ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಸಸಿ: ಶಾಮನೂರು ಶಿವಶಂಕರಪ್ಪ
Team Udayavani, Jul 6, 2017, 8:24 AM IST
ದಾವಣಗೆರೆ: ಮೊಟ್ಟ ಮೊದಲ ಬಾರಿಗೆ ಸಾರ್ವಜನಿಕರಿಗೆ ಅತಿ ಕಡಮೆ ದರದಲ್ಲಿ ಸಸಿಗಳನ್ನು ವಿತರಿಸಲಾಗುತ್ತಿದ್ದು, ಈ ಅವಕಾಶ ಸದುಪಯೋಗ ಪಡೆದುಕೊಳ್ಳಬೇಕು ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ವೇದಮೂರ್ತಿ ಮನವಿ ಮಾಡಿದ್ದಾರೆ.
ಬುಧವಾರ ಪಿಬಿ ರಸ್ತೆಯಲ್ಲಿನ ತೋಟಗಾರಿಕಾ ಇಲಾಖೆ ಕಚೇರಿ ಆವರಣದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಸಸ್ಯ ಸಂತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆ ಆವರಣದಲ್ಲಿ ಜುಲೆ„ 15ರ ವರೆಗೆ ಹತ್ತು ದಿನಗಳ ಕಾಲ ಆಯೋಜಿಸಿರುವ ಸಸ್ಯ ಸಂತೆಯಲ್ಲಿ ಎಲ್ಲರೂ ಗಿಡಗಳನ್ನು ತೆಗೆದುಕೊಂಡು
ಹೋಗಿ ಬೆಳೆಸಿ ಎಂದರು. ಜಿಲ್ಲೆಯ ಚನ್ನಗಿರಿ ತಾಲೂಕಿನ ಗರಗ, ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು, ಹರಪನಹಳ್ಳಿ ತಾಲ್ಲೂಕಿನ ಕೆ. ಕಲ್ಪನಹಳ್ಳಿ, ದಾವಣಗೆರೆಯ ಆವರಗೊಳ್ಳ, ಹರಿಹರ ತಾಲ್ಲೂಕಿನ ಬುಳ್ಳಾಪುರ, ಜಗಳೂರು ತಾಲೂಕಿನ ವ್ಯಾಸಗೊಂಡನಹಳ್ಳಿ ಸೇರಿದಂತೆ ಒಟ್ಟು 9 ತೋಟಗಾರಿಕೆ ಕ್ಷೇತ್ರದ 3 ನರ್ಸರಿ ಸೇರಿ ಒಟ್ಟು 375 ಎಕರೆ ವಿಸ್ತೀರ್ಣದಲ್ಲಿ ಸಸಿ ಬೆಳೆಸಲಾಗಿದೆ. ಕ್ಷೇತ್ರ ಹಾಗೂ ನರ್ಸರಿಗಳಲ್ಲಿ ಬೆಳೆಸಲಾಗಿರುವ ಉತ್ತಮ ಗುಣಮಟ್ಟದ ತೆಂಗು, ಮಾವು, ಸಪೋಟ, ನಿಂಬೆ, ಕರಿಬೇವು, ನುಗ್ಗೆ ಹಾಗೂ ಅಲಂಕಾರಿಕ ಸಸಿ/ಕಸಿಗಳನ್ನು ನಗರವಾಸಿಗಳಿಗೆ ಅತ್ಯಂತ ಕಡಿಮೆ ದರದಲ್ಲಿ ಪೂರೈಸಲಾಗುತ್ತಿದೆ ಎಂದು ಅವರು ತಿಳಿಸಿದರು.
ನಗರದ ಆರ್ಎಂಸಿ ಯಾರ್ಡ್ನಲ್ಲಿ ಜೈವಿಕ ಕೇಂದ್ರ ಪ್ರಾರಂಭಿಸಲಾಗುತ್ತಿದ್ದು, ಈ ವರ್ಷಾಂತ್ಯದಲ್ಲಿ ಕೇಂದ್ರದ ಕಾಮಗಾರಿ
ಪೂರ್ಣಗೊಳ್ಳಬಹುದು. ಈ ಕೇಂದ್ರದಲ್ಲಿ ಅಂಗಾಂಶ ಬಾಳೆ ಸಸಿ, ರೈತರ ಬೇಡಿಕೆಗೆ ಅನುಗುಣವಾಗಿ ಅಂಗಾಂಶ ದಾಳಿಂಬೆ ಸಸಿ, ಜೈವಿಕ ಗೊಬ್ಬರ ತಯಾರಿಸಲಾಗುವುದು ಎಂದು ಅವರು ಹೇಳಿದರು. ಬರದ ಹಿನ್ನೆಲೆಯಲ್ಲಿ ಪ್ರಸ್ತುತ ಒಣ ತೋಟಗಾರಿಕೆಗೆ ಒತ್ತು ನೀಡಲಾಗುತ್ತಿದೆ. ಸೀಬೆ, ನೇರಳೆ, ಸಪೋಟ, ಬೇಲದ ಹಣ್ಣು, ಹುಣಸೆ ಇವುಗಳು ಮಳೆ ಇಲ್ಲದಿದ್ದರೂ ಉಳಿಯುವಂತಹ ಬೆಳೆಗಳಾಗಿದ್ದು ಇವುಗಳನ್ನು ಉತ್ತೇಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಮಾವಿನ ಫಸಲು ಈ ಬಾರಿ ಕಡಿಮೆ ಇದೆ. ಮುಂದಿನ ಮಾರ್ಚ್ನಲ್ಲಿ ಮಾವು ಮೇಳ ನಡೆಸುವ ಯೋಜನೆ ಇದೆ. ಮಾವು ಮಾಗಿಸುವ ಘಟಕಗಳನ್ನು ಸ್ಥಾಪಿಸಲು ರೈತರಿಗೆ ಶೇ.30ರ ಸಬ್ಸಿಡಿ ನೀಡಲಾಗುವುದು ಹಾಗೂ ಮಾವಿನ
ಪುನಶ್ಚೇತನಕ್ಕೆ ಒಂದು ಹೆಕ್ಟೇರ್ಗೆ ಇಪ್ಪತ್ತು ಸಾವಿರದಂತೆ ಪ್ರೋತ್ಸಾಹಧನ ನೀಡಲಾಗುವುದು ಎಂದರು.
ಹವಾಮಾನ ಆಧಾರಿತ ತೋಟಗಾರಿಕಾ ಬೆಳೆವಿಮೆಯಡಿ 4600 ರೈತರು 6 ಕೋಟಿಯಷ್ಟು ವಿಮೆ ಕಟ್ಟಿದ್ದು, ವಿಮಾ ಕಂಪೆನಿಯಿಂದ 15 ಕೋಟಿ ಹಣ ಪಾವತಿಗೆ ನಿಗದಿಯಾಗಿದೆ. ಆದರೆ ವಿಮಾ ಕಂಪೆನಿ ಕಡೆಯಿಂದ ಹಣ ಬಿಡುಗಡೆ
ತಡವಾಗುತ್ತಿದೆ. ಈ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವರು ವಿಮಾ ಕಂಪೆನಿಯೊಂದಿಗೆ ಮಾತುಕತೆ ನಡೆಸಿ, ಶೀಘ್ರದಲ್ಲೇ ರೈತರ ಖಾತೆಗೆ ಬೆಳೆವಿಮೆ ಹಣ ಪಾವತಿಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ