ಸುಬ್ರಹ್ಮಣ್ಯ ಬಂದ್; ಚೈತ್ರಾ ಕುಂದಾಪುರಗೆ ನ್ಯಾಯಾಂಗ ಬಂಧನ
Team Udayavani, Oct 25, 2018, 10:59 AM IST
ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದುದನ್ನು ಖಂಡಿಸಿ ಪಕ್ಷಾತೀತವಾಗಿ ಸಾರ್ವಜನಿಕರ ವತಿಯಿಂದ ಗುರುವಾರ ಸುಬ್ರಹ್ಮಣ್ಯ ಬಂದ್ ನಡೆಸಲಾಗುತ್ತಿದೆ. ಘಟನೆಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಕೇಳಿ ಬಂದಿದೆ.
ಬುಧವಾರ ಸಂಜೆ ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜ ಹಾಗೂ ಚೈತ್ರಾ ಕುಂದಾಪುರ ಅವರ ಎರಡು ಗುಂಪುಗಳ ನಡುವೆ ಸುಬ್ರಹ್ಮಣ್ಯದಲ್ಲಿ ಘರ್ಷಣೆ ನಡೆದಿತ್ತು, ಪರಿಣಾಮ ಗುರುಪ್ರಸಾದ್ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುರುಪ್ರಸಾದ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೃತ್ಯವನ್ನು ಖಂಡಿಸಿ ತಡರಾತ್ರಿ ಸುಬ್ರಹ್ಮಣ್ಯದ ನಾಗರಿಕರು ಮೆರವಣಿಗೆ ನಡೆಸಿ ಬಂದ್ ಕರೆ ನೀಡಿದ್ದರು. ಬಂದ್ ಕರೆಗೆ ನಗರದ ವರ್ತಕರು ಸಂಪೂರ್ಣ ಬೆಂಬಲ ನೀಡಿದ್ದಾರೆ. ಇದುವರೆಗೆ ಶಾಂತಿಯುತ ಬಂದ್ ನಡೆದಿದೆ. ಪೊಲೀಸ್ ಭದ್ರತೆ ಬಿಗಿ ಗೊಳಿಸಲಾಗಿದೆ.
ಘರ್ಷಣೆಗೆ ಸಂಬಂಧಿಸಿ ಪ್ರಮುಖ ಆರೋಪಿಗಳಾದ ಚೈತ್ರಾ ಕುಂದಾಪುರ ಮತ್ತು ಏಳು ಮಂದಿಯನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದು ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನವೆಂಬರ್ 3 ರ ವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೈತ್ರಾ ಕುಂದಾಪುರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಚೈತ್ರಾ ಕುಂದಾಪುರ ಅವರೂ ಪ್ರತಿ ದೂರನ್ನು ದಾಖಲಿಸಿದ್ದಾರೆ.
ಇತ್ತೀಚೆಗೆ ಸುಬ್ರಹ್ಮಣ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಚೈತ್ರಾ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದಲ್ಲಿ ನಡೆಯುತ್ತಿರುವ ಪ್ರಮುಖ ಸೇವೆಯಾದ ಸರ್ಪಸಂಸ್ಕಾರ ವಿಧಿಯ ಕುರಿತು ವಿವಾದಿತ ಮಾತುಗಳನ್ನಾಡಿ
ದ್ದರು. ಈ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪರ ವಿರೋಧ ಚರ್ಚೆಗಳು ನಡೆದಿದ್ದವು. ಈ ವಿಚಾರವೇ ಘರ್ಷಣೆಗೆ ಕಾರಣವಾಗಿದೆ.
ಪ್ರತಿಭಟನಾ ಮೆರವಣಿಗೆ
ಗುರುವಾರ ಬೆಳಗ್ಗೆ ನಗರದ ಮುಖ್ಯ ಪೇಟೆಯಿಂದ ಕುಮಾರಧಾರೆ ತನಕ ಪಕ್ಷ ಬೇಧ ಮರೆತು ಐನೂರಕ್ಕೂ ಅಧಿಕ ಮಂದಿ ಪ್ರತಿಭಟನೆ ಮೆರವಣಿಗೆ ನಡೆಸಿದ್ದಾರೆ. ಚೈತ್ರಾ ಕುಂದಾಪುರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಜೆಯೂ ಭಾರೀ ಸಂಖ್ಯೆಯಲ್ಲಿ ನಾಗರಿಕರು ದೇವಾಲಯದ ರಥ ಬೀದಿಯಲ್ಲಿ ಜಮಾವಣೆ ಗೊಂಡು ಪ್ರತಿಭಟನಾ ಸಭೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.
ಭಕ್ತಿರಿಗೆ ದೇಗುಲದಿಂದ ವ್ಯವಸ್ಥೆ
ದೇಗುಲದ ವತಿಯಿಂದ ಭಕ್ತಿರಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. 11 ಗಂಟೆಯ ವರೆಗೆ ಹೊಟೇಲ್ಗಳನ್ನು ತೆರೆತು ಉಪಾಹಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು