ಭಕ್ತರ ಮನೆಗೆ ಬರಲು ಸಿದ್ಧನಾಗುತ್ತಿದ್ದಾನೆ ಗೌರಿಪುತ್ರ..!


Team Udayavani, Aug 5, 2017, 3:15 PM IST

05-DV-3.jpg

ದಾವಣಗೆರೆ: ಇನ್ನೇನು 3 ವಾರ ಕಳೆದರೆ ಎಲ್ಲರ ಮನೇಲಿ ಗಣೇಶ ಪೀಠಸ್ಥನಾಗುತ್ತಾನೆ. ಗೌರಿಪುತ್ರ, ಈಶ್ವರ ತನಯ, ಏಕದಂತ, ಗಜಮುಖ, ವಿಘ್ನ ನಿವಾರಕ ವಿನಾಯಕ ಮನೆ, ಬೀದಿಗಳಲ್ಲಿ ಆಸೀನನಾಗಲಿದ್ದಾನೆ.

ಪಾರ್ವತಿ ಸುತನ ಮರು ಹುಟ್ಟಿನ ನಂತರ ಭೂಮಿಗೆ ಬಂದು ಕೈಲಾಸಕ್ಕೆ ವಾಪಸ್ಸಾಗುತ್ತಾನೆ ಎಂಬ ನಂಬಿಕೆ ಇಟ್ಟುಕೊಂಡಿರುವ ಹಿಂದುಗಳು ಭಾದ್ರಪದ ಮಾಸದ ಚೌತಿಯ ದಿನ ತಮ್ಮ ಮನೆಯಲ್ಲಿ ಮಣ್ಣಿನ ರೂಪದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಪೂಜಿಸಿ, ಭಕ್ಷ ನೈವೇದ್ಯ ಅರ್ಪಿಸುತ್ತಾರೆ. ಈ
ಚತುರ್ಥಿ ಇತ್ತೀಚಿಗೆ ಹಿಂದುಗಳ ಪಾಲಿನ ಅತಿ ದೊಡ್ಡ ಹಬ್ಬ. ಈ ಬಾರಿ ಆ. 25ರಂದು ಗಣೇಶ ಚತುರ್ಥಿ. ಸತತ ಬರದ ಬವಣೆ ಮಧ್ಯೆಯೂ ಗಣೇಶೋತ್ಸವಕ್ಕೆ ಎಲ್ಲೆಡೆ ಭರದ ಸಿದ್ಧತೆ ನಡೆದಿವೆ. ಬೀದಿಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ನಗರದ ಹಲವು ಕಡೆ ಈಗಾಗಲೇ ವೇದಿಕೆ ಸಿದ್ಧತಾ ಕಾರ್ಯಕ್ರಮ ಆರಂಭಗೊಂಡಿವೆ.

ಇನ್ನು ಗಣೇಶ ಮೂರ್ತಿ ತಯಾರಕರು ಒಂದು ತಿಂಗಳಿನಿಂದ ಮಣ್ಣಿನೊಂದಿಗೆ ಕಸರತ್ತು ಆರಂಭಿಸಿದ್ದಾರೆ. ಅನೇಕ ಕಡೆಗಳಲ್ಲಿ ಈಗಾಗಲೇ ಮೂರ್ತಿಗಳು ಸಿದ್ಧಗೊಂಡಿದ್ದು, ಬಣ್ಣ ಲೇಪನದ ಕೆಲಸ ಮಾತ್ರ ಬಾಕಿ ಉಳಿದಿದೆ. ಇನ್ನು ಉಳಿದ ಸಿದ್ಧತೆಗಳು ಸಹ ಸಮಾನಂತರವಾಗಿ ನಡೆದಿವೆ. ಗಣೇಶ ಚತುರ್ಥಿಗೆ ಬೇಕಾದ ಎಲ್ಲಾ ಸಾಮಗ್ರಿಗಳು ಮಾರುಕಟ್ಟೆಯಲ್ಲಿನ ಅಂಗಡಿಗಳಲ್ಲಿ ರಾರಾಜಿಸುತ್ತಿವೆ. ಪ್ಲಾಸ್ಟಿಕ್‌ ಹೂ, ಸಣ್ಣ ಸಣ್ಣ ಎಲೆಕ್ಟಿಕ್‌ ದೀಪ, ಅಲಕಾಂರಿಕ ದೀಪ, ಬಣ್ಣದ ಕಾಗದ, ಕೃತಕ ಮಾವು ಮುಂತಾದ ಸಾಮಗ್ರಿಗಳು ಇದೀಗ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಹರಳೆಣ್ಣೆ ಕೊಟ್ರಬಸಪ್ಪ ವೃತ್ತ, ವಿನೋಬ ನಗರ 2ನೇ ಮೇನ್‌, ತೊಗಟವೀರ ಕಲ್ಯಾಣ ಮಂಟಪ, ಚೇತನ ಹೋಟೆಲ್‌ ರಸ್ತೆ ಸೇರಿದಂತೆ ಸಾರ್ವಜನಿಕರ ಪ್ರದೇಶಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಜಾಗಗಳ ಸಿದ್ಧತಾ ಕಾರ್ಯ ಆರಂಭಗೊಂಡಿವೆ. ತರೇಹವಾರಿ ರೂಪದ ದೈತ್ಯ ಮೂರ್ತಿಗಳ ನಿರ್ಮಾಣ ಸಹ ನಡೆದಿದೆ.

ಪಿಒಪಿ ಮೂರ್ತಿಗಳ ಹಾವಳಿ
ಪಿಒಪಿ (ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌) ಗಣೇಶ ಮೂರ್ತಿ ಮಾರಾಟ ಮಾಡದಂತೆ ಹಾಗೂ ಪರಿಸರ ಸ್ನೇಹಿ ಗಣಪ ಮೂರ್ತಿ ಪ್ರತಿಷ್ಠಾಪಿಸುವಂತೆ ಪ್ರತಿ ವರ್ಷವೂ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು, ಪಾಲಿಕೆಯವರು ಪ್ರಕಟಣೆ ನೀಡಿ ಎಚ್ಚರಿಸುತ್ತಾರೆ. ಆದರೂ ಪಿಒಪಿ ಗಣಪನ ಹಾವಳಿ ನಿಲ್ಲಿಸಲಾಗಿಲ್ಲ. ಪಿಒಪಿ ಮೂರ್ತಿಗಳಿಂದ ಪರಿಸರ ಹಾನಿ ಅಧಿಕವಾಗಲಿದೆ ಎಂಬುದು ಗೊತ್ತಿದ್ದರೂ ಅವುಗಳ ಒಲವು ಮಾತ್ರ ಇನ್ನೂ ಕಡಿಮೆ ಆಗಿಲ್ಲ.

ಬೇಕಿದೆ 16 ಸಾವಿರ ಮೂರ್ತಿಗಳು
ದಾವಣಗೆರೆ ನಗರದಲ್ಲಿ ಗಣೇಶ ಚತುರ್ಥಿಗೆ ಸುಮಾರು 16 ಸಾವಿರ ಗಣೇಶ ಮೂರ್ತಿಗಳು ಬೇಕು ಎಂಬ ಅಂದಾಜಿದೆ. ಮನೆಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳ ಪ್ರಮಾಣವೇ 15 ಸಾವಿರ ಇದ್ದು, ಸಾರ್ವಜನಿಕ ಗಣೇಶ ಮೂರ್ತಿಗಳು ಸೇರಿ ಇದು 16 ಸಾವಿರ ಆಗಬಹುದು ಎಂದು ಪರಿಸರ ಸಂರಕ್ಷಣಾ ವೇದಿಕೆ ಅಧ್ಯಕ್ಷ ದೇವರಮನಿ ಗಿರೀಶ್‌ ಅಭಿಪ್ರಾಯ ಪಡುತ್ತಾರೆ. ಇನ್ನು ಅಕ್ಕಪಕ್ಕದ ಹಳ್ಳಿಯ ಜನರು ನಗಕ್ಕೆ ಬಂದು ಖರೀದಿಸುವ ಗಣೇಶ ಮೂರ್ತಿಗಳ ಲೆಕ್ಕೆ ನೂರರಲ್ಲಿ ಮಾತ್ರ ಇದೆ ಅಂತಾರೆ. ನಮ್ಮ ನಗರದಲ್ಲಿಯೇ ಇಷ್ಟು ಮೂರ್ತಿ ತಯಾರಿಸುವ ಶಿಲ್ಪಿಗಳಿದ್ದಾರೆ. ಆದರೂ ಕೊನೆ ಕ್ಷಣದಲ್ಲಿ ನಮ್ಮ ನಗರಕ್ಕೆ ಪಿಒಪಿ ಗಣೇಶ ಮೂರ್ತಿಗಳು ಬರುವುದು ಬೇಸರದ ಸಂಗತಿ ಎಂದು ಅವರು ಹೇಳುತ್ತಾರೆ.

ಮೂರ್ತಿ ತಯಾರಿ ಹೀಗಿರುತ್ತೆ….
ಗಣೇಶ ಚತುರ್ಥಿಗೆ ಭಕ್ತರು ತರುವ ಗಣೇಶ ಮೂರ್ತಿ ತಯಾರಿಕೆ ಹಿಂದೆ ಅಪಾರ ಪರಿಶ್ರಮ ಇದೆ. ಮಣ್ಣಿನ ಗಣೇಶ ಮೂರ್ತಿ ತಯಾರಕರು ಜನವರಿಯಿಂದಲೇ ಕಾರ್ಯೋನ್ಮುಖರಾಗುತ್ತಾರೆ. ಆಗ ಮಣ್ಣಿನ ಸಂಗ್ರಹ ಮಾಡಲಾಗುತ್ತದೆ. ದಾವಣಗೆರೆಯಲ್ಲಿನ ಶಿಲ್ಪಿಗಳು ರಾಣಿಬೆನ್ನೂರು, ಹಾವೇರಿ, ಗದಗ ಮುಂತಾದ ಭಾಗಗಳಲ್ಲಿ ಮಣ್ಣು ಸಂಗ್ರಹಿಸುತ್ತಾರೆ. ಗಣೇಶ ಮೂರ್ತಿ ತಯಾರಾಗುವುದು ಜೇಡಿ ಮಣ್ಣಿನಿಂದ. ಕೆರೆಯಲ್ಲಿನ ಜೇಡಿಮಣ್ಣು ಸಂಗ್ರಹಿಸಿ, ಅದನ್ನು ಕಾಲ ಕಾಲಕ್ಕೆ ಹದ ಮಾಡುತ್ತಾ ಇಡಲಾಗುವುದು. ಇನ್ನೇನು ಗಣೇಶ ಚತುರ್ಥಿಗೆ ಒಂದು ತಿಂಗಳು ಇದೆ ಎಂದಾಗ ಮೂರ್ತಿಗಳ ನಿರ್ಮಾಣ ಕಾರ್ಯ ಆರಂಭವಾಗಲಿದೆ.

ಸಂಗ್ರಹಿಸಿದ ಜೇಡಿ ಮಣ್ಣನ್ನು ಒಂದು ದಿನದ ಕಾಲ ನೆನೆಸಿ ಇಡುತ್ತಾರೆ. ಮಾರನೆಯ ದಿನ ಹರಳೆ ಸೇರಿಸಿ ಹದಮಿಶ್ರಿತ ಮಾಡಿ ಕುಟ್ಟಲಾಗುತ್ತದೆ. ಹೀಗೆ ಕುಟ್ಟಿ ಹದ ಮಾಡಿದ ಮಣ್ಣಿನಿಂದ ಮೂರ್ತಿ ತಯಾರಿಸಲಾಗುತ್ತದೆ.

ಪಾಟೀಲ ವೀರನಗೌಡ

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.