ಪಾಸ್‌ಪೋರ್ಟ್‌ ಸೇವಾ ಕೇಂದ್ರ ಲೋಕಾರ್ಪಣೆ


Team Udayavani, Feb 15, 2019, 9:24 AM IST

cta-1.jpg

ಚಿತ್ರದುರ್ಗ: ಪಾಸ್‌ಪೋರ್ಟ್‌ ಅನ್ನು ವಿದೇಶಕ್ಕೆ ಹೋಗಲು ಮಾತ್ರ ಬಳಕೆ ಮಾಡಲಾಗುತ್ತದೆ ಎನ್ನುವ ಭಾವನೆ ಬೇಡ. ಪಾಸ್‌ಪೋರ್ಟ್‌ ಹೊಂದಿದ್ದೇವೆ ಎಂದರೆ ಭಾರತೀಯ ಪ್ರಜೆ ಎನ್ನುವ ಹೆಗ್ಗುರುತು ದಕ್ಕಲಿದೆ ಎಂದು ಸಂಸದ ಬಿ.ಎನ್‌. ಚಂದ್ರಪ್ಪ ಹೇಳಿದರು.

ನಗರದ ಹೊಳಲ್ಕೆರೆ ರಸ್ತೆಯ ಪ್ರಧಾನ ಅಂಚೆ ಕಚೇರಿಯಲ್ಲಿ ಗುರುವಾರ ಅಂಚೆ ಕಚೇರಿ ಪಾಸ್‌ ಪೋರ್ಟ್‌ ಸೇವಾ ಕೇಂದ್ರದ ಉದ್ಘಾಟನೆ ನೆರವೇರಿಸಿ ಮತ್ತು ಪ್ರವಾಸೋದ್ಯಮ ಇಲಾಖೆಯ ವಿಶೇಷ ಅಂಚೆ ಲಕೋಟೆ ಬಿಡುಗಡೆ ಮಾಡಿ ಅವರು ಮಾತನಾಡಿದರು.

ವಿದೇಶಕ್ಕೆ ಹೋಗಲು ಪಾಸ್‌ಪೋರ್ಟ್‌ ಮಾಡಿಸಿಕೊಳ್ಳುತ್ತೇವೆ ಎನ್ನುವ ಭಾವನೆಯಿಂದ ಜನರು ಹೊರ ಬರಬೇಕು. ಅಗತ್ಯ ದಾಖಲೆಗಳಲ್ಲಿ ಪಾಸ್‌ಪೋರ್ಟ್‌ ಕೂಡ ಒಂದು ಎನ್ನುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು.
 
ಪಾಸ್‌ಪೋರ್ಟ್‌ ಸೇವಾ ಕೇಂದ್ರವನ್ನು ಜಿಲ್ಲೆಗೆ ತರುವ ಮೂಲಕ ಮತದಾರರ ಋಣ ತೀರಿಸುವ ಕೆಲಸ ಮಾಡಿದ್ದೇನೆ. ಜಿಲ್ಲೆಯ ಮತದಾರರ ಋಣ ನನ್ನ ಮೇಲಿದ್ದು, ಹಿಂದುಳಿದ ಜಿಲ್ಲೆಗೆ ಎಷ್ಟು ಸೇವೆ ಮಾಡಿದರೂ ಕಡಿಮೆಯೇ. ಜಿಲ್ಲೆಯ ಜನತೆ ಪಾಸ್‌ಪೋರ್ಟ್‌ಗಾಗಿ ಹುಬ್ಬಳ್ಳಿ, ಬೆಂಗಳೂರಿಗೆ
ಹೋಗಬೇಕಿತ್ತು. ಇದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಸಚಿವರ ಕಚೇರಿಗೆ ಸಾಕಷ್ಟು ಸಲ ಅಲೆದಾಡಿ ಮಂಜೂರು ಮಾಡಿಸಿದ್ದೇನೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಹಿಂದುಳಿದ ಜಿಲ್ಲೆ ಎನ್ನುವ ಹಣೆಪಟ್ಟಿಯನ್ನು ಹೋಗಲಾಡಿಸಬೇಕು. ಶೀಘ್ರದಲ್ಲೇ ಭದ್ರಾ ಮೇಲ್ದಂಡೆ ಯೋಜನೆಯಿಂದ ಹಿರಿಯೂರಿನ ವಿವಿ ಸಾಗರಕ್ಕೆ ನೀರು ಹರಿಯಲಿದೆ. ಅಲ್ಲದೆ ಜಿಲ್ಲೆಯ ಎಲ್ಲ ಕೆರೆಗಳಿಗೆ ನೀರು ಭರ್ತಿ ಮಾಡಿದರೆ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ದಕ್ಷಿಣ ಕರ್ನಾಟಕ ವಲಯ ಪೋಸ್ಟ್‌ಮಾಸ್ಟರ್‌ ಜನರಲ್‌ ಎಸ್‌. ರಾಜೇಂದ್ರಕುಮಾರ್‌ ಮಾತನಾಡಿ, ಸಂಸದ ಚಂದ್ರಪ್ಪ ಅವರ ಪರಿಶ್ರಮದಿಂದಾಗಿ ಪಾಸ್‌ ಪೋರ್ಟ್‌ ಸೇವಾ ಕೇಂದ್ರ ಆರಂಭವಾಗಿದೆ. ಇದರಿಂದ ಪಾಸ್‌ಪೋರ್ಟ್‌ಗಾಗಿ ಬೆಂಗಳೂರು, ಹುಬ್ಬಳ್ಳಿ ನಗರಗಳಿಗೆ ಅಲೆಯುವುದು ತಪ್ಪಿದೆ. ಸಮಯ, ಹಣ ಎರಡೂ ಉಳಿತಾಯವಾಗಿದೆ ಎಂದು ಹೇಳಿದರು.

ರೀಜನಲ್‌ ಪಾಸ್‌ಪೋರ್ಟ್‌ ಆಫಿಸರ್‌ ಭರತ್‌ ಕುಮಾರ್‌ ಕುತಟಿ ಮಾತನಾಡಿ, ಪಾಸ್‌ಪೋರ್ಟ್‌ ಸೇವಾ ಕೇಂದ್ರ ತರುವುದು ಅಷ್ಟು ಸುಲಭದ ಕೆಲಸವಲ್ಲ. ಇಲ್ಲಿಗೆ ಈ ಕೇಂದ್ರ ಬಂದಿದೆ ಎಂದರೆ ಅದಕ್ಕೆ ಸಂಸದ ಚಂದ್ರಪ್ಪ ಅವರೇ ಮುಖ್ಯ ಕಾರಣ ಎಂದು ಶ್ಲಾಘಿಸಿದರು. ಆನ್‌ಲೈನ್‌ ಮೂಲಕ ಪಾಸ್‌ಪೋರ್ಟಗಾಗಿ ಅರ್ಜಿ ಸಲ್ಲಿಸಿದ ಒಂದು ತಿಂಗಳಲ್ಲಿ ನಿಮ್ಮ ಮನೆಬಾಗಿಲಿಗೆ ಬರಲಿದೆ ಎಂದು ತಿಳಿಸಿದರು.

ಚಿತ್ರದುರ್ಗ ಕೋಟೆ, ಹಿರಿಯೂರು ವಾಣಿವಿಲಾಸ ಸಾಗರದ ಚಿತ್ರವನ್ನೊಳಗೊಂಡ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಅಪರ ಜಿಲ್ಲಾಧಿಕಾರಿ ಕೆ. ಸಂಗಪ್ಪ, ಡಿವೈಎಸ್ಪಿ ವಿಜಯ ಸಂಪತ್‌ಕುಮಾರ್‌, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಡಾ| ಎಸ್‌. ತಿಪ್ಪೇಸ್ವಾಮಿ, ಚಿತ್ರದುರ್ಗ ವಿಭಾಗದ ಅಂಚೆ ಅಧಿಕ್ಷಕ ಶಿವರಾಜ್‌ ಖೀಂಡಿಮ…, ಸಹಾಯಕ ಅಧೀಕ್ಷಕ ಆರ್‌.
ಗಂಗಪ್ಪ, ಮಾರ್ಕೆಟಿಂಗ್‌ ಎಕ್ಸಿಕ್ಯೂಟಿವ್‌ ಬಿ.ಇ. ವಿಜಯ ಕುಮಾರ್‌ ಭಾಗವಹಿಸಿದ್ದರು.

ಕಡತ ಹಿಡಿದುಕೊಂಡು ಅಲೆದಾಡಿರುವೆ ಪ್ರತಿ ಜಿಲ್ಲೆಗೆ ಒಂದು ಪಾಸ್‌ಪೋರ್ಟ್‌ ಸೇವಾ ಕೇಂದ್ರ ಮಂಜೂರು ಮಾಡಬೇಕೆಂಬ ನಿಯಮವಿದೆ. ಆದರೆ ಕೇಂದ್ರ ಸರ್ಕಾರದಲ್ಲಿ ಈ ನಿಯಮಗಳು ಕೆಲಸ ಮಾಡುವುದಿಲ್ಲ. ನಿತ್ಯ ಓಡಾಟ ಮಾಡಿದರೆ ವಿಳಂಬ ಆಗುತ್ತದೆ. ಕೇಳದೇ ಇದ್ದರೆ ಯಾವುದೇ ಕೆಲಸ ಆಗುವುದಿಲ್ಲ. ಎಡೆಬಿಡದೆ ಕಡತ ಹಿಡಿದುಕೊಂಡು ಕಚೇರಿಯಿಂದ ಕಚೇರಿ ಅಲೆದಿದ್ದರಿಂದ ಇಂದು ಪಾಸ್‌ಪೋರ್ಟ್‌ ಸೇವಾ ಕೇಂದ್ರ ಮಂಜೂರಾಗಿದೆ ಎಂದು ಸಂಸದ ಚಂದ್ರಪ್ಪ ತಿಳಿಸಿದರು.

 ಹಾಸನ, ಮೈಸೂರು, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಪಾಸ್‌ ಪೋರ್ಟ್‌ ಸೇವಾ ಕೇಂದ್ರ ಮಂಜೂರಾಗುವುದು ದೊಡ್ಡ ವಿಷಯವಲ್ಲ. ಏಕೆಂದರೆ ಆ ನಗರಗಳು ಬಹಷ್ಟು ಅಭಿವೃದ್ಧಿ ಹೊಂದಿ ದೊಡ್ಡದಾಗಿ ಬೆಳೆದಿವೆ. ಅಲ್ಲದೆ ಅಲ್ಲಿನ ನಾಯಕರು ಕೂಡ ದೊಡ್ಡವರು. ಹಾಗಾಗಿ ಅಲ್ಲಿಗೆ ಯೋಜನೆಗಳು ಸುಲಭವಾಗಿ ಬರುತ್ತವೆ. ಆದರೆ ಹಿಂದುಳಿದ ಜಿಲ್ಲೆಯನ್ನು ಯಾರೂ ಕೇಳುವವರಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.