ ಒತ್ತು ನೀಡಲಾಗಿದೆ. ಇದುವರೆಗೆ ಸರ್ಕಾರದ ಯಾವುದೇ ಯೋಜನೆಗೆ ಆಯ್ಕೆಯಾಗಿರದ ಗ್ರಾಮವನ್ನು ಮಾತ್ರ ಮುಖ್ಯಮಂತ್ರಿ ವಿಕಾಸ ಯೋಜನೆಗೆ ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಪಂ ಸಿಇಒ ಅರ್ಹ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ ಶಾಸಕರ ಒಪ್ಪಿಗೆ ಪಡೆದ ನಂತರವೇ ಅರ್ಹ ಗ್ರಾಮಗಳ ಆಯ್ಕೆ ಮಾಡಲಾಗಿದೆ. ರಸ್ತೆ, ಚರಂಡಿ ಮತ್ತಿತರ ಕಾಮಗಾರಿ ಕೈಗೊಂಡು ಅಭಿವೃದ್ಧಿ ಮಾಡುವಂತೆ ತಿಳಿಸಲಾಗಿದೆ.

ಸತತ ಬರಕ್ಕೆ ತುತ್ತಾಗುತ್ತಲೇ ಇರುವ ಜಿಲ್ಲೆಯ ಮೇಲೆ ರಾಜ್ಯ ಸರ್ಕಾರ ಕೃಪೆ ತೋರಿದೆ. ಬರದ ಬವಣೆಯಿಂದ ಬಳಲಿ ಬೆಂಡಾದವರ ಬದುಕು ಈ ಮೂಲಕವಾದರೂ ಸುಧಾರಣೆಯಾಗಲಿ ಎಂಬುದು ಜಿಲ್ಲೆಯ ಜನರ ಅಪೇಕ್ಷೆ.

ಜಿಲ್ಲೆಯ ಆರು ತಾಲೂಕುಗಳಿಂದ ಒಟ್ಟು 31 ಗ್ರಾಮಗಳನ್ನು ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಗೆ ಆಯ್ಕೆ ಮಾಡಲಾಗಿದೆ. ಪ್ರತಿ ಗ್ರಾಮಕ್ಕೆ ತಲಾ ಒಂದು ಕೋಟಿ ರೂ. ಅನುದಾನ ಸಿಗಲಿದೆ. ಶೀಘ್ರದಲ್ಲೇ ಆ ಗ್ರಾಮಗಳಲ್ಲಿ ಕಾಮಗಾರಿ ಆರಂಭಿಸಲಾಗುತ್ತದೆ.
•ಪಿ.ಎನ್‌. ರವೀಂದ್ರ, ಜಿಪಂ ಸಿಇಒ.

ಈಗಾಗಲೇ ಆಯ್ಕೆಯಾಗಿರುವ 31 ಗ್ರಾಮಗಳ ಪೈಕಿ ಕೆಲವು ಗ್ರಾಮಗಳಲ್ಲಿ ಎಸ್ಸಿಪಿ-ಟಿಎಸ್ಪಿ ಅನುದಾನ ಬಳಕೆಗೂ ಅವಕಾಶ ಕಲ್ಪಿಸಲಾಗಿದೆ. ಆ ಪೈಕಿ ಮಾಡದಕೆರೆ, ಗರಗ, ಹೊಸಗುಡ್ಡ, ಕುಬೇರನಗರ, ಆದಿವಾಲ, ಚಿಕ್ಕಂದವಾಡಿ, ರಾಮಗಿರಿ, ಗೂಳಯ್ಯನಹಟ್ಟಿ, ಮಠದ ಕುರುಬರಹಟ್ಟಿ, ಗುತ್ತಿನಾಡು, ಹುಣಸೇಕಟ್ಟೆ ಗೊಲ್ಲರಹಟ್ಟಿ ಗ್ರಾಮಗಳನ್ನು ಎಸ್ಸಿಪಿ, ಟಿಎಸ್ಪಿ ಯೋಜನೆ ಅಡಿ ಅಭಿವೃದ್ಧಿಪಡಿಸಲಾಗುತ್ತದೆ.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.