ಯುವಕರು ಸಮಾಜ ನೋಡುವ ದೃಷ್ಟಿಕೋನ ಬದಲಾಗಲಿ


Team Udayavani, Feb 7, 2018, 5:23 PM IST

2.jpg

ದಾವಣಗೆರೆ: ಪ್ರಸ್ತುತ ವಾತಾವರಣದಲ್ಲಿ ಯುವ ಜನಾಂಗ ಸಮಾಜವನ್ನ ನೋಡುವಂತಹ ದೃಷ್ಟಿಕೋನ ಬದಲಾಯಿಸಿಕೊಳ್ಳುವ ಅಗತ್ಯತೆ ಇದೆ ಎಂದು ಖ್ಯಾತ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ್‌(ಚಂಪಾ) ಅಭಿಪ್ರಾಯಪಟ್ಟಿದ್ದಾರೆ.

ತೋಳಹುಣಸೆಯ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಆರೋಗ್ಯಕರ ಸಮಾಜ ನಿರ್ಮಾಣ ಮತ್ತು ವೈಚಾರಿಕತೆ… ವಿಷಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯುವಜನತೆಯಲ್ಲಿ ಸಮಾಜವನ್ನು ನೋಡುವಂತಹ ದೃಷ್ಟಿಕೋನ ಬದಲಾಗಲೇಬೇಕು ಎಂದು ಪ್ರತಿಪಾದಿಸಿದರು. ಯುವಜನಾಂಗದಲ್ಲಿ ಪ್ರಶ್ನೆ ಮಾಡುವ ಮನೋಭಾವ ಬೆಳೆಸುವ ಮೂಲಕ ಆರೋಗ್ಯಕರ
ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಣದ ಪಾತ್ರ ಅತಿ ಮುಖ್ಯ. ಅಸಮಾನತೆ, ಜಾತಿಪದ್ದತಿಯಿಂದಾಗಿ ಸಾಮಾಜಿಕ ನ್ಯಾಯ ಕಳೆದೇ ಹೋಗಿದೆ. ಇಂತಹ  ಸಮಾಜದಲ್ಲಿರುವ ಯುವಜನತೆ, ಇರುವಂತಹವ್ಯವಸ್ಥೆಯನ್ನು ಒಪ್ಪಿಕೊಳ್ಳುವ ಮೂಢರಾಗದೇ ಪ್ರಶ್ನಿಸುವ ಮತ್ತು ಸರಿ -ತಪ್ಪು ಆಲೋಚಿಸುವ
ಮನೋಭಾವನೆ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಬುದ್ಧ, ಬಸವಣ್ಣ, ಅಂಬೇಡ್ಕರ್‌ರಂತಹ ಮಹಾನ್‌ ವ್ಯಕ್ತಿಗಳು ಕನಸು ಕಂಡಂತಹ ಸಮಾನತೆಯ ಸಮಾಜ ಸೃಷ್ಟಿಸಲು ಸಾಧ್ಯ ಆಗುತ್ತದೆ ಎಂದು ತಿಳಿಸಿದರು.

ಯುವಶಕ್ತಿ ಒಗ್ಗಟ್ಟು ಮತ್ತು ಸಮಚಿತ್ತದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ. ಇಂದಿನ ಯುವಜನತೆ ಕೇವಲ ಶಿಕ್ಷಣವಂತರಾದರೆ ಸಾಲದು.
ಸಾಮಾಜಿಕ ಕಳಕಳಿ ಅಲ್ಪ ಮಟ್ಟದಲ್ಲಾದರೂ ಇರಬೇಕು. ಶಿಕ್ಷಣವನ್ನು ಬಳಸಿಕೊಂಡು ಸಾಮಾಜಿಕ ಸ್ವಾಸ್ಥ ಕಾಪಾಡುವಂತಹ ಪ್ರಯತ್ನ ಮಾಡಬೇಕು
ಎಂದು ತಿಳಿಸಿದರು. ಪ್ರಭಾರ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಮಾತನಾಡಿ, ಯುವಜನತೆಗೆ ಹಿರಿಯ ಸಾಹಿತಿಗಳ ವಿಚಾರಧಾರೆಗಳು ಅವಶ್ಯಕವಾಗಿವೆ. ಹಿರಿಯರ, ಮಾರ್ಗದರ್ಶಕರ ಜೀವನಾನುಭವ ಹಾಗೂ ಅವರು ಕಂಡ ಸಮಾಜವನ್ನು ತಿಳಿಯಲು ಇಂತಹ ಸಂವಾದ ಕಾರ್ಯಕ್ರಮ ಪೂರಕವಾಗಿವೆ ಎಂದು ಹೇಳಿದರು. ಕುಲಸಚಿವ(ಆಡಳಿತ) ಪ್ರೊ| ಶರಣಪ್ಪ ವೈ. ಹಲಸೆ, ಪರೀಕ್ಷಾಂಗ ಕುಲ ಸಚಿವ ಪ್ರೊ. ಗಂಗಾಧರ್‌ನಾಯ್ಕ, ಇಂಗ್ಲಿಷ್‌ ವಿಭಾಗದ ಅತಿಥಿ ಉಪನ್ಯಾಸಕ ಎ.ಎಚ್‌. ಸಾಗರ್‌, ಮಲ್ಲೇಶ್‌, ಹೇಮಾ ಇತರರು ಇದ್ದರು. 

ಸಿದ್ಧಗಂಗಾ ಶ್ರೀ, ಸುತ್ತೂರು ಶ್ರೀ ಪ್ರತ್ಯೇಕ ಧರ್ಮ ಹೋರಾಟಕ್ಕೆ ಬರಲಿ
ದಾವಣಗೆರೆ: ನಾವು ಸಹ ಬಸವಾದಿ ಶರಣ ಚಳವಳಿಯಿಂದಲೇ ಬಂದವರು ಎಂಬ ಸತ್ಯವ ಅರಿತು ವಿರಕ್ತ ಮಠಾಧೀಶರು ಸಹ ಲಿಂಗಾಯತ ಧರ್ಮದ ಹೋರಾಟದ ಆಂದೋಲನಕ್ಕೆ ಬಂದು ಸೇರಬೇಕು ಎಂದು ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ್‌ ಮನವಿ ಮಾಡಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡಿನ ಬಹು ದೊಡ್ಡ  ವಿರಕ್ತ ಮಠಾಧೀಶರಾದ ಸಿದ್ದಗಂಗೆಯ ಡಾ| ಶಿವಕುಮಾರ ಸ್ವಾಮೀಜಿ, ಸುತ್ತೂರು ಶ್ರೀಗಳು ಸಹ ಬಸವಣ್ಣನವರು ಹೇಳಿದಂತೆ ಅನ್ನ,  ಅಕ್ಷರ ದಾಸೋಹದಲ್ಲಿ ತೊಡಗಿಕೊಂಡಿದ್ದಾರೆ. ನಾವು ಸಹ ಬಸವಾದಿ ಶರಣ ಚಳವಳಿಯ
ಉತ್ಪನ್ನಗಳು ಎಂಬ ದಿಕ್ಕಿನಲ್ಲಿ ಆಲೋಚನೆ ಮಾಡಿ ಹೋರಾಟಕ್ಕೆ ಬರಬೇಕು ಎಂದರು.

ಲಿಂಗಾಯತ ಚಳವಳಿಗೆ 800 ವರ್ಷದ ಇತಿಹಾಸವೇ ಇದೆ. ಬಸವಣ್ಣನವರನ್ನ ಕೇಂದ್ರ ಬಿಂದುವಾಗಿಟ್ಟುಕೊಂಡು ಶರಣರು ಜಾತಿ, ಕುಲ, ಮತ, ಪಂಥ ಮೀರಿದ ವೈಚಾರಿಕ ಆಂದೋಲನ ನಡೆಸಿದರು. ಬಸವಣ್ಣನ ಕಾಲದ ನಂತರ ಶರಣ ಚಳವಳಿಯ ಪ್ರಭಾವ ಅಂತರ್ಗಾಮಿಯಾಗಿಯೇ ಇತ್ತು. ಕೆಲ
ಕಾಲದ ನಂತರ ವೀರಶೈವ ಪೋಷಾಕು ಧರಿಸಿ ಜನರನ್ನು ಹಾದಿ ತಪ್ಪಿಸುವ ಕೆಲಸ ನಡೆಯಿತು. ಈಗ ಮತ್ತೆ ಲಿಂಗಾಯತ ಧರ್ಮದ ಒಳ ಸತ್ಯ
ಹೊರ ಬರುತ್ತಿದ್ದು ಆಂದೋಲನದ ರೂಪ ಪಡೆಯುತ್ತಿದೆ. ವೀರಶೈವ, ಜಂಗಮರು ಸಹ ಲಿಂಗಾಯತ ಪಂಗಡದ ಅನೇಕ ಪಂಗಡಗಳಲ್ಲಿ ಒಂದು ಎಂದು ಸಮಿತಿಯ ಮುಂದೆ ದಾಖಲೆ ಹಾಜರಪಡಿಸಲಾಗುತ್ತಿದೆ. ಜಂಗಮೇತರ, ವೀರಶೈವೇತರ ಲಿಂಗಾಯತ ಧರ್ಮದ ಜನಾಂದೋಲನ ಪ್ರಾರಂಭವಾಗಿದೆ.
ಅಲ್ಪಸಂಖ್ಯಾತ ಧರ್ಮ ಮನ್ನಣೆ ಕಾನೂನು ಪ್ರಕಾರ ಬೇಕು ಎಂಬ ಹೋರಾಟ ನಡೆಯುತ್ತಿದೆ ಎಂದರು.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.