ಗುರು ತಿಪ್ಪೇರುದ್ರಸ್ವಾಮಿರಥಕ್ಕೆ ಕಲಶ ಸ್ಥಾಪನೆ


Team Udayavani, Mar 19, 2019, 10:52 AM IST

cta-1.jpg

ನಾಯಕನಹಟ್ಟಿ: ತಿಪ್ಪೇರುದ್ರಸ್ವಾಮಿ ಜಾತ್ರೆ ಅಂಗವಾಗಿ ಸೋಮವಾರ ರಥಕ್ಕೆ ಕಲಶ ಸ್ಥಾಪನೆ ಮಾಡಲಾಯಿತು. ಮಾ. 22 ರಂದು ಜರುಗಲಿರುವ ಜಾತ್ರೆಗೆ ರಥವನ್ನು ಸಿದ್ಧಗೊಳಿಸುವ ಕಾರ್ಯದಲ್ಲಿ ಕಲಶ ಸ್ಥಾಪನೆ ಮೊದಲ ಸಾಂಪ್ರದಾಯಿಕ ಕಾರ್ಯವಾಗಿದೆ. ಈ
ಬಾರಿ ರಥದ ಹಿಂಬದಿಯ ಒಂದು ಗಾಲಿಯನ್ನು ದುರಸ್ತಿಗೊಳಿಸಲಾಗಿದೆ. ಕಳೆದ ವರ್ಷ ರಥದ ಎಲ್ಲ ಒಂಭತ್ತು ಅಂತಸ್ತುಗಳನ್ನು ಪುನರ್‌ ಜೋಡಿಸಲಾಗಿತ್ತು.

ಸಂಜೆ ಒಳಮಠದಿಂದ ಐದು ಅಡಿ ಎತ್ತರದ ಕಲಶವನ್ನು ಮೆರವಣಿಗೆಯ ಮೂಲಕ ತರಲಾಯಿತು. ದೇವಾಲಯದ ಸಾಂಪ್ರದಾಯಿಕ ವಾದ್ಯಗಳು, ನಂದಿಧ್ವಜ ಮೆರವಣಿಗೆಯಲ್ಲಿದ್ದವು. ಆಯಗಾರರು, ರಥವನ್ನು ಮುನ್ನಡೆಸುವವರು ಹಾಗೂ ಸಾರ್ವಜನಿಕರು ಕಲಶಕ್ಕೆ ಪೂಜೆ ಸಲ್ಲಿಸಿದರು. ಕಲಶದ ಮೇಲ್ಭಾಗ ಹಾಗೂ ಕೆಳಭಾಗವನ್ನು ಹಗ್ಗದಿಂದ ಬಿಗಿಯಲಾಗಿತ್ತು. ನಿಧಾನವಾಗಿ ಕಲಶವನ್ನು ರಥದ
ಮೇಲ್ಭಾಗಕ್ಕೆ ಒಯ್ದು ಪ್ರತಿಷ್ಠಾಪಿಸಲಾಯಿತು. ಕಲಶ ರಥದ ಮೇಲೇರುತ್ತಿದ್ದಂತೆ ಭಕ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. 

ಕಲಶ ಸ್ಥಾಪನೆಯ ಮೊದಲ ದಿನ ನಾಲ್ಕು ಸಾಲು ಬಾವುಟಗಳನ್ನು ಕಟ್ಟಲಾಯಿತು. ಕಲಶಕ್ಕೆ ಬೃಹತ್‌ ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಲಾಯಿತು. ದೇವಾಲಯ ಸಮಿತಿ ಅಧ್ಯಕ್ಷ ಜೆ.ಪಿ. ರವಿಶಂಕರ್‌, ಸದಸ್ಯರಾದ ರುದ್ರಮುನಿ, ಗೋವಿಂದರಾಜ್‌, ನಾಗಪ್ಪ, ಮುನಿಯಪ್ಪ, ಸಿಬ್ಬಂದಿ ಸತೀಶ್‌ ಮತ್ತಿತರರು ಇದ್ದರು 

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.