ವಿಟ್ಲ:ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿ; ಜನರ ಪರದಾಟ
Team Udayavani, Dec 3, 2018, 2:34 PM IST
ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಬಳಿ ಮಾನಸ ಆಯಿಲ್ ಮಿಲ್ ಎದುರು ರಸ್ತೆ ಮಧ್ಯೆಯೇ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಸೋಮವಾರ ಬೆಳಗ್ಗೆ ಸಾವಿರಾರು ಮಂದಿ ಸಂಚಾರ ಸಾಧ್ಯವಾಗದೆ ಪರದಾಡಬೇಕಾಯಿತು.
ಮುಂಜಾನೆ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಕಬ್ಬಿಣ ಸಾಗಿಸುತ್ತಿದ್ದ ಆರು ಚಕ್ರದ ಲಾರಿ ಮಾಣಿಯ ಹಳೀರ ಎಂಬಲ್ಲಿ ರಸ್ತೆ ಮಧ್ಯೆದಲ್ಲಿ ಕೆಟ್ಟು ನಿಂತಿತ್ತು. ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.
ಬಸ್, ಲಾರಿ, ಶಾಲಾ ವಾಹನಗಳು ರಸ್ತೆಯಲ್ಲಿ ಉಳಿದ ಪರಿಣಾಮ ಉದ್ಯೋಗಿಗಳು, ಹಾಗೂ ವಿದ್ಯಾರ್ಥಿಗಳು ಪರದಾಟ ನಡೆಸುವಂತಾಯಿತು.
ವಾಹನಗಳು ಮಾಣಿಯಿಂದ ಸುರಿಕುಮೇರು, ಹಾಗೂ ಬುಡೋಳಿ ವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಲಾರಿ ಬೆಳಗ್ಗೆ 4 ಗಂಟೆಗೇ ಕೆಟ್ಟು ನಿಂತಿದ್ದರೆ 10.30ರ ಬಳಿಕ ವಿಟ್ಲ ಪೊಲೀಸರು ಮತ್ತು ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಲಾರಿ ತೆರವು ಗೊಳಿಸಿ ಸಂಚಾರ ಸುಗಮಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?