ಸುಬ್ರಹ್ಮಣ್ಯ:ಹೆದ್ದಾರಿಯಲ್ಲಿ ಕಾರಿನ ಮೇಲೆರಗಿದ ಕಾಡಾನೆ;6ಮಂದಿ ಬಚಾವ್
Team Udayavani, Jun 23, 2018, 11:33 AM IST
ಕಡಬ: ಕಾಡಾನೆಯೊಂದು ರಸ್ತೆಯಲ್ಲಿ ತೆರಳುತ್ತಿಗೆ ಕಾರಿಗೆ ಅಡ್ಡ ಬಂದು ದಾಳಿ ಮಾಡಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ಆರು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಡೂರು ಮೂಲದ ಯಾತ್ರಾರ್ಥಿಗಳಿದ್ದ ಮಾರುತಿ ಓಮ್ನಿ ಕಾರು ಬಿಳಿನೆಲೆ ಸಮೀಪ ತಲುಪಿದಾಗ ಕಾಡಾನೆ ರಸ್ತೆಯನ್ನು ದಾಟುತ್ತಿತ್ತು.
ಆನೆಯನ್ನು ಧಿಡೀರ್ ಕಂಡ ಚಾಲಕ ಆನೆಯ ಸಮೀಪದಲ್ಲೇ ಕಾರನ್ನು ನಿಲ್ಲಿಸಿದ್ದರೆನ್ನಲಾಗಿದೆ. ಈ ಸಂದರ್ಭದಲ್ಲಿ ಕಾಡಾನೆಯು ಹಿಂತಿರುಗಿ ಬಂದು ಸೊಂಡಿಲಿನಿಂದ ಕಾರಿನ ಮೇಲೆ ದಾಳಿ ಮಾಡಿದೆ.
ಇದೇ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಬಸ್ಸೊಂದು ಬಂದಿದ್ದು, ಜೋರಾಗಿ ಹಾರ್ನ್ ಹಾಕಿದ ಕಾರಣ ಕಾಡಾನೆ ಕಾರನ್ನು ಬಿಟ್ಟು ಓಡಿ ಹೋದ ಕಾರಣ ಭಾರೀ ಅನಾಹುತ ತಪ್ಪಿದೆ.
ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ
MUST WATCH
ಹೊಸ ಸೇರ್ಪಡೆ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್