ಇಲ್ಯಾಸ್ ಕೊಲೆ: ಮೂವರ ಬಂಧನ
Team Udayavani, Feb 23, 2018, 8:36 AM IST
ಮಂಗಳೂರು: ಉಳ್ಳಾಲ ಟಾರ್ಗೆಟ್ ಗ್ರೂಪ್ನ ಇಲ್ಯಾಸ್ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಉಳ್ಳಾಲ ಧರ್ಮನಗರ ನಿವಾಸಿ ದಾವೂದ್ (38) ಸಹಿತ ಮೂವರನ್ನು ಮಂಗಳೂರು ದಕ್ಷಿಣ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಉದ್ಯಾವರ ನಿವಾಸಿ ಮಹಮ್ಮದ್ ನಾಸಿರ್ ಯಾನೆ ನಾಸಿರ್ ಯಾನೆ ನಾಚಿ ( 25) ಹಾಗೂ ಮಂಜೇ ಶ್ವರ ಮಚ್ಚಂಪಾಡಿ ಸಿ.ಎಂ.ನಗರ ನಿವಾಸಿ ರಿಯಾಜ್ ಯಾನೆ ರಿಯಾ (32) ಇನ್ನಿಬ್ಬರು ಆರೋಪಿಗಳು.
ದಾವೂದ್ ಈ ಕೃತ್ಯದಲ್ಲಿ ನೇರ ಭಾಗಿಯಾಗಿದ್ದ. ಮಹಮ್ಮದ್ ನಾಸಿರ್ ಹಾಗೂ ರಿಯಾಜ್ ಹಂತಕ ರಿಗೆ ಆಶ್ರಯ ಹಾಗೂ ಹಣಕಾಸು ಸಹಾಯ ನೀಡಿದ್ದರು. ದಾವೂದ್ನ ಮೇಲೆ ಇಲ್ಯಾಸ್ ಕೊಲೆ ಪ್ರಕರಣ ಸೇರಿ ಒಟ್ಟು ನಾಲ್ಕು ಕೊಲೆ, ಎರಡು ಕೊಲೆ ಯತ್ನ ಹಾಗೂ ಇತರ ಐದು ಪ್ರಕರಣಗಳು ದಾಖಲಾಗಿವೆ.
ಮಹ ಮ್ಮದ್ ನಾಸಿರ್ ಮೇಲೆ ಮಂಜೇಶ್ವರ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖ ಲಾಗಿದೆ.
ಇಲ್ಯಾಸ್ ಪ್ರಕರಣದಲ್ಲಿ ಈಗಾಗಲೇ ಮಹಮ್ಮದ್ ಸಮೀರ್ ಅಲಿಯಾಸ್ ಸಮೀರ್ ಮತ್ತು ನಮೀರ್ ಹಂಝ ಅವರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ