ಕುಂಭದ್ರೋಣ ಮಳೆಗೆ ತತ್ತರಿಸಿದ ದಾವಣಗೆರೆ ನಗರ


Team Udayavani, Sep 26, 2017, 4:58 PM IST

dav-2.jpg

ದಾವಣಗೆರೆ: ಭಾನುವಾರ ಸಂಜೆಯಿಂದ ಸೋಮವಾರ ಬೆಳಗಿನ ಜಾವ 3 ಗಂಟೆ ವರೆಗೆ ಇಡೀ ಜಿಲ್ಲೆಯಲ್ಲಿ 90 ಮಿ.ಮೀ ಮಳೆ ಸುರಿದಿದೆ. ಎಡೆಬಿಡದೇ ಸುರಿದ ಕುಂಭದ್ರೋಣ ಮಳೆಗೆ ನಗರದ ತಗ್ಗು ಪ್ರದೇಶಗಳೆಲ್ಲಾ ಜಲಾವೃತಗೊಂಡು ಜನ ಜೀವನ ಅಸ್ತವ್ಯವಸ್ಥಗೊಂಡಿದೆ. ಸುಮಾರು 1000 ಮನೆಗಳು ಹಾನಿಗೊಳಗಾಗಿವೆ.

ಯಾವುದೇ ಜೀವ ಹಾನಿಯಾಗಿಲ್ಲ. ಪರಿಸ್ಥಿತಿ ನಿಭಾಯಿಸಲು ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌ ಸಮರೋಪಾದಿಯಲ್ಲಿ ಕೆಲಸ ಕೈಗೊಂಡಿದ್ದಾರೆ. ಎರಡು ಕಡೆಗಳಲ್ಲಿ ಗಂಜಿ ಕೇಂದ್ರ ಆರಂಭಿಸಿ, ರಾತ್ರಿಯಿಡೀ ಮಳೆ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಸಂತ್ರಸ್ತರಿಗೆ ನೆರವು ಒದಗಿಸಿದರು.

ಮಳೆಯಿಂದಾಗಿ ಸಂಪೂರ್ಣ ಸಂತ್ರಸ್ತರಾದವರಿಗಾಗಿ ಭಾರತ್‌ ಕಾಲೋನಿ, ಚಿಕ್ಕನಹಳ್ಳಿ ಬೆಂಕಿನಗರದಲ್ಲಿ ಗಂಜಿ ಕೇಂದ್ರ ಆರಂಭಿಸಲಾಗಿದೆ. ಬೆಂಕಿನಗರ ನಿವಾಸಿಗಳಿಗೆ ಎಪಿಎಂಸಿಯ ಗೋದಾಮಿನಲ್ಲಿ ಆಶ್ರಯ ಒದಗಿಸಲಾಗಿದೆ.

ರಾತ್ರಿಯಿಡೀ ಸುರಿದ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ-4ರ ಪಕ್ಕದಲ್ಲಿರುವ ಎಸ್‌ಎಸ್‌ ಹೈಟೆಕ್‌ ಆಸ್ಪತ್ರೆ, ಶಿವಕುಮಾರ ಸ್ವಾಮಿ ಬಡಾವಣೆ, ಬಾಪೂಜಿ ಆಸ್ಪತ್ರೆ, ಎಂಸಿ ಕಾಲೋನಿ ಬಿ ಬ್ಲಾಕ್‌, ನೀಲಮ್ಮನ ತೋಟ, ಎಸ್‌ಪಿಎಸ್‌ ನಗರ, ಚೌಡಾಂಬಿಕ ನಗರ, ಜಾಲಿ ನಗರ, ಆವರಗೆರೆ ದನುವಿನ ಓಣಿ, ಚಿಕ್ಕನಹಳ್ಳಿ ಹಳ್ಳದ ಪಕ್ಕದ ಬೆಂಕಿ ನಗರ, ಎಸ್‌. ಎಂ. ಕೃಷ್ಣ ನಗರ, ಭಾರತ್‌ ಕಾಲೋನಿ, ಹೊಳೆಹೊನ್ನೂರು ತೋಟದ ಮನೆಗಳಿಗೆ ನೀರು ನುಗ್ಗಿದೆ.

ಇದೇ ರೀತಿ ರಾಜ್ಯ ಸಾರಿಗೆ ಬಸ್‌ ನಿಲ್ದಾಣ, ಅಗ್ನಿಶಾಮಕ ದಳದ ಕಚೇರಿ ಸಂಪೂರ್ಣ ಜಲಾವೃತಗೊಂಡಿದ್ದವು. ಅಗ್ನಿಶಾಮಕ ದಳದ ಕಚೇರಿ ಆವರಣದಲ್ಲಿ ತುಂಬಿದ್ದ ನೀರು ಹೊರ ತೆಗೆಯಲು ಸೋಮವಾರ ಸಂಜೆಯವರೆಗೆ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯನಿರತವಾಗಿತ್ತು. ಈ ಕಾರ್ಯಕ್ಕೆ ಹಾವೇರಿಯಿಂದ ಸಿಬ್ಬಂದಿ ಕರೆಸಿ, ಮೋಟಾರ್‌ಪಂಪ್‌ ಬಳಸಿ ನೀರು ಹೊರಹಾಕಲಾಯಿತು. 

ಎಪಿಎಂಸಿ ಪಕ್ಕ, ಚಿಕ್ಕನಹಳ್ಳಿ ಹಳ್ಳದ ದಡದ ಮೇಲಿನ ಬೆಂಕಿನಗರವಂತೂ ಸಂಪೂರ್ಣ ಜಲಾವೃತವಾಗಿತ್ತು. ರಾತ್ರಿಯೇ ಇಲ್ಲಿನ ಜನ ತಮ್ಮ ಮನೆ ಬಿಟ್ಟು ಎಪಿಎಂಸಿಯ ಗೋದಾಮಿನಲ್ಲಿ ಆಶ್ರಯ ಪಡೆದರು. 

ಇನ್ನು ಭಾರತ್‌ ಕಾಲೋನಿ ಸ್ಥಿತಿ ಸಹ ಇದೇ ಆಗಿತ್ತು. ಇನ್ನು ಆಶ್ರಯ ಬಡಾವಣೆಗಳಲ್ಲಿನ ಸ್ಥಿತಿಯಂತೂ ಹೇಳತೀರದಾಗಿತ್ತು. ಮೊದಲೇ ಕಪ್ಪು ಮಣ್ಣಿನ ನೆಲವಾಗಿದ್ದರಿಂದ ರಸ್ತೆಗಳು ಪೂರ್ತಿ ಗದ್ದೆಯಂತೆ ಆಗಿದ್ದವು. ಬಹುತೇಕ ಮನೆಗಳಿಗೆ ನೀರು ನುಗ್ಗಿತ್ತು. ಕೆಲ ಮನೆಗಳಲ್ಲಿ 3 ಅಡಿಯಷ್ಟು ನೀರು ನಿಂತಿದ್ದು, ಮನೆಯವರೆಲ್ಲಾ ಸೇರಿ ನೀರು ಹೊರಹಾಕಲು ಹರಸಾಹಸ ಪಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಮಳೆಯಿಂದಾಗಿ ಶಾಮನೂರು ರಸ್ತೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಸಿಮೆಂಟ್‌ ದಾಸ್ತಾನು ಮಾಡಿದ್ದ ಶೆಡ್‌ ಕುಸಿದು ಬಿದ್ದು 100 ಚೀಲ ಸಿಮೆಂಟ್‌ ನೀರು ಪಾಲಾಗಿದೆ. ಎಂಸಿಸಿ ಬಿ ಬ್ಲಾಕ್‌ನ ಪವಾರ್‌ ಹೋಟೆಲ್‌ ಬಳಿ ಯುಜಿಡಿಗೆ ತೆಗೆದಿದ್ದ ಗುಂಡಿಯಲ್ಲಿ ಎರಡು ಬೈಕ್‌ಗಳು ಬಿದ್ದು, ಎರಡೂ ಬೈಕ್‌ನಲ್ಲಿ ಸವಾರಿಮಾಡುತ್ತಿದ್ದ ಐವರು ಸಣ್ಣಪುಟ್ಟ ಗಾಯಕ್ಕೆ ತುತ್ತಾದರು.

ಇನ್ನು ಕೆಎಸ್‌ಆರ್‌ಟಿಸಿ ಬೈಕ್‌ ನಿಲ್ದಾಣದಲ್ಲಿದ್ದ ಪ್ರಯಾಣಿಕರ ದ್ವಿಚಕ್ರ ವಾಹನಗಳು ಸಂಪೂರ್ಣ ಮುಳುಗಿದ್ದರಿಂದ ಬೆಳಿಗ್ಗೆ ವಾಹನಗಳನ್ನು ಅಲ್ಲಿಂದ ಹೊರ ತೆಗೆಯುವುದೇ ಸಾಹಸವಾಗಿತ್ತು. ಹೊರ ತೆಗೆದ ವಾಹನಗಳನ್ನು ಗ್ಯಾರೇಜ್‌ವರೆಗೂ ತಳ್ಳಿಕೊಂಡೇ ಹೋದ ಮಾಲಿಕರು 300-400 ರೂ. ತೆತ್ತು ದುರಸ್ತಿ ಮಾಡಿಸಿಕೊಂಡು ತೆರಳಿದರು. ಮೆಕ್ಯಾನಿಕ್‌ಗಳು ದಿನವಿಡೀ ದಿಚಕ್ರ ವಾಹನಗಳ ದುರಸ್ತಿಯಲ್ಲಿ ನಿರತರಾಗಿದ್ದರು.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.