ಕಾರ್ಯಕರ್ತರು ಪಕ್ಷದ ಬಲವರ್ಧನೆಗೆ ಶ್ರಮಿಸಿ
Team Udayavani, Mar 3, 2019, 12:19 PM IST
ಹೊಳಲ್ಕೆರೆ: ಪಟ್ಟಣದ ಗಣಪತಿ ಕಲ್ಯಾಣ ಮಂಟಪದ ಬಳಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಆಯೋಜಿಸಿದ್ದ ಕಮಲ ಸಂಕಲ್ಪ ಬೈಕ್ ರ್ಯಾಲಿಗೆ ಶನಿವಾರ ಶಾಸಕ ಎಂ.ಚಂದ್ರಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷವನ್ನು ಬಲಪಡಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತರು ಪ್ರಧಾನಿ ಮೊದಿ ನೇತೃತ್ವದ ಕೇಂದ್ರ ಸರಕಾರ ದೇಶದ ಅಭಿವೃದ್ಧಿಗೆ ಕೈಗೊಂಡಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿ ಅರಿವು ಮೂಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮಹೇಶ್, ಕಾರ್ಯದರ್ಶಿ ಜಗದೀಶ್, ಜಿಪಂ ಸದಸ್ಯ ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಎಲ್.ಬಿ.ರಾಜಶೇಖರ್, ರಾಮಗಿರಿ ರಾಮಣ್ಣ, ಯುವಕ ಘಟಕದ ಅಧ್ಯಕ್ಷ ಆಶೋಕ್, ಉಪಾಧ್ಯಕ್ಷ ವಿಕಾಸ್, ನಗರಾಧ್ಯಕ್ಷ ಬಸವರಾಜ್, ಮಹೇಶ್, ಕೆ.ಆರ್.ರಾಜಪ್ಪ, ಬಸವರಾಜ್ ಯಾದವ್ ಇನ್ನಿತರರಿದ್ದರು. ಗಣಪತಿ ಕಲ್ಯಾಣ ಮಂಟಪದಿಂದ ಆರಂಭವಾದ ಬೈಕ್ ರ್ಯಾಲಿ ತಾಲೂಕಿನ ಗುಂಡೇರಿ,
ಎನ್.ಜಿ.ಹಳ್ಳಿ, ರಾಮಗಿರಿ, ದುಮ್ಮಿ, ದೊಗ್ಗನಾಳ್, ಮಲ್ಲಾಡಿಹಳ್ಳಿ, ಶಿವಪುರ, ಚಿಕ್ಕಜಾಜೂರು, ಅರಸನಘಟ್ಟ, ಚಿಕ್ಕಂದವಾಡಿ, ಅಮೃತಪುರ ಚಿತ್ರಹಳ್ಳಿ, ಶಿವಗಂಗ, ತಾಳ್ಯ, ಕಣಿವೆ ಮಾರ್ಗವಾಗಿ ಪಟ್ಟಣಕ್ಕೆ ಆಗಮಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ