ಪ್ರಗತಿಗೆ ಕಾನೂನು ಅರಿವು ಮುಖ್ಯ


Team Udayavani, Nov 10, 2017, 3:21 PM IST

10-29.jpg

ದಾವಣಗೆರೆ: ಪ್ರತಿಯೊಬ್ಬರಿಗೂ ಕಾನೂನು ಸವಲತ್ತು ನೀಡುವ, ಕಾನೂನು ಅರಿವು ಮೂಡಿಸುವ ಜವಾಬ್ದಾರಿ ನ್ಯಾಯಾಲಯ, ವಕೀಲರದ್ದು ಎಂದು ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯದ ನ್ಯಾಯಾಧೀಶರಾದ ಎಂ. ಶ್ರೀದೇವಿ ಹೇಳಿದ್ದಾರೆ.

ಗುರುವಾರ ರಾ.ಲ. ಕಾನೂನು ಕಾಲೇಜಿನಲ್ಲಿ ಕಾನೂನು ಸೇವಾ ದಿನಾಚರಣೆ ಉದ್ಘಾಟಿಸಿ, ಮಾತನಾಡಿದ ಅವರು, ಕಾನೂನು ಅರಿವು-ಜಾಗೃತಿ ಮೂಡಿಸುವ ಜೊತೆಗೆ ಪ್ರತಿಯೊಬ್ಬರಿಗೂ ಕಾನೂನು ಸವಲತ್ತು, ನೆರವು ಸಿಗುವಂತೆ ಮಾಡುವುದು ನ್ಯಾಯಾಲಯ, ವಕೀಲರ ಕೈಯಲ್ಲಿದೆ ಎಂದರು. ದೇಶ ಎಲ್ಲಾ ರಂಗದಲ್ಲಿ ಪ್ರಗತಿ ಸಾಧಿಸಬೇಕಾದರೆ ಕಾನೂನು ಅರಿವು ಮುಖ್ಯ. ಈ ನಿಟ್ಟಿನಲ್ಲಿ ಪ್ರತೀ ಮನೆ ಬಾಗಿಲಿಗೆ ಕಾನೂನು ಅರಿವು ಮೂಡಿಸುವ ಹೊಣೆಗಾರಿಕೆ ನ್ಯಾಯಾಂಗ, ವಕೀಲರ ಮೇಲಿದೆ ಎಂದ ಅವರು, ಇಂದು ದೇಶದಲ್ಲಿ ಲಿಂಗಾನುಪಾತ ಅಂತರ ಇದೆ. ಇದಕ್ಕೆ ಭ್ರೂಣಹತ್ಯೆ ಪ್ರಮುಖ ಕಾರಣವಾಗಿದೆ. ಭ್ರೂಣ ಹತ್ಯೆಗೆ ಕಾರಣವಾಗಿರುವುದು ಜನರಲ್ಲಿ ಇರುವ ಜಾಗೃತಿ ಕೊರತೆ ಜೊತೆಗೆ ಕಾನೂನಿನಲ್ಲಿರುವ ಶಿಕ್ಷೆ ಕುರಿತು ತಿಳಿವಳಿಕೆ ಇಲ್ಲದ್ದು. ಸಂವಿಧಾನ ಸರ್ವರಿಗೂ ಸಮಬಾಳು, ಸಮ ಪಾಲು ಎಂದು ಹೇಳುತ್ತದೆ. ಆದರೆ, ಇದುವರೆಗೆ ಆಶಯ ಈಡೇರಿಲ್ಲ. ಸಾಮಾಜಿಕ ನ್ಯಾಯದ ಪರಿಕಲ್ಪನೆ ಈವರೆಗೆ ಜಾರಿಯಾಗಿಲ್ಲ.
ಸ್ತ್ರಿ, ಮಕ್ಕಳ ಮೇಲಿನ ದೌರ್ಜನ್ಯ ಇದುವರೆಗೆ ತಡೆಯಲಾಗಿಲ್ಲ ಎಂದು ಅವರು ಹೇಳಿದರು. 

ಇದೀಗ ಮನೆ ಮನೆಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವ ಉದ್ದೇಶ ಎಲ್ಲರಿಗೂ ಕಾನೂನು ಮಾಹಿತಿ ತಲುಪಬೇಕು. ಸರ್ಕಾರದಿಂದ ಕಾನೂನಾತ್ಮಕವಾಗಿ ಸಿಗುವ ಸವಲತ್ತುಗಳನ್ನು ಕೊಡಿಸಿಕೊಡಬೇಕು. ಶೋಷಣೆಗೆ ಒಳಗಾದವರಿಗೆ  ಅಗತ್ಯವಿರುವ ಕಾನೂನು ಸವಲತ್ತು ನೀಡಬೇಕು. ಆ ಮೂಲಕ ಸುಸ್ಥಿರ ಸಮಾಜ ನಿರ್ಮಾಣ ಮಾಡಬೇಕೆಂಬುದಾಗಿದೆ
ಎಂದು ಅವರು ತಿಳಿಸಿದರು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್‌.ಎಚ್‌. ಅರುಣ್‌ಕುಮಾರ್‌ ಮಾತನಾಡಿ, ಕಾನೂನು ಕಾಲೇಜು,
ನ್ಯಾಯಾಲಯಗಳು ಒಂದೇ ನಾಣ್ಯದ ಎರಡು ಮುಖ ಇದ್ದಂತೆ. ಎರಡೂ ಸಂಸ್ಥೆಗಳು ಸೇರಿಕೊಂಡು ದೇಶಾದ್ಯಂತ ಕಾನೂನು ಅರಿವು ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ಕೆ 50 ವಿದ್ಯಾರ್ಥಿಗಳನ್ನು ಮನೆ ಮನೆಗೆ ತೆರಳಿ ಕಾನೂನು ಅರಿವು ಮೂಡಿಸಲು ಬಳಕೆ  ಮಾಡಿಕೊಳ್ಳಲಾಗುತ್ತಿದೆ. ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಗುರುತಿಸಿ, ನೀಡಿರುವುದು ಶ್ಲಾಘನೀಯ ಎಂದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆಂಗಬಾಲಯ್ಯ ಮಾತನಾಡಿ, ವಾರದ ಕಾಲ ಮನೆ ಮನೆಗೆ ನಮ್ಮ ತಂಡ ತೆರಳಲಿದೆ. 7 ಗಂಪುಗಳನ್ನು ಅದಕ್ಕಾಗಿ ರಚಿಸಲಾಗಿದೆ. 10 ಜನರ ತಂಡ ಮನೆ ಮನೆಗೆ ತೆರಳಿ, ಕಾನೂನು ಅರಿವು ಮೂಡಿಸಲಿದೆ. ಯಾವುದೇ ಸಮಸ್ಯೆ ಇದ್ದರೂ ಅವರಿಗೆ ನೆರವು ನೀಡಲಿದ್ದಾರೆ. ಯಾರೂ ಸಹ ನ್ಯಾಯದಿಂದ ವಂಚಿತರಾಗಬಾರದು ಎಂಬುದು ನಮ್ಮ ಉದ್ದೇಶ ಎಂದರು.

ಪ್ರಾಂಶುಪಾಲ ಡಾ| ಬಿ.ಎಸ್‌. ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಲೋಕಿಕೆರೆ ಸಿದ್ಧಪ್ಪ, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಬಿ.ಎಲ್‌. ಜಿನಾರಾಳ್ಕರ್‌ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.