ಜ. 5ರವರೆಗೆ ನೀರು ಹರಿಸದಿರಿ


Team Udayavani, Nov 8, 2017, 7:29 PM IST

08-41.jpg

ದಾವಣಗೆರೆ: ಯಾವುದೇ ಕಾರಣಕ್ಕೂ 2018ರ ಜ.5 ವರೆಗೆ ಭದ್ರಾ ನಾಲೆಯಲ್ಲಿ ಹರಿಸಬಾರದು. ಒಂದೊಮ್ಮೆ ನೀರು
ಹರಿಸಿದರೆ ಹೋರಾಟ ನಡೆಸಲಾಗುವುದು ಎಂದು ಭಾರತೀಯ ರೈತ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌ ಎಚ್ಚರಿಸಿದ್ದಾರೆ.

ಈಚೆಗೆ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಹಸಿ ಇದೆ. ಮೇಲಾಗಿ ಈಗ ನೀರು ಹರಿಸುವ ಅಗತ್ಯ, ಅವಶ್ಯಕತೆ ಇಲ್ಲ. ಹಾಗಾಗಿ 2018ರ ಜ. 5ರ ನಂತರವೇ ನಾಲೆಯಲ್ಲಿ ನೀರು ಹರಿಸುವ ಮೂಲಕ 5ನೇ ಬಾರಿಗಾದರೂ ಭತ್ತ ಬೆಳೆಯುವುದಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಈ ತಿಂಗಳು, ಮುಂದಿನ ಡಿಸೆಂಬರ್‌ ನಲ್ಲಿ ನೀರು ಹರಿಸಿ, ಮುಂದಿನ ಬೇಸಿಗೆ ಭತ್ತಕ್ಕೆ ನೀರು ಕೊಡದೇ ಇರುವಂತಹ ಕೆಲಸ ಮಾಡಲೇಬಾರದು. ಆದಾಗ್ಯೂ ನ. 10 ರಿಂದ ನಾಲೆಯಲ್ಲಿ ನೀರು ಹರಿಸುವ ಬಗ್ಗೆ ಕಾಡಾ ಸಮಿತಿ ನಿರ್ಧರಿಸಿದೆ. ಒಂದೊಮ್ಮೆ ನೀರು ಹರಿಸಿದಲ್ಲಿ ಹೋರಾಟ ಮಾಡುವುದರಲ್ಲಿ ಎರಡು ಮಾತಿಲ್ಲ. ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು. 

ಮಳೆಯ ಕೊರತೆ, ಅತಿಯಾದ ಮಳೆಯ ತೊಂದರೆ ನಡುವೆಯೂ ಮೆಕ್ಕೆಜೋಳ ಬೆಳೆಯಲಾಗಿದೆ. ಈಗಾಗಲೇ ಮಾರುಕಟ್ಟೆಗೆ ಬರುತ್ತಿದೆ. ಪ್ರತಿ ಕ್ವಿಂಟಾಲ್‌ ಗೆ 1 ಸಾವಿರಕ್ಕಿಂತಲೂ ಕಡಿಮೆ ಬೆಲೆ ಇದೆ. ರೈತರಿಗೆ ಸಾಕಷ್ಟು ನಷ್ಟವಾಗುತ್ತಿದೆ. ಹಾಗಾಗಿ ರಾಜ್ಯ ಸರ್ಕಾರ ಕೇಂದ್ರದತ್ತ ಬೊಟ್ಟು ಮಾಡದೆ, ಕೂಡಲೇ ಎಲ್ಲಾ ಕಡೆ ಖರೀದಿ ಕೇಂದ್ರ ಪ್ರಾರಂಭಿಸಿ, ಮೆಕ್ಕೆಜೋಳ ಇತರೆ ಬೆಳೆ ಖರೀದಿಸಿ, ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಅಧಿಕಾರವಧಿಯಲ್ಲಿ 1 ಸಾವಿರ ಕೋಟಿ ಅನುದಾನದ ಆವರ್ತ ನಿಧಿ ಪ್ರಾರಂಭಿಸಿ, ಮೆಕ್ಕೆಜೋಳ ಇತರೆ ಬೆಳೆ ಖರೀದಿ ಮಾಡಲಾಗಿತ್ತು. ಸರ್ಕಾರ ಖರೀದಿ ಮಾಡಿದ್ದ ಬೆಳೆಯನ್ನು ಮಾರಾಟ ಮಾಡಿದ್ದರಿಂದ ಲಾಭವೂ ಸಿಕ್ಕಿತ್ತು. ಸರ್ಕಾರ ಕೂಡಲೇ ಖರೀದಿ ಕೇಂದ್ರ ಪ್ರಾರಂಭಿಸಿ, ಮೆಕ್ಕೆಜೋಳ, ಇತರೆ ಬೆಳೆ ಖರೀದಿಸಬೇಕು ಎಂದು ಒತ್ತಾಯಿಸಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರೊ| ಸಿ. ನರಸಿಂಹಪ್ಪ ಮಾತನಾಡಿ, ಭದ್ರಾ ಜಲಾಶಯದಲ್ಲಿ 140 ಅಡಿ ನೀರಿದ್ದಾಗಲೆ ಭತ್ತದ ಬೆಳೆಗೆ ಕೊಡಬೇಕು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಮಾಡಲಾಗಿತ್ತು. ಆದರೆ, ಅವರು ಸ್ಪಂದಿಸಲೇ ಇಲ್ಲ. ಕೆರೆ ತುಂಬಿಸಲಿಕ್ಕೆ, ಅಡಕೆ ತೋಟಕ್ಕೆಂದು ಈಗಾಗಲೇ ನೀರು ಹರಿಸಲಾಗಿದೆ. ಯಾವುದೇ ಸಭೆ ನಡೆಸದೆ ನ. 10 ರಿಂದ ನೀರು ಹರಿಸುವುದಕ್ಕೆ ಕಾಡಾ ಸಮಿತಿ ನಿರ್ಧರಿಸಿದೆ. ಇಂತಹ ಖಂಡನೀಯ, ಹೇಯ, ರೈತ ವಿರೋಧಿ ತೀರ್ಮಾನದ ಮೂಲಕ ಕಾಡಾ ಸಮಿತಿ ದಾವಣಗೆರೆ ಭಾಗದ ಅಚ್ಚುಕಟ್ಟುದಾರರನ್ನು ಅಕ್ಷರಶಃ ಕಾಡುತ್ತಿದೆ ಎಂದು ದೂರಿದರು.

ನವೆಂಬರ್‌, ಡಿಸೆಂಬರ್‌ನಲ್ಲಿ ನಾಲೆಯಲ್ಲಿ ನೀರು ಹರಿಸುವ ಮೂಲಕ ಈ ಬಾರಿಯೂ ಬೇಸಿಗೆ ಭತ್ತಕ್ಕೆ ನೀರು ಕೊಡದೇ ಇರುವ ಯತ್ನ ನಡೆಯುತ್ತಿದೆ. 5ನೇ ಬಾರಿಯೂ ಬೇಸಿಗೆ ಭತ್ತಕ್ಕೆ ನೀರು ಕೊಡದೇ ಇದ್ದರೆ ದಾವಣಗೆರೆ ಆರ್ಥಿಕ ಪರಿಸ್ಥಿತಿಯೇ ಅಲ್ಲೋಲ ಕಲ್ಲೋಲವಾಗಲಿದೆ. ಬೇಸಿಗೆ ಭತ್ತಕ್ಕೆ ನೀರು ಕೊಡುವ ಉದ್ದೇಶ ಮುಂದಿಟ್ಟುಕೊಂಡು ಯಾವುದೇ ಕಾರಣಕ್ಕೂ 2018 ರ ಜ. 5ರ ವರೆಗೆ ನೀರು ಹರಿಸಬಾರದು. ನೀರು ಹರಿಸದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಒಕ್ಕೂಟದ ಎಚ್‌.ಆರ್‌. ಲಿಂಗರಾಜ್‌ ಶಾಮನೂರು, ಬಿ.ಎಂ. ಸತೀಶ್‌, ಧನಂಜಯ ಕಡ್ಲೆಬಾಳು, ಕುಂದುವಾಡ ಮಹೇಶ್‌, ಶಿವರಾಜ್‌ ಪಾಟೀಲ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.