ಸರ್‌ ಎಂ.ವಿಶ್ವೇಶ್ವರಯ್ಯ ಮೇಧಾವಿ ವಿಜ್ಞಾನಿ


Team Udayavani, Sep 16, 2017, 10:19 AM IST

16-davangere-2.jpg

ಹೊನ್ನಾಳಿ: ಸರ್‌ ಎಂ.ವಿಶ್ವೇಶ್ವರಯ್ಯ ಒಬ್ಬಮೇಧಾವಿ ವಿಜ್ಞಾನಿಯಾಗಿದ್ದರು ಎಂದು ಹಿರೇಕಲ್ಮಠದ ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ರಾಷ್ಟ್ರೀಯ ಭಾವೈಕ್ಯತಾ ಸಮಿತಿ ಹಾಗೂ ತಾಲೂಕು ಗುತ್ತಿಗೆದಾರರ ಸಂಘ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಇಲ್ಲಿನ ತುಂಗಭದ್ರಾ ಸೇತುವೆ ಬಳಿ ಹಮ್ಮಿಕೊಂಡಿದ್ದ ಇಂಜಿನಿಯರ್ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸರ್‌ ಎಂ.ವಿ ಅವರ ಕೊಡುಗೆ ಕೇವಲ ಕರ್ನಾಟಕಕ್ಕಲ್ಲದೆ ದೇಶದುದ್ದಗಲಕ್ಕೂ ಇದ್ದು, ಅವರೊಬ್ಬ ಸಾಧನೆಯ ಮೇರು ಪರ್ವತವಾಗಿ ಕಾರ್ಯ ನಿರ್ವಹಿಸಿ ತಾಂತ್ರಿಕತೆಯ ಅನರ್ಘ್ಯ  ರತ್ನ ಎನಿಸಿದ್ದರು ಎಂದು ಹೇಳಿದರು.

ಹೊನ್ನಾಳಿ ತುಂಗಭದ್ರಾ ಸೇತುವೆ ಸರ್‌. ಎಂ.ವಿಶ್ವೇಶ್ವರಯ್ಯ ಅವರ ಮೇಲುಸ್ತುವಾರಿಯಲ್ಲಿ ರಚಿಸಲ್ಪಟ್ಟು ಇಂದಿಗೆ 95 ವರ್ಷಗಳು ಗತಿಸಿವೆ. ಸೇತುವೆ ಇಂದಿಗೂ ಗಟ್ಟಿಯಾಗಿದೆ. ಅಂದಿನ ಜನ ಯಾವುದೇ ಸ್ವಾರ್ಥವಿಲ್ಲದೇ ಒಳಿತನ್ನು ಮಾಡಿದ್ದಾರೆ. ಆದರೆ ಅದೇ ಸೇತುವೆಯ ಎರಡು ಬದಿಯ ತಡೆ ಗೋಡೆಯ ಮೇಲಿನ ಹಾಸು ಕಲ್ಲುಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿರುವುದು ಮಾತ್ರ ವಿಷಾದನೀಯ ಎಂದು ಹೇಳಿದರು.

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ವಿಶ್ವೇಶ್ವರಯ್ಯನವರು ದೇಶ ಕಂಡ ಅಪರೂಪದ ಇಂಜಿನಿಯರ್‌. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ ಮಹಾನ್‌ ಚೇತನ. ವಿಶ್ವೇಶ್ವರಯ್ಯ ಅವರ ಕಾಲದಲ್ಲಿ ನಡೆದ ಎಲ್ಲಾ ಸೇತುವೆ, ಆಣೆಕಟ್ಟುಗಳು, ದೊಡ್ಡ ಕಟ್ಟಡಗಳು ಇಂದಿಗೂ ಸುಭದ್ರವಾಗಿವೆ ಎಂದರು.

ಉಪನ್ಯಾಸಕ ಡಿ.ಸಿ.ಪಾಟೀಲ್‌ ಉಪನ್ಯಾಸ ನೀಡಿದರು. ಡಿಸಿಸಿ ಬ್ಯಾಂಕ್‌ ನಿರ್ದೇಶಕ ಡಿ.ಎಸ್‌.ಸುರೇಂದ್ರಗೌಡ, ಎಪಿಎಂಸಿ ಅಧ್ಯಕ್ಷ ಪ್ರಕಾಶ್‌, ಗ್ರಾಪಂ ಅಧ್ಯಕ್ಷೆ ಲಕ್ಷ್ಮಮ್ಮನಾಗಪ್ಪ, ಪಪಂ ಸದಸ್ಯರಾದ ಹೊಸಕೇರಿ ಸುರೇಶ್‌, ತಾಪಂ ಇಒ ಡಾ| ಹುಲಿಕೇರಿ ಶಿವಪ್ಪ, ಯುವಶಕ್ತಿ ಒಕ್ಕೂಟ ಅಧ್ಯಕ್ಷ ಕತ್ತಿಗೆ ನಾಗರಾಜ್‌ ಮಾತನಾಡಿದರು.

ಜಿಪಂ ಸದಸ್ಯ ಎಂ.ಆರ್‌. ಮಹೇಶ್‌, ಸರಳಿನಮನೆ ಮಂಜುನಾಥ್‌, ವಿಜೇಂದ್ರಪ್ಪ, ಗುತ್ತಿಗೆದಾರರ ಸಂಘದ ತಾಲೂಕು ಅಧ್ಯಕ್ಷ ಎಚ್‌.ಪಿ. ರಾಮಮೂರ್ತಿ, ತಾಲೂಕು ವೈದ್ಯಾಧಿಕಾರಿ ಡಾ| ಕೆಂಚಪ್ಪ, ಇಂಜಿನಯರ್‌ಗಳು, ಗುತ್ತಿಗೆದಾರರು ಇದ್ದರು. ಗುತ್ತಿಗೆದಾರ ನರಸಿಂಹಮೂರ್ತಿ ನಿರೂಪಿಸಿದರು. ಇಂಜಿನಿಯರ್‌ ಜಿ.ಪಿ.ರಾಜು, ಗುತ್ತಿಗೆದಾರರಾದ ಎಂ.ಉಮರ್‌, ಚಂದ್ರಪ್ಪ, ರಾಮಪ್ಪ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.