ಅಧಿಕಾರಿಗಳ ನಿರ್ಲಕ್ಷ್ಯ: ಉರುಳಿನಿಂದ ತಪ್ಪಿಸಿಕೊಂಡ ಚಿರತೆ


Team Udayavani, Jan 21, 2018, 11:43 AM IST

VENUR-TAIGER.jpg

ವೇಣೂರು: ಬೆಳ್ತಂಗಡಿ ತಾಲೂಕಿನ ಗುಂಡೂರಿಯಲ್ಲಿ ಉರುಳಿಗೆ ಬಿದ್ದ ಚಿರತೆಯೊಂದು ತಪ್ಪಿಸಿಕೊಂಡಿದ್ದು, ಇದಕ್ಕೆ ಅರಣ್ಯ ಇಲಾಖೆ ಸಿಬಂದಿ  ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿದ ಗ್ರಾಮಸ್ಥರು,  ಅಧಿಕಾರಿಗಳ ವಾಹನಕ್ಕೆ ಮುತ್ತಿಗೆ ಹಾಕಿದ ಘಟನೆ  ಶನಿವಾರ ರಾತ್ರಿ ನಡೆದಿದೆ.

ಶನಿವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಗುಂಡೂರಿಯ ವ್ಯಕ್ತಿಯೊಬ್ಬರು ಇಟ್ಟಿದ್ದ ಉರುಳಿಗೆ ಚಿರತೆ ಬಿದ್ದಿತ್ತು.  ವೇಣೂರು ಅರಣ್ಯ ಇಲಾಖೆಯ ಸಿಬಂದಿ ಸ್ಥಳಕ್ಕಾಗಮಿಸಿದ್ದು, ಸಂಜೆ ಹೊತ್ತಿಗೆ ಚಿರತೆ ಉರುಳಿನಿಂದ  ತಪ್ಪಿಸಿಕೊಂಡಿದೆ.  ಅಧಿಕಾರಿಗಳು ತಂದಿದ್ದ ಬೋನನ್ನು ಆ  ಜಾಗದ ಮಾಲಕನ ಪಿಕಪ್‌ನಲ್ಲಿ ವೇಣೂರು ಅರಣ್ಯ ಕಚೇರಿಗೆ ಕೊಂಡೊಯ್ಯುತ್ತಿದ್ದ ವೇಳೆ  ಗ್ರಾಮಸ್ಥರು ಚಿರತೆ ಬಗ್ಗೆ  ಪ್ರಶ್ನಿಸಿದರು.  ಆಗ ಹಾರಿಕೆಯ ಉತ್ತರ ನೀಡಿ ಪಿಕಪ್‌ ಅನ್ನು ಜನರಿಗೆ ಒರೆಸಿಕೊಂಡೇ ಮುಂದಕ್ಕೆ  ಕೊಂಡೊಯ್ದರು. ಇದು ಗ್ರಾಮಸ್ಥರನ್ನು ಕೆರಳಿಸಿತಲ್ಲದೆ, ಚಿರತೆ ತಪ್ಪಿಸಿಕೊಂಡ ವಿಷಯವೂ ಆಗ ಅವರಿಗೆ ತಿಳಿಯಿತು. ಕೂಡಲೇ  ಜನರು ಅಧಿಕಾರಿಗಳ  ಜೀಪನ್ನು  ಅಡ್ಡಿಗಟ್ಟಿದರು.

ಅಜಾಗರೂಕತೆಯಿಂದ ಪಿಕಪ್‌ ಚಲಾಯಿಸಿದ ವ್ಯಕ್ತಿಯನ್ನು ಕರೆಯಿಸಿ ಕೇಸು ದಾಖಲಿಸಲು ಪಟ್ಟು ಹಿಡಿದರು. ಬಳಿಕ ವೇಣೂರು  ಪೊಲೀಸರು ಸ್ಥಳಕ್ಕಾಗಮಿಸಿ ಗ್ರಾಮಸ್ಥರನ್ನು ಸಮಾಧಾನಪಡಿಸಿದ್ದಾರೆ.  ಈ ಬಗ್ಗೆ ವೇಣೂರು ವಲಯ ಅರಣ್ಯಾಧಿಕಾರಿಯವರನ್ನು  ಪ್ರಶ್ನಿಸಿದಾಗ, ಮಂಗಳೂರಿನಲ್ಲಿ ಅರಿವಳಿಕೆ ಔಷಧ ಇಲ್ಲದ ಕಾರಣ ಶಿವಮೊಗ್ಗದ ತಂಡಕ್ಕೆ ಮಾಹಿತಿ ನೀಡಲಾಗಿತ್ತು. ಅವರು ತಲುಪುವುದು ರಾತ್ರಿಯಾಗುವುದರಿಂದ ಚಿರತೆಯನ್ನು  ಬೋನ್‌ ಒಳಗೆ ಹಾಕಲು ಪ್ರಯತ್ನಿಸಿದ ವೇಳೆ  ಅದು ತಪ್ಪಿಸಿಕೊಂಡಿದೆ ಎನ್ನುತ್ತಾರೆ. ಸುಮಾರು 12 ತಾಸು ಚಿರತೆ ಉರುಳಿನಲ್ಲಿದ್ದರೂ ಅದನ್ನು  ಬೋನಿನಲ್ಲಿ ಬಂಧಿಸಲಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.