ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬಕ್ಕೆ ಎಸ್ಸೆಸ್ ತರಾಟೆ
Team Udayavani, Nov 10, 2017, 3:15 PM IST
ದಾವಣಗೆರೆ: ಪ್ರಥಮ ಹಂತದಲ್ಲೇ ದಾವಣಗೆರೆ ಸ್ಮಾರ್ಟ್ಸಿಟಿ ಯೋಜನೆಯಡಿ ಆಯ್ಕೆಯಾಗಿ ಎರಡೂವರೆ ವರ್ಷ ಕಳೆದರೂ ಕಾಮಗಾರಿ ಪ್ರಾರಂಭಿಸದೇ ಇರುವುದಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.
ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಸಚಿವ ರೋಷನ್ ಬೇಗ್ ಅಧ್ಯಕ್ಷತೆಯಲ್ಲಿ ನಡೆದ ಸ್ಮಾರ್ಟ್ಸಿಟಿ ಯೋಜನೆಯ ಅನುಷ್ಠಾನ ಮತ್ತು ವಿಮರ್ಶೆ ಕಮಿಟಿ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಅವರು, ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿ ಎರಡೂವರೆ ವರುಷವಾದರೂ ಈವರೆಗೆ ಕಾಮಗಾರಿ ಯಾವುದೇ ಆರಂಭಿಸಿಲ್ಲ. ಮೊದಲ ಹಂತದಲ್ಲೇ ದಾವಣಗೆರೆ ಸ್ಮಾಟ್ ìಸಿಟಿಗೆ ಆಯ್ಕೆಯಾದುದು ಸಂತಸ. ಆದರೆ, ಕಾಮಗಾರಿ ಆರಂಭಿಸದೇ ಅಧಿಕಾರಿಗಳು ಕೇವಲ ಸಬೂಬು ಹೇಳುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಯೋಜನೆಯಲ್ಲಿ ಸುಮಾರು 750 ಎಕರೆ ಪ್ರದೇಶ ಅಭಿವೃದ್ಧಿಯನ್ನು ಆಯೋಜಿಸಲಾಗಿದ್ದು, ಪ್ರಮುಖವಾಗಿ ರಸ್ತೆ ಮರು ನಿರ್ಮಾಣ, ಒಳಚರಂಡಿ, 24 ಗಂಟೆ ನೀರು ಸರಬರಾಜು, ಭೂಗತ ವಿದ್ಯುತ್ ತಂತಿ ಅಳವಡಿಕೆ ಸೇರಿದಂತೆ ಹಲವಾರು ಕಾಮಗಾರಿಗಳು ಪ್ರಗತಿಯಲ್ಲಿವೆ. ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳನ್ನ ಆರಂಭಿಸಲು ಪ್ರತಿ ಸಭೆಯಲ್ಲಿ ಅಧಿ ಕಾರಿಗಳಿಗೆ ನಿರ್ದೇಶನ ನೀಡಿದರೂ ಪ್ರಯೋಜನವಾಗಿಲ್ಲ. ಕಾಮಗಾರಿ ಪ್ರಾರಂಭಿಸದೇ ಇರುವುದಕ್ಕೆ ಕಾರಣವೇನು ಎಂದು ಅಧಿಕಾರಿಗಳನ್ನ ಪ್ರಶ್ನಿಸಿದರು.
ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಕಾಮಗಾರಿಗಳ ಆರಂಭಿಸದೇ ಕೇವಲ ಸಬೂಬು ಹೇಳುವುದೇ ಅಧಿಕಾರಿಗಳ ಕೆಲಸವಾಗಿದೆ. ಈ ರೀತಿಯಾದರೆ ಯೋಜನೆ ಅನುಷ್ಠಾನ ಹೇಗೆ ಸಾಧ್ಯವಾಗುತ್ತದೆ ಎಂದು ಸಚಿವ ರೋಷನ್ಬೇಗ್ ಗಮನ ಸೆಳೆದರು. 2015 ಆ. 27 ರಂದು ದಾವಣಗೆರೆ ನಗರ ಸ್ಮಾರ್ಟ್ಸಿಟಿ ಯೋಜನೆಗೆ ಆಯ್ಕೆಯಾಗಿದೆ. 2016 ರ ಮೇ. 19 ರಂದು ರೂಪುರೇಷೆ ಅಂತಿಮಗೊಂಡಿತು. 2017 ರ ಜ. 2 ರಂದು ಹೈಡೆಕ್ ಸಂಸ್ಥೆಯವರಿಗೆ ಯೋಜನೆ ಅನುಷ್ಠಾನಕ್ಕೆ ಏಜೆನ್ಸಿ ನೀಡಲಾಯಿತು. ಆದರೂ ಸಹ ಇನ್ನು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿಯದೇ ಇರುವುದು ವಿಪರ್ಯಾಸ ಎಂದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಮಾನವಾಗಿ ಯೋಜನಾ ವೆಚ್ಚ ಭರಿಸುತ್ತಿದ್ದು ಕಾಮಗಾರಿಗಳು ಉತ್ತಮ ಗುಣಮಟ್ಟ ಕಾಯ್ದು ಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಬೇಕು ಎಂದರು. ಮೇಯರ್ ಅನಿತಾಬಾಯಿ, ಪಾಲಿಕೆ ಸದಸ್ಯ ದಿನೇಶ್ ಕೆ. ಶೆಟ್ಟಿ, ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಅನಿರುದ್ಧ್ ಶ್ರವಣ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಮಹಾನಗರ ಪಾಲಿಕೆ ಆಯುಕ್ತ ಬಿ.ಎಚ್. ನಾರಾಯಣಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಆದಪ್ಪ, ನಗರಪಾಲಿಕೆ ಅಧೀಕ್ಷಕ ಅಭಿಯಂತರ ಎಂ.
ಸತೀಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ